12 ವರ್ಷಗೊಳಿಗೊಮ್ಮೆ ಈ ಜಾತ್ರೆ- ಎಲ್ಲರನ್ನೂ ಬಯ್ಯುವುದೇ ಇಲ್ಲಿನ ವಿಶೇಷತೆ!!

Special Jatre: ಚಾಮರಾಜನಗರ ತಾಲೂಕಿನ ಮಂಗಲ ಎಂಬ ಗ್ರಾಮದಲ್ಲಿ ಕಳೆದ 17 ರಿಂದ ಇಂದಿನ ತನಕ ಮೂರು ದಿನಗಳ ಅದ್ಧೂರಿಯಾಗಿ ಹಬ್ಬ ನಡೆಯಲಿದ್ದು ಇದು ಹಿರಿಯ ಹಬ್ಬ ಅಂಥಲೇ ಜನಪ್ರಿಯವಾಗಿದೆ.

Written by - Yashaswini V | Last Updated : Mar 19, 2024, 02:51 PM IST
  • ಹತ್ತಾರು ಸಮುದಾಯಗಳು ಈ ಗ್ರಾಮದಲ್ಲಿ ನೆಲೆಸಿದ್ದು ಎಲ್ಲರೂ ಸೇರಿ ಈ ಹಬ್ಬವನ್ನು ಆಚರಿಸಿಕೊಂಡು ಬರುತ್ತಾರೆ.
  • ಕುರುಬ ಸಮುದಾಯ ಈ ಜಾತ್ರೆಯ ಆಕರ್ಷಣೆ ಕೇಂದ್ರವಾಗಿದ್ದು ಎದುರಿಗೆ ಬಂದ ಪ್ರಮುಖರನ್ನು ಬಾಜಿ ಕಟ್ಟಿದ್ದಂತೆ ಬೈಯುತ್ತಾರೆ.
  • ಇವರ ಬೈಗುಳವನ್ನು ಕೇಳಿ ಎಲ್ಲರೂ ನಕ್ಕು ಸುಮ್ಮನಾಗಲಿದ್ದು ಇವರ ಬೈಗುಳ ಕೇಳಲೆಂದೇ ಅಕ್ಕಪಕ್ಕದ ಊರಿನ ಜನರು ಸೇರಿ ಜಾತ್ರೆಯ ಸಂಭ್ರಮವನ್ನು ಹೆಚ್ಚಿಸುತ್ತಾರೆ.
12 ವರ್ಷಗೊಳಿಗೊಮ್ಮೆ ಈ  ಜಾತ್ರೆ- ಎಲ್ಲರನ್ನೂ ಬಯ್ಯುವುದೇ ಇಲ್ಲಿನ ವಿಶೇಷತೆ!! title=

ಚಾಮರಾಜನಗರ: ಈ ಊರಲ್ಲಿ 12 ವರ್ಷಗಳಿಗೊಮ್ಕೆ ವಿಶೇಷ ಜಾತ್ರೆ ನಡೆಯಲಿದೆ. ಆದರೆ, ಎಲ್ಲಾ ಜಾತ್ರೆಗಳಂತೆ ಸಾಮಾನ್ಯವಾದ ಜಾತ್ರೆ ಇದಾಗಿರದೇ ಒಂದು ಸಮುದಾಯದ ಜನರು ಎಲ್ಲಾರನ್ನೂ ಬೈದು, ವಿಡಂಬನೆ ಮಾಡಿ ಹಾಸ್ಯದ ಹೊನಲು ಹರಿಸುವುದೇ ಈ ಜಾತ್ರೆ ಸ್ಪೆಷಲ್.

ಹೌದು..., ಚಾಮರಾಜನಗರ ತಾಲೂಕಿನ ಮಂಗಲ ಎಂಬ ಗ್ರಾಮದಲ್ಲಿ ಕಳೆದ 17 ರಿಂದ ಇಂದಿನ ತನಕ ಮೂರು ದಿನಗಳ ಅದ್ಧೂರಿಯಾಗಿ ಹಬ್ಬ ನಡೆಯಲಿದ್ದು ಇದು ಹಿರಿಯ ಹಬ್ಬ ಅಂಥಲೇ ಜನಪ್ರಿಯವಾಗಿದೆ.

ಇದನ್ನೂ ಓದಿ- ರಾಜ್ಯದ ಈ ಭಾಗಗಳಲ್ಲಿ ಅಬ್ಬರಿಸಲಿದ್ದಾನೆ ವರುಣ !ಮೂರು ದಿನಗಳವರೆಗೆ ಎಡೆಬಿಡದೆ ಸುರಿಯಲಿದೆ ಮಳೆ ! ನೀಗುವುದೇ ಬೆಂಗಳೂರಿನ ನೀರಿನ ಬವಣೆ !

ಹತ್ತಾರು ಸಮುದಾಯಗಳು ಈ ಗ್ರಾಮದಲ್ಲಿ ನೆಲೆಸಿದ್ದು ಎಲ್ಲರೂ ಸೇರಿ ಈ ಹಬ್ಬವನ್ನು ಆಚರಿಸಿಕೊಂಡು ಬರುತ್ತಾರೆ. ಕುರುಬ ಸಮುದಾಯ ಈ ಜಾತ್ರೆಯ ಆಕರ್ಷಣೆ ಕೇಂದ್ರವಾಗಿದ್ದು ಎದುರಿಗೆ ಬಂದ ಪ್ರಮುಖರನ್ನು, ಊರಿನ ಮುಖಂಡರನ್ನು ಅಶ್ಲೀಲವಾಗಿ, ಕೊಂಕು, ವಿಡಂಬನೆಯಿಂದ  ಬಾಜಿ ಕಟ್ಟಿದ್ದಂತೆ ಬೈಯುತ್ತಾರೆ. ಇವರ ಬೈಗುಳವನ್ನು ಕೇಳಿ ಎಲ್ಲರೂ ನಕ್ಕು ಸುಮ್ಮನಾಗಲಿದ್ದು ಇವರ ಬೈಗುಳ ಕೇಳಲೆಂದೇ ಅಕ್ಕಪಕ್ಕದ ಊರಿನ ಜನರು ಸೇರಿ ಜಾತ್ರೆಯ  ಸಂಭ್ರಮವನ್ನು ಹೆಚ್ಚಿಸುತ್ತಾರೆ. 

ಮಂಗಲ ಗ್ರಾಮದ ವಿಪ್ರ ಮುಖಂಡರಾದ ಶ್ರೀಕಂಠಮೂರ್ತಿ ಹಾಗೂ ಉಪ್ಪಾರ ಸಮುದಾಯದ ಯಜಮಾನತಾದ ಕ್ಯಾತಶೆಟ್ಟಿ ಈ ಕುರಿತು ಮಾತನಾಡಿ, ಶತಮಾನಗಳಿಂದಲೂ ಈ ಹಿರಿಯ ಹಬ್ಬ ಆಚರಣೆಯಲ್ಲಿದ್ದು ಬೀರೇಶ್ವರ ಸ್ವಾಮಿ ಉತ್ಸವ ಹಾಗೂ ಓಕುಳಿ ಆಡಲಿದ್ದಾರೆ. ಎಲ್ಲಾ ಸಮುದಾಯವೂ ಈ ಜಾತ್ರೆಯಲ್ಲಿ ಪಾಲ್ಗೊಂಡು ಸಹಬಾಳ್ವೆಗೆ ಮುನ್ನುಡಿ ಬರೆಯಲಿದ್ದು ಕುರುಬ ಸಮುದಾಯ ಈ ಹಬ್ಬಕ್ಕೆ ಮತ್ತಷ್ಟು ರಂಗು ತುಂಬಲಿದ್ದಾರೆ. ಆ ಸಮುದಾಯ ಮಾತ್ರ ಈ ಬೈಗುಳದಲ್ಲಿ ಪಾಲ್ಗೊಳ್ಳಬೇಕು, ಅವರು ಮಾತ್ರ ಬೈಯ್ಯಲಿದ್ದು ಒಂದು ರೀತಿ ಮನರಂಜನೆಯಾಗಿಯೂ ಇದು ಕಾಣಲಿದೆ ಎಂದರು.

ಇದನ್ನೂ ಓದಿ- ಬಿಜೆಪಿ ಅಭ್ಯರ್ಥಿ ಬಾಲರಾಜ್ ಗೆ ಬೆಂಬಲ‌ ಘೋಷಿಸಿದ ಸಂಸದ ಶ್ರೀನಿವಾಸಪ್ರಸಾದ ಅಳಿಯ

ಒಟ್ಟಿನಲ್ಲಿ ಜಾತ್ರೆ ಎಂದರೆ ಕೇವಲ ಉತ್ಸವ ಮಾತ್ರ ನಡೆಯುವುದು ಸಾಮಾನ್ಯ. ಆದರೆ, ವಾಚಮಗೋಚರವಾಗಿ ಬೈಯ್ಯುವುದು ಕೂಡ ಇದರ ಭಾಗವಾಗಿರುವುದು ವಿಶೇಷವೇ ಆಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News