ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ಮಟ್ಟ ಹೆಚ್ಚಾಗುತ್ತಿದ್ದು, "ಜನರು ಉಸಿರಾಡಲು ತೊಂದರೆ ಎದುರಿಸುತ್ತಿದ್ದಾರೆ. ಮಾಲಿನ್ಯದಿಂದ ಮಕ್ಕಳಿಗೆ ತೊಂದರೆಯಾಗದಂತೆ ನಿಗಾ ವಹಿಸಲು ಖಾಸಗಿ ಮತ್ತು ಸರ್ಕಾರಿ ಶಾಲೆಯ ಪ್ರತಿ ವಿದ್ಯಾರ್ಥಿಗೂ ಎರಡು 'ಮಾಸ್ಕ್'ಗಳನ್ನು ವಿತರಿಸುತ್ತಿದ್ದೇವೆ" ಎಂದು ಶಾಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸುವಾಗ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು.
ಹೆಚ್ಚುತ್ತಿರುವ ವಾಯು ಮತ್ತು ಶಬ್ದ ಮಾಲಿನ್ಯದ ಮಧ್ಯೆ ಪಟಾಕಿ ಮುಕ್ತ ದೀಪಾವಳಿಯನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಶನಿವಾರದಿಂದ ದೆಹಲಿಯ ಕನಾಟ್ ಪ್ಲೇಸ್ನಲ್ಲಿ ಮೊದಲ ರೀತಿಯ ಮೆಗಾ ನಾಲ್ಕು ದಿನಗಳ ಲೇಸರ್ ಲೈಟ್ ಶೋ ಆಯೋಜಿಸಲಾಗುವುದು ಎಂದು ಹೇಳಲಾಗಿದೆ.
ದೆಹಲಿ ಸರ್ಕಾರವು ಒಟ್ಟು 45 ಕಿ.ಮೀ ವಿಸ್ತಾರದ ಕನಿಷ್ಠ ಒಂಬತ್ತು ರಸ್ತೆಗಳನ್ನು ಮರುವಿನ್ಯಾಸಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಪ್ರಕಟಿಸಿದ್ದಾರೆ. ರಸ್ತೆಗಳನ್ನು ಅಂತರರಾಷ್ಟ್ರೀಯ ಮಾನದಂಡಗಳೊಂದಿಗೆ ಮರುವಿನ್ಯಾಸಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ವಿದೇಶಾಂಗ ಇಲಾಖೆ ತಿರಸ್ಕಾರದ ನಡುವೆಯೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಡೆನ್ಮಾರ್ಕ್ ನ 'ಕೋಪನ್ ಹ್ಯಾಗನ್ ಸಿ 40' ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರಕ್ಕೆ ಈಗ ತಿರುಗೇಟು ನೀಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಡೆನ್ಮಾರ್ಕ್ನಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅನುಮತಿ ನಿರಾಕರಿಸಿರುವ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಎನ್ಆರ್ಸಿಯನ್ನು ದೆಹಲಿಯಲ್ಲಿ ಜಾರಿಗೆ ತರಬೇಕು. ದೆಹಲಿಯಲ್ಲಿ ಎನ್ಆರ್ಸಿ ಜಾರಿಗೆ ಬಂದರೆ ಮನೋಜ್ ತಿವಾರಿ ಅವರೇ ಮೊದಲು ಹೊರಹೋಗಬೇಕಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 'ಬಾಡಿಗೆದಾರರ ವಿದ್ಯುತ್ ಮೀಟರ್ ಯೋಜನೆ' ಅನ್ನು ಬುಧವಾರ ಪ್ರಾರಂಭಿಸಿದರು. ಈ ಯೋಜನೆಯಡಿ ದೆಹಲಿಯಲ್ಲಿ ವಾಸಿಸುವ ಬಾಡಿಗೆದಾರರು ಸಹ ಪ್ರಿಪೇಯ್ಡ್ ಮೀಟರ್ ಪಡೆಯಲು ಸಾಧ್ಯವಾಗುತ್ತದೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮುಂಚೆಯೇ ದೆಹಲಿ ಕ್ಯಾಬಿನೆಟ್ 2019 ರ ಅಕ್ಟೋಬರ್ 29 ರಿಂದ ದೆಹಲಿಯ ಎಲ್ಲಾ ಸಾರಿಗೆ ನಿಗಮ ಮತ್ತು ಕ್ಲಸ್ಟರ್ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸರ್ಕಾರದ ಉಚಿತ ಕೋಚಿಂಗ್ ಯೋಜನೆಯು ಭಾರತೀಯ ಇನ್ಸ್ಟಿಟ್ಯೂಟ್ ಟೆಕ್ನಾಲಜಿ ಪ್ರವೇಶ ಪರೀಕ್ಷೆಯನ್ನು ಪಾಸಾಗಲು ಟೈಲರ್ ಮಗನಿಗೆ ಸಹಾಯ ಆಗಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.
ಅಜಯ್ ಮಾಕೆನ್ ತಮ್ಮ ಟ್ವೀಟ್ನಲ್ಲಿ, ರಾಜ್ಯ ಕಾಂಗ್ರೆಸ್ ಹುದ್ದೆಗೆ ರಾಜೀನಾಮೆ ನೀಡಿದಾಗಿನಿಂದ, ದೆಹಲಿಯ ರಾಜಕೀಯದೊಂದಿಗೆ ನನಗೆ ನೇರ ಸಂಪರ್ಕವಿಲ್ಲ ಆದರೆ ಜವಾಬ್ದಾರಿಯುತ ಪ್ರಜೆಯಾಗಿ, ನಾನು ನಿಮ್ಮನ್ನು ಸತ್ಯಕ್ಕೆ ಪರಿಚಯಿಸಲು ಬಯಸುತ್ತೇನೆ ಎಂದು ಬರೆದಿದ್ದಾರೆ.
ಆರ್ಥಿಕ ಕುಸಿತವನ್ನು ಎದುರಿಸಲು ಕೇಂದ್ರ ಸರ್ಕಾರ ಧೃಡವಾದ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎನ್ನುವ ಸಂಪೂರ್ಣ ನಂಬಿಕೆ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೇಶವು ಒಂದಾಗಿ ನಿಂತು ಆರ್ಥಿಕತೆಯನ್ನು ಸರಿಪಡಿಸಬೇಕಾದ ಒಂದು ಪರಿಸ್ಥಿತಿ ಇದು ಎಂದರು.
ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ 70 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದೆ ವೇಳೆ ಅವರು ಪಕ್ಷದ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿದ್ದಾರೆ.
ಹಿಂದಿನ ಶುಲ್ಕಕ್ಕೆ ಹೋಲಿಸಿದರೆ ಈಗ ಆಟೋ ನೋಂದಣಿ ಶುಲ್ಕವನ್ನು ಅರ್ಧಕ್ಕಿಂತಲೂ ಕಡಿಮೆ ಮಾಡಲಾಗಿದೆ. ಈ ಮೊದಲು ಆಟೋ ನೋಂದಣಿಗಾಗಿ ಚಾಲಕರು 1000 ರೂಪಾಯಿಗಳನ್ನು ಪಾವತಿಸಬೇಕಾಗಿತ್ತು, ಆದರೆ ಈಗ ಈ ಮೊತ್ತವನ್ನು ಕೇವಲ 300 ರೂಪಾಯಿಗೆ ಇಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.