ಡಿಡಿಎಂಎ ತನ್ನ ಆದೇಶದಲ್ಲಿ ಜಿಮ್ ತೆರೆಯಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದಾಗ, ದೆಹಲಿಯ ಪರಿಸ್ಥಿತಿಯನ್ನು ಪರಿಶೀಲಿಸಲಾಯಿತು, ಆದರೆ ಆ ಸಮಯದಲ್ಲಿ ಜಿಮ್ ತೆರೆಯಲು ಸಾಧ್ಯವಾಗಲಿಲ್ಲ. ಆದಾಗ್ಯೂ ಈಗ ಅನ್ಲಾಕ್ -4 ರ ಅಡಿಯಲ್ಲಿ ಎಲ್ಲಾ ಚಟುವಟಿಕೆಗಳನ್ನು ಕ್ರಮೇಣ ತೆರೆಯಲಾಗುತ್ತಿದೆ ಎಂದು ಹೇಳಿದೆ.
ಆಗಸ್ಟ್ ತಿಂಗಳ 6 ನೇ ತಾರೀಕಿನಂದು ಆಪ್ ಕೇರ್ ಎನ್ನುವ ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದ ಆಮ್ ಆದ್ಮಿ ಪಕ್ಷ ಪಕ್ಷ ಈಗ ಆಕ್ಸಿ ಮಿತ್ರ ಎನ್ನುವ ವಿನೂತನ ಅಭಿಯಾನಕ್ಕೆ ಚಾಲನೆ ನೀಡಿದೆ.
ಕೊರೋನಾ ನೆಪ ಮಾಡಿಕೊಂಡು ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದಂತ ಭ್ರಷ್ಟಾಚಾರ ನಡೆದಿದೆ. ಸ್ವತಃ ವೈದ್ಯರಾಗಿರುವ, ಅಲ್ಲದೇ ಅನೇಕ ವೈದ್ಯಕೀ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾಗಿರುವ ಸಿ.ಅಶ್ವಥ್ ನಾರಾಯಣ ಅವರು ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ 2 ಸಾವಿರ ಕೋಟಿಯಷ್ಟು ಭ್ರಷ್ಟಾಚಾರ ನಡೆಯಲು ಹೇಗೆ ಅನುವು ಮಾಡಿಕೊಟ್ಟರು ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ ಅವರು ವ್ಯಂಗ್ಯವಾಡಿದರು.
ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆಯ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ವರ್ಚುವಲ್ ಸಭೆ ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿದೆ.
DDMA ಸಭೆಯ ಬಳಿಕ ಮಾತನಾಡಿರುವ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕು ಪಸರಿಸುತ್ತಿರುವುದನ್ನು ಗಮನಿಸಿದರೆ, ಜೂನ್ 15ರವರೆಗೆ ದೆಹಲಿಯ ಆಸ್ಪತ್ರೆಗಳಲ್ಲಿ ಸುಮಾರು 15 ಸಾವಿರ ಹಾಸಿಗೆಗಳ ಅವಶ್ಯಕತೆ ಇರಲಿದ್ದು, ಜುಲೈ 31 ರವರೆಗೆ 80 ಸಾವಿರ ಬೆಡ್ ಗಳ ಅವಶ್ಯಕತೆ ಬೀಳಲಿದೆ, ಅಷ್ಟೇ ಅಲ್ಲ ಸೋಂಕು ಪಸರಿಸುತ್ತಿರುವ ಸದ್ಯದ ವೇಗವನ್ನು ಗಮನಿಸಿದರೆ ಜುಲೈವರೆಗೆ ದೆಹಲಿಯಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕೆ ಏರಿಕೆಯಾಗಿಅಲಿದೆ ಎಂದು ಹೇಳಿದ್ದಾರೆ.
ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ 2016 ರ ಫೆಬ್ರವರಿಯಲ್ಲಿ ನಡೆದ ಕ್ಯಾಂಪಸ್ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ ಮೆರವಣಿಗೆಯನ್ನು ಮುನ್ನಡೆಸಿದರು ಎಂದು ಆರೋಪಿಸಿ ಕನ್ಹಯ್ಯ ಕುಮಾರ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ ಸರ್ಕಾರ ಅನುಮತಿ ನೀಡಿದೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷ (ಎಎಪಿ) ದೆಹಲಿಯನ್ನು ಮೀರಿ ತನ್ನ ಅಸ್ತಿತ್ವವನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ.
ತನ್ನ ಹತ್ತಿರದ ಪ್ರತಿಸ್ಪರ್ಧಿ ಬಿಜೆಪಿಯ ಬ್ರಹ್ಮ್ ಸಿಂಗ್ಗಿಂತ 70,000 ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿರುವ ಆಮ್ ಆದ್ಮಿ ಪಕ್ಷದ ಅಮಾನತುಲ್ಲಾ ಖಾನ್, ಫಲಿತಾಂಶಗಳ ಬಗ್ಗೆ ಕೇಳಿದಾಗ "ಓಖ್ಲಾ ಕಿ ಜಂತ ನೆ ಕರೆಂಟ್ ಲಗಾ ದಿಯಾ, (ಓಖ್ಲಾ ಜನರು ಕರೆಂಟ್ ಶಾಕ್ ನೀಡಿದ್ದಾರೆ)" ಎಂದು ಅವರು ಹೇಳಿದರು.
ವ್ಯಕ್ತಿಯೊಬ್ಬರು ತಮ್ಮ ಮುದ್ದಾದ ಮಗುವಿಗೆ ದೆಹಲಿ ಮುಖ್ಯಮಂತ್ರಿ 'ಅರವಿಂದ್ ಕೇಜ್ರಿವಾಲ್' ರೀತಿ ಉಡುಪು ಧರಿಸಿದ್ದಾರೆ. ಕೇಜ್ರಿವಾಲ್ ಶೈಲಿಯಲ್ಲಿ ಮಫ್ಲರ್ ಧರಿಸಿದ ಈ ಮಗು ಎಎಪಿ ಕ್ಯಾಪ್ನಲ್ಲಿ ತುಂಬಾ ಮುದ್ದಾಗಿ ಕಾಣುತ್ತಿದೆ.
ದೆಹಲಿ ಚುನಾವಣೆಯಲ್ಲಿ ಅಂತಿಮ ಮತದಾನ ಶೇಕಡಾ 62.59 ರಷ್ಟಿದೆ ಎಂದು ಚುನಾವಣಾ ಆಯೋಗ ಭಾನುವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಮುಕ್ತಾಯಗೊಂಡ ಒಂದು ದಿನದ ನಂತರ ಪತ್ರಿಕಾಗೋಷ್ಠಿ ಬಂದಿದೆ ಮತ್ತು ಆಡಳಿತ ಪಕ್ಷವಾದ ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಗಳ ನಡುವೆ, ಚುನಾವಣಾ ಆಯೋಗ ಅಂತಿಮ ಮತದಾನದ ಶೇಕಡಾವಾರು ಘೋಷಣೆಯನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಭಾನುವಾರ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಉತ್ತಮ ಸಾಧನೆ ಮಾಡುವ ನಿರೀಕ್ಷೆಯಿಲ್ಲ ಎಂದು ಹೇಳಿದರು. ಇದೇ ವೇಳೆ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಹೊಗಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.