Uttarakhand Exit Poll: ಉತ್ತರಾಖಂಡ ವಿಧಾನಸಭೆಯ 70 ಸ್ಥಾನಗಳಿಗೆ ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ. ಎಕ್ಸಿಟ್ ಪೋಲ್ ಪ್ರಕಾರ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡುವ ಲಕ್ಷಣ ಕಾಣುತ್ತಿದೆ.
Punjab Exit Poll Update 2022: ಈ ಬಾರಿ ಪಂಜಾಬ್ ನಲ್ಲಿ ಅಧಿಕಾರ ಬದಲಾವಣೆ (Punjab Assembly Election 2022) ಆಗಲಿದೆ. ಎಕ್ಸಿಟ್ ಪೋಲ್ (Punjab Exit Poll 2022) ಪ್ರಕಾರ ಈ ಬಾರಿ ಆಮ್ ಆದ್ಮಿ ಪಕ್ಷ ಬಹುಮತ ಪಡೆಯಬಹುದು. ಆಡಳಿತಾರೂಢ ಕಾಂಗ್ರೆಸ್ ಮತ್ತು ಅಮರೀಂದರ್ ಸಿಂಗ್ ಜೊತೆ ಸ್ಪರ್ಧಿಸುತ್ತಿರುವ ಬಿಜೆಪಿ ಯಾವುದೇ ಗಮನಾರ್ಹ ಲಾಭ ಗಳಿಸುವ ನಿರೀಕ್ಷೆಯಿಲ್ಲ ಎನ್ನಲಾಗುತ್ತಿದೆ.
ಗೋವಾದಲ್ಲಿ, ಪಕ್ಷವು ನಾಯಕತ್ವದ ಬಿಕ್ಕಟ್ಟಿನೊಂದಿಗೆ ನಿರಂತರವಾಗಿ ಹೋರಾಡುತ್ತಿದೆ ಮತ್ತು ಈ ಬಾರಿ ಆಮ್ ಆದ್ಮಿ ಪಕ್ಷವು ಸವಾಲುಗಳನ್ನು ಹೆಚ್ಚಿಸಿದೆ. ಎಕ್ಸಿಟ್ ಪೋಲ್ಗಳಲ್ಲಿ ಗೋವಾದಲ್ಲಿ ಯಾವ ಪಕ್ಷದ ಸರ್ಕಾರ ರಚನೆಯಾಗುತ್ತಿದೆ? ಎಂಬುವುದನ್ನ ಇಲ್ಲಿ ನೋಡಿ..
AAP-SFJ Alleged Link! ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಅವರು ಇತ್ತೀಚೆಗೆ ಕುಮಾರ್ ವಿಶ್ವಾಸ್ ಹೇಳಿಕೆಯ ಬಗ್ಗೆ ನ್ಯಾಯಯುತ ತನಿಖೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದರು.
ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಅಯೋಧ್ಯೆಯ ರಾಮ ಮಂದಿರ, ಅಜ್ಮೀರ್ ಷರೀಫ್ ಮತ್ತು ರಾಜ್ಯದಲ್ಲಿನ ವೇಲಂಕಣಿಯಲ್ಲಿ ಕ್ರಮವಾಗಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಉಚಿತ ರಾಜ್ಯ ಪ್ರಾಯೋಜಿತ ತೀರ್ಥಯಾತ್ರೆಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಾಗಿ ಮರು ಆಯ್ಕೆಯಾದರು, ಅವರು ಸತತ ಮೂರನೇ ಅವಧಿಗೆ ಈ ಸ್ಥಾನವನ್ನು ಅಲಂಕರಿಸಲಿದ್ದಾರೆ.
ನಗರದ ಚುನಾಯಿತ ಸರ್ಕಾರಕ್ಕಿಂತಲೂ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಆಧ್ಯತೆ ನೀಡುವ ವಿವಾದಾತ್ಮಕ ಮಸೂದೆಗೆ ರಾಷ್ಟ್ರಪತಿ ಕೊವಿಂದ್ ಅವರು ಭಾನುವಾರದಂದು ಅಂಕಿತ ಹಾಕಿದ್ದಾರೆ.
2016 ರಲ್ಲಿ ದಾಖಲಾದ ಪ್ರಕರಣವೊಂದರಲ್ಲಿ AIIMS ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯ ಇಂದು ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ ಭಾರತಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಇತ್ತೀಚೆಗೆ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಆಮ್ ಆದ್ಮಿ ಪಕ್ಷದ (ಎಎಪಿ ಕಾರ್ಯಕರ್ತರು ಸೋಮವಾರ ಉಪವಾಸ ಆಚರಿಸಲಿದ್ದಾರೆ ಎಂದು ದೆಹಲಿ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಸಚಿವ ಗೋಪಾಲ್ ರೈ ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಿನ್ನೆ ಪ್ರತಿಭಟನಾ ನಿರತ ರೈತರನ್ನು ಭೇಟಿಯಾದಾಗಿನಿಂದ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಮತ್ತು ಅವರ ಸಭೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಬೆಳಿಗ್ಗೆ ಆರೋಪಿಸಿದೆ. ಆದರೆ ಇದನ್ನು ದೆಹಲಿ ಪೊಲೀಸರು ನಿರಾಕರಿಸಿದ್ದಾರೆ.
ಆಮ್ ಆದ್ಮಿ ಪಕ್ಷ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದ್ದು ನಾವು ಜಾತಿ ಆಧಾರದ ಮೇಲೆ ರಾಜಕಾರಣ ಮಾಡುವುದಿಲ್ಲ ಕಾಯಕದ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ದೆಹಲಿ ಉಪ ಮುಖ್ಯಮಂತ್ರಿ, ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಹೇಳಿದರು.
ಬಿಬಿಎಂಪಿ ವಾರ್ಡ್ ಸಂಖ್ಯೆಗಳನ್ನು 250 ಕ್ಕೆ ಹೆಚ್ಚಳ ಮಾಡಲು ಶಾಸಕ ಎಸ್ ರಘು ನೇತೃತ್ವದ ಜಂಟಿ ಸಲಹಾ ಸಮಿತಿ ಶಿಫಾರಸು ಮಾಡಿದ್ದು, ಹೊಸ ವಾರ್ಡ್ಗಳ ರಚನೆ ಮತ್ತು ಚುನಾವಣೆಗೆ ಮೀಸಲಾತಿ ಮರು ನಿಗದಿ ಮಾಡಬೇಕಾಗಿರುವುದರಿಂದ ಕೂಡಲೇ ಚುನಾವಣೆ ನಡೆಸಲು ಆಗುವುದಿಲ್ಲ ಎಂಬ ಕುಂಟು ನೆಪ ಮಾಡಿಕೊಂಡಿರುವ ರಾಜ್ಯ ಸರ್ಕಾರ, ಕರ್ನಾಟಕ ಪೌರಸಭೆಗಳ ಕಾಯ್ದೆ (ಮೂರನೇ ತಿದ್ದುಪಡಿ) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದಿರುವುದು ಬಿಜೆಪಿಯವರ ಪುಕ್ಕಲುತನ ತೋರಿಸುತ್ತದೆ ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ವ್ಯಂಗ್ಯವಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.