ಜನಜಾಗೃತಿಯಿಂದ ವನ್ಯಜೀವಿ ಸಂರಕ್ಷಣೆ ಸಾಧ್ಯ: ಸಚಿವ ಈಶ್ವರ ಖಂಡ್ರೆ

World Wildlife Day 2023: ಸಸ್ಯ ಶ್ಯಾಮಲಾ ಕಾರ್ಯಕ್ರಮದಲ್ಲಿ ಈವರೆಗೆ 5 ಲಕ್ಷ ಸಸಿಗಳನ್ನು ಸರ್ಕಾರಿ ಶಾಲೆಯ ಆವರಣ ಮತ್ತು ಸುತ್ತಮುತ್ತ ನೆಡಲಾಗಿದೆ. ಮಕ್ಕಳಿಗೆ ಅವುಗಳ ಪೋಷಣೆಯ ಹೊಣೆ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ.

Written by - Manjunath Hosahalli | Edited by - Puttaraj K Alur | Last Updated : Oct 9, 2023, 04:54 PM IST
  • ಅ.2-8ರವರೆಗೆ ನಡೆದ 69ನೇ ವನ್ಯಜೀವಿ ಸಪ್ತಾಹದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ
  • ಅರಣ್ಯ, ಪರಿಸರ & ವನ್ಯಜೀವಿಗಳನ್ನು ಕಾನೂನಿನಿಂದ ಮಾತ್ರ ಸಂರಕ್ಷಣೆ ಮಾಡಲು ಸಾಧ್ಯವಿಲ್ಲ
  • ಜನರ ಪಾಲ್ಗೊಳ್ಳುವಿಕೆ ಹಾಗೂ ಜನಜಾಗೃತಿ ಇದಕ್ಕೆ ಅತ್ಯಂತ ಅವಶ್ಯಕವೆಂದ ಸಚಿವ ಈಶ್ವರ್ ಖಂಡ್ರೆ
ಜನಜಾಗೃತಿಯಿಂದ ವನ್ಯಜೀವಿ ಸಂರಕ್ಷಣೆ ಸಾಧ್ಯ: ಸಚಿವ ಈಶ್ವರ ಖಂಡ್ರೆ title=
69ನೇ ವನ್ಯಜೀವಿ ಸಪ್ತಾಹ

ಬೆಂಗಳೂರು: ಅರಣ್ಯ, ಪರಿಸರ ಮತ್ತು ವನ್ಯಜೀವಿಗಳನ್ನು ಕಾನೂನಿನಿಂದ ಮಾತ್ರ ಸಂರಕ್ಷಣೆ ಮಾಡಲು ಸಾಧ್ಯವಿಲ್ಲ. ಜನರ ಪಾಲ್ಗೊಳ್ಳುವಿಕೆ ಹಾಗೂ ಜನಜಾಗೃತಿ ಇದಕ್ಕೆ ಅತ್ಯಂತ ಅವಶ್ಯಕ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 2ರಿಂದ 8ರವರೆಗೆ ನಡೆದ 69ನೇ ವನ್ಯಜೀವಿ ಸಪ್ತಾಹದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನದ ವೇಳೆ ಮಾತನಾಡಿದ ಅವರು, ‘ಜನರಲ್ಲಿ ಅರಣ್ಯ ವನ್ಯಜೀವಿಗಳ ಮಹತ್ವವನ್ನು ತಿಳಿಸುವ ಅಗತ್ಯವಿದ್ದು, ಶಾಲಾ ಮಕ್ಕಳಿಗೆ ಪಠ್ಯದಲ್ಲಿಯೇ ವನ್ಯಜೀವಿಗಳು ಮತ್ತು ಅರಣ್ಯದ ಮಹತ್ವದ ಬಗ್ಗೆ ತಿಳಿ ಹೇಳುವ ಅಗತ್ಯವಿದೆ ಎಂದರು.

ಇದನ್ನೂ ಓದಿ: ಕೃತಕ ಬುದ್ದಿಮತ್ತೆಯಿಂದ ರಸ್ತೆ ಅಪಘಾತಕ್ಕೆ ಬ್ರೇಕ್..!

ಈ ಸಪ್ತಾಹದ ಸಂದರ್ಭದಲ್ಲಿ ಹಳೆಯ ವಾಹನಗಳ ಯಾನ, ವಿವಿಧ ಸ್ಪರ್ಧೆಗಳು,  ವನ್ಯಜೀವಿಗಾಗಿ ನಡಿಗೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಮೂಲಕ ಜನರಿಗೆ ಅರಿವು ಮೂಡಿಸಲಾಯಿತು ಎಂದರು.

ಸಸ್ಯ ಶ್ಯಾಮಲಾ ಕಾರ್ಯಕ್ರಮದಲ್ಲಿ ಈವರೆಗೆ 5 ಲಕ್ಷ ಸಸಿಗಳನ್ನು ಸರ್ಕಾರಿ ಶಾಲೆಯ ಆವರಣ ಮತ್ತು ಸುತ್ತಮುತ್ತ ನೆಡಲಾಗಿದೆ. ಮಕ್ಕಳಿಗೆ ಅವುಗಳ ಪೋಷಣೆಯ ಹೊಣೆ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ.

ಇದನ್ನೂ ಓದಿ: ಕಡಿಮೆ ಹೂಡಿಕೆ ಮಾಡಿ ಲಕ್ಷ ಲಕ್ಷ ಗಳಿಸುವ ಬ್ಯುಸಿನೆಸ್ ಐಡಿಯಾ!

ಕರ್ನಾಟಕ ರಾಜ್ಯವು ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ದೇಶಕ್ಕೇ ಮಾದರಿಯಾಗುವಂತೆ ಕಾರ್ಯನಿರ್ವಹಿಸಿ ಎಂದು ಸಚಿವರು ಇದೇ ವೇಳೆ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News