ICC T20 World Cup 2024: ವಿರಾಟ್, ಹಾರ್ದಿಕ್, ರಿಂಕು, ದುಬೆ ಯಾರಿಗೂ ತಂಡದಲ್ಲಿ ಸ್ಥಾನ ಇಲ್ಲ!

ICC T20 World Cup 2024: ಟಿ-20 ವಿಶ್ವಕಪ್ ಜೂನ್ 2 ರಿಂದ ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಆತಿಥ್ಯದಲ್ಲಿ ನಡೆಯಲಿದೆ.  

Written by - Nitin Tabib | Last Updated : Apr 26, 2024, 03:25 PM IST
  • 2024ರ ಐಸಿಸಿ ಟಿ20 ವಿಶ್ವಕಪ್‌ಗೆ ಭಾರತೀಯ ತಂಡವನ್ನು ಮುಂದಿನ ತಿಂಗಳ ಆರಂಭದಲ್ಲಿ ಆಯ್ಕೆ ಮಾಡಲಾಗುವುದು ಎನ್ನಲಾಗಿದೆ.
  • ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಿರಿಯ ಪುರುಷರ ಆಯ್ಕೆ ಸಮಿತಿಯು
  • ಐಪಿಎಲ್ 2024 ರಲ್ಲಿ ಆಟಗಾರರ ಪ್ರದರ್ಶನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ
ICC T20 World Cup 2024: ವಿರಾಟ್, ಹಾರ್ದಿಕ್, ರಿಂಕು, ದುಬೆ ಯಾರಿಗೂ ತಂಡದಲ್ಲಿ ಸ್ಥಾನ ಇಲ್ಲ! title=

T20 World Cup 2024 Indian Squad: ಐಪಿಎಲ್ 2024 ಮುಕ್ತಾಯದ ಬೆನ್ನಲ್ಲೇ ಐಸಿಸಿ ಟಿ20 ವಿಶ್ವಕಪ್ ಆರಂಭಗೊಳ್ಳಲಿದೆ. ಈ ಐಸಿಸಿ ಪಂದ್ಯಾವಳಿಯ ಆತಿಥ್ಯವನ್ನು ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ವಹಿಸಲಿದೆ. ಏತನ್ಮಧ್ಯೆ, ಈ ಬಾರಿಯ ವಿಶ್ವಕಪ್‌ಗೆ ಭಾರತ ತಂಡದಲ್ಲಿ ಯಾರು ಸ್ಥಾನ ಪಡೆಯುತ್ತಾರೆ ಮತ್ತು ತಂಡದಿಂದ ಯಾರು ಹೊರಗುಳಿಯುತ್ತಾರೆ ಎಂಬುದು ಎಲ್ಲರ ಮನಸ್ಸಿನಲ್ಲಿರುವ ಪ್ರಶ್ನೆಯಾಗಿದೆ. ಏಕೆಂದರೆ, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಹಲವು ಆಟಗಾರರು ತನ್ನ ಉತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ.

2024ರ ಐಸಿಸಿ ಟಿ20 ವಿಶ್ವಕಪ್‌ಗೆ ಭಾರತೀಯ ತಂಡವನ್ನು ಮುಂದಿನ ತಿಂಗಳ ಆರಂಭದಲ್ಲಿ ಆಯ್ಕೆ ಮಾಡಲಾಗುವುದು ಎನ್ನಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಿರಿಯ ಪುರುಷರ ಆಯ್ಕೆ ಸಮಿತಿಯು ಐಪಿಎಲ್ 2024 ರಲ್ಲಿ ಆಟಗಾರರ ಪ್ರದರ್ಶನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಟಿ 20 ವಿಶ್ವಕಪ್‌ಗೆ ತಂಡವನ್ನು ಆಯ್ಕೆ ಮಾಡುವಾಗ, ಆಯ್ಕೆದಾರರು ಇದನ್ನು ಕೂಡ ಗಮನಿಸಲಿದ್ದು. ಆಟಗಾರರ ಪ್ರಸ್ತುತ ಫಾರ್ಮ್ ಮೇಲೆ ಕಣ್ಣು ಇಟ್ಟಿದ್ದಾರೆ.

ಭಾರತ ತಂಡದ ಮಾಜಿ ಆಟಗಾರಸಂಜಯ್ ಮಂಜ್ರೇಕರ್ ತಯಾರಿಸಿರುವ 15 ಸದಸ್ಯರ ಪಟ್ಟಿಯಲ್ಲಿ ತಂಡದಲ್ಲಿ ವಿರಾಟ್ ಕೊಹ್ಲಿ ಅಥವಾ ರಿಂಕು ಸಿಂಗ್ ಅಥವಾ ಹಾರ್ದಿಕ್ ಪಾಂಡ್ಯ ಅವರನ್ನು ಅವರು ಪಟ್ಟಿ ಮಾಡಿಲ್ಲ. ಅವರ 15 ಆಟಗಾರರ ಪಟ್ಟಿಯಲ್ಲಿ ಕೇವಲ ಆರು ಸ್ಪೆಷಲಿಸ್ಟ್ ಬ್ಯಾಟ್ಸ್‌ಮನ್‌ಗಳಿದ್ದರೆ, ಒಬ್ಬನೇ ಆಲ್‌ರೌಂಡರ್ ದ್ದಾನೆ. ಇದಲ್ಲದೇ ಎಂಟು ಮಂದಿ ಸ್ಪೆಷಲಿಸ್ಟ್ ಬೌಲರ್‌ಗಳಿದ್ದಾರೆ. ಸಂಜಯ್ ಮಂಜ್ರೇಕರ್ ಅವರ ಈ ತಂಡವನ್ನು ನೋಡಿ ಅಭಿಮಾನಿಗಳು ಅವರನ್ನು ಭಾರಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ-ICC T20 World Cup 2024: "ನಾನು ಟಿ20 ವಿಶ್ವ ಕಪ್ ನಲ್ಲಿ ಆಡುವುದಿಲ್ಲ", ವಿಂಡೀಸ್ ತಂಡಕ್ಕೆ ಮರಳಲು ನಿರಾಕರಿಸಿದ ದಿಗ್ಗಜ ಆಲ್ ರೌಂಡರ್!

ಸಂಜಯ್ ಮಂಜ್ರೇಕರ್ ಅವರ 15 ಸದಸ್ಯರ ತಂಡದಲ್ಲಿ 7 ಪ್ರಮುಖ ಬೌಲರ್‌ಗಳಿದ್ದಾರೆ. ಇದರಲ್ಲಿ 5 ವೇಗಿಗಳು ಮತ್ತು ಇಬ್ಬರು ಸ್ಪಿನ್ನರ್‌ಗಳಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಹೊರತುಪಡಿಸಿ, ವೇಗದ ಬೌಲರ್‌ಗಳ ಹೆಸರುಗಳಲ್ಲಿ ಅವೇಶ್ ಖಾನ್, ಹರ್ಷಿತ್ ರಾಣಾ ಮತ್ತು ಮಯಾಂಕ್ ಯಾದವ್ ಶಾಮೀಲಾಗಿದ್ದಾರೆ. ಮಯಾಂಕ್ ಮತ್ತು ಹರ್ಷಿತ್ ಇನ್ನೂ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿಲ್ಲ. ಅವರು ಸ್ಪಿನ್ನರ್ ಬೌಲರ್‌ಗಳಲ್ಲಿ ಕುಲದೀಪ್ ಯಾದವ್ ಮತ್ತು ಯುಜ್ವೇಂದ್ರ ಚಹಾಲ್ ಅವರನ್ನು ಸೇರಿಸಿದ್ದಾರೆ. ಇವರಿಬ್ಬರೂ ಟಿ20 ವಿಶ್ವಕಪ್‌ನಲ್ಲಿ ಭಾರತ ಪರ ಯಾವುದೇ ಪಂದ್ಯವನ್ನು ಆಡಿಲ್ಲ.

ಇದನ್ನೂ ಓದಿ-IPL 2024: ಅಂಪೈರ್ ವಿರುದ್ಧ ಕೆಂಡಾಮಂಡಲವಾದ KL Rahul, ತಿಳಿ ಹೇಳಲು ಕೈ....! Watch Video

ಸಂಜಯ್ ಮಂಜ್ರೇಕರ್ ಅವರ 15 ಸದಸ್ಯರ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಆವೇಷ್ ಖಾನ್,  ಮೊಹಮ್ಮದ್ ಸಿರಾಜ್, ಮಯಾಂಕ್ ಯಾದವ್, ಕೃನಾಲ್ ಪಾಂಡ್ಯ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News