Asaduddin Owaisi Statement: ವೋಟ್ ಬ್ಯಾಂಕ್ ರಾಜಕಾರಣದ ಹಿನ್ನೆಲೆ ತೆಲಂಗಾಣದಲ್ಲಿ ಟಿಆರ್ಎಸ್ ಅಧಿಕೃತವಾಗಿ 'ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸುತ್ತಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಕ್ಕೆ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ.
Hijab Row: ಹಿಜಾಬ್ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್ (Karnataka High Court) ತೀರ್ಪು ನೀಡಿದ್ದು, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದೆ. ಅದರ ನಂತರ AIMIM ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಒಪ್ಪಲು ನಿರಾಕರಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ತಾವು ಒಪ್ಪುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.
UP Election Result 2022: ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ಅವರು ಬಿಜೆಪಿ, ಎಸ್ಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಗುರಿಯಾಗಿಟ್ಟುಕೊಂಡು ಚುನಾವಣೆಯಲ್ಲಿ (UP Assembly Elections 2022) ಭಾರಿ ಪ್ರಚಾರದ ಮೂಲಕ ಸ್ಪರ್ಧಿಸಿದ್ದರು. ಆದರೆ, ಗುರುವಾರ ಹೊರಬಿದ್ದ ಫಲಿತಾಂಶ ಬೇರೆ ಕಥೆಯನ್ನೇ ಹೇಳುತ್ತಿವೆ.
ಹಿಜಾಬ್ ಧರಿಸಿದ ಹುಡುಗಿ ಮುಂದೊಂದು ದಿನ ದೇಶದ ಪ್ರಧಾನಿಯಾಗುತ್ತಾಳೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಮುಸ್ಲಿಂ ಮಹಿಳೆಯರ ತಲೆ ಸ್ಕಾರ್ಫ್ ವಿವಾದದ ನಡುವೆಯೇ ಹೇಳಿದ್ದಾರೆ.
AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮುಸ್ಲಿಮರ ರಾಜಕೀಯ ಸ್ಥಿತಿಯನ್ನು ಖಂಡಿಸುತ್ತಾ ಅವರು ಮದುವೆಗಳಲ್ಲಿ 'ಬ್ಯಾಂಡ್, ಬಾಜಾ ಪಾರ್ಟಿ'ಯಂತೆ ಇದ್ದಾರೆ ಎಂದು ಹೇಳಿದ್ದಾರೆ.ಉತ್ತರ ಪ್ರದೇಶದಲ್ಲಿ ಶೇ 19% ಜನಸಂಖ್ಯೆಯನ್ನು ಹೊಂದಿದ್ದರೂ ಮುಸ್ಲಿಮರಿಗೆ ಯಾವುದೇ ಪ್ರಾತಿನಿಧ್ಯವಿಲ್ಲ ಎಂದು ವಿಷಾದಿಸಿದರು.
ಮಂಗಳವಾರ ಗುರುಗ್ರಾಮ್ (Gurgaon) ನಲ್ಲಿ ಮಾಂಸದ ಅಂಗಡಿ ಬಂದ್ ಆದೇಶಕ್ಕೆ ಟೀಕೆ ವ್ಯಕ್ತಪಡಿಸಿರುವ AIMIM ಮುಖ್ಯಸ್ಥ ಅಸದುದ್ದೀನ್ ಒವೈಸಿ, ತೀಕ್ಷ್ಟ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನು ಪ್ರಶ್ನಿಸಿರುವ ಒವೈಸಿ, ಯಾವುದೇ ವ್ಯಕ್ತಿ ತಮ್ಮ ಖಾಸಗಿ ಜೀವನದಲ್ಲಿ ಏನು ಮಾಡುತ್ತಾನೆ ಇದರಿಂದ ಬೇರೊಬ್ಬರ ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆ ಬರಲಿದೆ ಎಂದು ಪ್ರಶ್ನಿಸಿದ್ದಾರೆ.
ಎಐಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ಎಐಎಡಿಎಂಕೆ ಪಕ್ಷದ ಮೇಲೆ ಆರೋಪ ಮಾಡಿದ್ದು, ಈಗ ಈ ಪಕ್ಷ ಬಿಜೆಪಿಯ ಗುಲಾಮರಾಗಿ ಮಾರ್ಪಟ್ಟಿದೆ, ಅದು ಈಗ ಮೇಡಂ ಜಯಲಲಿತಾ ಅವರ ಪಕ್ಷವಲ್ಲ ಎಂದು ಹೇಳಿದ್ದಾರೆ.
ತೆಲಂಗಾಣ ರಾಷ್ಟ್ರೀಯ ಸಮಿತಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಮೇಯರ್ ಹುದ್ದೆಗೇರಲು ಅಸದುದ್ದೀನ್ ಒವೈಸಿ ಅವರ ಎಐಎಂಐಎಂ (AIMIM) ಪಕ್ಷದ ಬೆಂಬಲ ಪಡೆಯಲೇಬೇಕಾಗಿದೆ. ತೆಲಂಗಾಣ ರಾಷ್ಟ್ರೀಯ ಸಮಿತಿಗೆ ಎಐಎಂಐಎಂ ಬೆಂಬಲ ನೀಡದಿದ್ದರೆ ಪರಿಸ್ಥಿತಿ ಬಿಗಡಾಯಿಸಲಿದೆ.
AIMIM ಮುಖ್ಯಸ್ಥ ಅಸದುದ್ದೀನ್ ಒವೈಸಿ ಹಿಂದುತ್ವವನ್ನು ಗುರಿಯಾಗಿಸಿ ವಿವಾದಾತ್ಮಕ ಟಿಪ್ಪಣಿಯೊಂದನ್ನು ಮಾಡಿದ್ದಾರೆ. ಕೇವಲ ಒಂದೇ ಸಮುದಾಯದ ಬಳಿ ರಾಜಕೀಯ ಶಕ್ತಿ ಇರಬೇಕು ಎಂಬ ಸುಳ್ಳಿನ ಆಧಾರದ ಮೇಲೆ ಹಿಂದುತ್ವ ನಿರ್ಮಾಣಗೊಂಡಿದೆ. ಅಷ್ಟೇ ಅಲ್ಲ ತಮ್ಮ ವಿವಾದಾತ್ಮಕ ಟ್ವೀಟ್ ನಲ್ಲಿ RSS ಮೇಲೂ ಕೂಡ ಟಿಪ್ಪಣಿ ಮಾಡಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಐಎಂಐಎಂ ಮುಖ್ಯಸ್ಥ ಅಸದದ್ದುದ್ದೀನ್ ಒವೈಸಿ, ಟ್ವೀಟ್ ನಲ್ಲಿ ಶಾಯರಿಯೊಂದನ್ನು ಬರೆದುಕೊಳ್ಳುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲೀಮೀನ್ (AIMIM) ಮುಖ್ಯಸ್ಥ ಅಸದುದ್ದೀನ್ ಒವೈಸಿ ಅಯೋಧ್ಯೆಯಲ್ಲಿ ರಾಮ್ ದೇವಾಲಯದ ಭೂಮಿ ಪೂಜೆಯ ಬಗ್ಗೆ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.