ಮಹಾರಾಷ್ಟ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ ಶಿಶು ಸಾವಿನ ಸಂಖ್ಯೆ ಏರಿಕೆಯಾಗಿದ್ದು, 2018-19ರಲ್ಲಿ 16,539 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ರಾಜ್ಯ ಸರ್ಕಾರ ಶುಕ್ರವಾರ ವಿಧಾನಸಭೆಯಲ್ಲಿ ಹೇಳಿದೆ.
ಮಹಾರಾಷ್ಟ್ರದ ಅತ್ಯಂತ ಪ್ರಸಿದ್ದ ಪಾದರಕ್ಷೆಗಳ ಬ್ರ್ಯಾಂಡ್ ಕೊಲ್ಹಾಪುರಿ ಚಪ್ಪಲ್ಗೆ ಈಗ ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ನೀಡಲಾಗಿದ್ದು, ಇದು ದೇಶದ ಇತರ ಭಾಗಗಳಲ್ಲಿ ಮತ್ತು ವಿದೇಶಗಳಲ್ಲಿ ಮಾರಾಟವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಸುದ್ದಿ ಮೂಲಗಳ ಜನಪ್ರಿಯ ಪಾದರಕ್ಷೆಗಳ ಬ್ರಾಂಡ್ನ ಜಿಐ ಟ್ಯಾಗ್ಗೆ ಜಂಟಿಯಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಿಗೆ ಈ ಚಪ್ಪಲ್ಗಳನ್ನು ತಯಾರಿಸಲು ಅನುಮೋದನೆ ನೀಡಲಾಗಿದೆ.
ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಈಗ ಮಹಾರಾಷ್ಟ್ರದಲ್ಲಿ ಈಗ ಬಿಜೆಪಿ ಹಾಗೂ ಶಿವಸೇನೆ ನಡುವೆ ಹೊಸ ಸಮರ ಹುಟ್ಟಿಕೊಂಡಿದೆ. ಇದಕ್ಕೆ ಪೂರಕವೆನ್ನುವಂತೆ ಈಗ ಶಿವಸೇನಾ ಮುಖವಾಣಿ ಸಾಮ್ನಾ ತನ್ನ ಸಂಪಾದಕೀಯದಲ್ಲಿ ಮುಂದಿನ ಮುಖ್ಯಮಂತ್ರಿ ಶಿವಸೇನಾದಿಂದಲೇ ಎಂದು ಘೋಷಿಸಿದೆ.
ಮುಂಬರುವ ವಿಧಾನಸಭೆಯಲ್ಲಿ ಶಿವಸೇನಾ ಪಕ್ಷವು ಯುವ ಘಟಕದ ಮುಖ್ಯಸ್ಥ ಆದಿತ್ಯ ಠಾಕ್ರೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಸುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಇದೇ ಶುಕ್ರವಾರ ಅಥವಾ ಶನಿವಾರ ನಡೆಯಲಿರುವ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಮೇಲೆ ಕಣ್ಣಿಟ್ಟಿರುವ ಶಿವಸೇನೆ ಆದಿತ್ಯ ಠಾಕ್ರೆ ಅವರನ್ನು ಉಪಮುಖ್ಯಮಂತ್ರಿ ಮಾಡುವಂತೆ ಬೇಡಿಕೆ ಇಟ್ಟಿದೆ ಎಂದು ಪಕ್ಷದ ಆತಂರಿಕ ಮೂಲಗಳು ತಿಳಿಸಿವೆ.
ಬರಗಾಲದ ಹಿನ್ನಲೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಕುಡಿಯುವ ನೀರು ಬಿಡುಗಡೆಗಾಗಿ ಆಗಿದ್ದ ಒಪ್ಪಂದಕ್ಕೆ ಈಗ ಮಹಾರಾಷ್ಟ್ರ ಸ್ಪಂದಿಸುತ್ತಿಲ್ಲವೆಂದು ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 'ಬಾಹುಬಲಿ' ಇದ್ದಂತೆ ಅವರ ನಾಯಕತ್ವದಲ್ಲಿ ಎನ್ಡಿಎ ಭಾರೀ ಅಂತರದ ಗೆಲುವು ಸಾಧಿಸಲಿದೆ. ಈ ಬಾರಿ ಮಹಾರಾಷ್ಟ್ರದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.