ಕರ್ನಾಟಕ ವಿಧಾನಸಭೆಯ 222 ಸ್ಥಾನಗಳಲ್ಲಿ 165 ಸ್ಥಾನಗಳ ಪೈಕಿ ಕಾಂಗ್ರೆಸ್ 89 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಬಿಜೆಪಿ 93 ಸ್ಥಾನಗಳಲ್ಲಿ ಮತ್ತು ಜೆಡಿಎಸ್ 26 ಸ್ಥಾನಗಳ ಮುನ್ನಡೆ ಸಾಧಿಸಿದೆ. ಇತರರಲ್ಲಿ ಓರ್ವ ಒಬ್ಬ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಬಾದಾಮಿ ಹಾಗೂ ಚಾಮುಂಡೇಶ್ವರಿ ಎರಡೂ ಕ್ಷೇತ್ರಗಳಲ್ಲಿ ಹಿನ್ನೆಡೆ ಸಾಧಿಸಿದ್ದಾರೆ. ಸಿದ್ಧರಾಮಯ್ಯ ಪುತ್ರ ಯತಿಂದ್ರ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಅಕ್ರಮವಾಗಿ ಸಂಗ್ರಹಿಸಲಾಗಿದ್ದು ಸಾವಿರಾರು ಮತದಾರರ ಗುರುತಿನ ಪತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ಆ ಕ್ಷೇತ್ರದ ಮತದಾನವನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ರಾಜ್ಯದ ಸಮಸ್ಯೆಗಳನ್ನು ಚರ್ಚಿಸುವುದನ್ನು ಬಿಟ್ಟು ಇತರ ಪಕ್ಷಗಳ ಬಗ್ಗೆ ತಮ್ಮ ಆಭಿಪ್ರಾಯ ಹೇಳಲು ನರೇಂದ್ರ ಮೋದಿ ಅವರು ಇಲ್ಲಿವರೆಗೆ ಬರಬೇಕಿತ್ತಾ ಎಂದು ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.