Punjab election 2022: ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ಔಪಚಾರಿಕವಾಗಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.
ರಾಜ್ಯದ ಸಮಸ್ಯೆಗಳ ಕುರಿತು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಅಮರಿಂದರ್ ಸಿಂಗ್ ಇಲ್ಲಿ ಮಾಧ್ಯಮಗಳಿಗೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಇದು ಅವರೊಂದಿಗಿನ ಮೂರನೇ ಭೇಟಿಯಾಗಿದೆ.
ಪಾಕಿಸ್ತಾನದ ಪತ್ರಕರ್ತೆ ಆರೋಸಾ ಆಲಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಸ್ನೇಹಿತೆ ಎಂದು ತಿಳಿದುಬಂದಿದ್ದು, ಆಕೆಯ ಐಎಸ್ಐ ಜೊತೆಗಿನ ಸಂಪರ್ಕದ ಬಗ್ಗೆ ತನಿಖೆ ನಡೆಸಬೇಕು ಎಂದು ಪಂಜಾಬ್ ಸಚಿವರು ಹೇಳಿದ್ದಾರೆ.
ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಗುರುವಾರ ಅಮರೀಂದರ್ ಸಿಂಗ್ ಅವರನ್ನು ಕೇಂದ್ರದ ಮೂರು ಕೃಷಿ ಕಾನೂನುಗಳ ಶಿಲ್ಪಿ ಎಂದು ಕರೆದಿದ್ದಾರೆ, ಇದಕ್ಕೆ ತೀಕ್ಷ್ಣವಾಗಿ ಪ್ರರಿಕ್ರಿಯಿಸಿರುವ ಅಮರಿಂದರ್ ಸಿಧು ಅವರನ್ನು ವಂಚಕ ಮತ್ತು ಮೋಸಗಾರ ಎಂದು ಕಿಡಿ ಕಾರಿದ್ದಾರೆ.
ಈ ತಿಂಗಳ ಆರಂಭದಲ್ಲಿ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಮರಿಂದರ್ ಸಿಂಗ್ ಅವರು ತಾವು ಬಿಜೆಪಿಗೆ ಸೇರುತ್ತಿಲ್ಲ ಆದರೆ ಖಂಡಿತವಾಗಿಯೂ ಕಾಂಗ್ರೆಸ್ ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ.
Punjab Politics - ಕೇವಲ ಪಂಜಾಬ್ (Assembly Election) ಅಷ್ಟೇ ಅಲ್ಲ ಇಡೀ ದೇಶಕ್ಕೆ ಸಿಧು (Navajot Singh Sidhu) ಅಪಾಯಕಾರಿ ಎಂದು ಸಾಬೀತಾಗಿದ್ದಾರೆ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) ಅವರು ಹೇಳಿದ್ದಾರೆ. ಮೂರು ವಾರಗಳ ಹಿಂದೆಯೇ ತಾವು ಸಿಎಂ ಹುದ್ದೆಯನ್ನು ತ್ಯಜಿಸುವುದಾಗಿ ಹೇಳಿದ್ದು, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಆಗ ತಮ್ಮನ್ನು ತಡೆದಿದ್ದರು ಎಂಬುದನ್ನು ಕ್ಯಾಪ್ಟನ್ ಬಹಿರಂಗಪಡಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರನ್ನು ಅಮರೀಂದರ್ ಸಿಂಗ್ ದೇಶದ್ರೋಹಿ ಎಂದು ಕರೆದಿರುವ ಹಿನ್ನಲೆಯಲ್ಲಿ ಈಗ ಗಾಂಧಿ ಕುಟುಂಬದ ಮೌನವನ್ನು ಪ್ರಕಾಶ್ ಜಾವಡೆಕರ್ ಪ್ರಶ್ನಿಸಿದ್ದಾರೆ.
ಸುಖಜಿಂದರ್ ಸಿಂಗ್ ರಾಂಧವಾ ಅವರ ಹೆಸರನ್ನು ಬಹುಪಾಲು ಶಾಸಕರು ಪ್ರಸ್ತಾಪಿಸಿದ ನಂತರ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ. ಚಂಡೀಗಡ ಕೆಲವು ಹಿರಿಯ ನಾಯಕರು ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದ್ದಾರೆ. ಸದ್ಯಕ್ಕೆ, ಪಂಜಾಬಿನ ಮುಂದಿನ ಮುಖ್ಯಮಂತ್ರಿಯನ್ನು ನಿರ್ಧರಿಸಲು ರಾಹುಲ್ ಗಾಂಧಿಯವರ ದೆಹಲಿ ನಿವಾಸದಲ್ಲಿ ಸಭೆ ನಡೆಯುತ್ತಿದೆ.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶುಕ್ರವಾರ (ಸೆಪ್ಟೆಂಬರ್ 10, 2021) ವೈದ್ಯಕೀಯ ಹೊರತುಪಡಿಸಿ ಯಾವುದೇ ಕಾರಣಕ್ಕೂ ಕೋವಿಡ್ -19 ಲಸಿಕೆಯ ಮೊದಲ ಡೋಸ್ ತೆಗೆದುಕೊಳ್ಳಲು ವಿಫಲರಾದ ರಾಜ್ಯ ಸರ್ಕಾರಿ ನೌಕರರನ್ನು ಸೆಪ್ಟೆಂಬರ್ 15 ರ ನಂತರ ಕಡ್ಡಾಯವಾಗಿ ರಜೆಯ ಮೇಲೆ ಕಳುಹಿಸಲಾಗುವುದು ಎಂದು ಘೋಷಿಸಿದರು.
ಕರ್ನಾಲ್ನಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಹರಿಯಾಣ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಘಟನೆಯ ವಿವಾದದ ನಡುವೆ, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೋಮವಾರದಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪಂಜಾಬ್ನ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ಅವರು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಹೊಸದಾಗಿ ನೇಮಕಗೊಂಡ ಸಲಹೆಗಾರರನ್ನು ಕಾಶ್ಮೀರ ಮತ್ತು ಪಾಕಿಸ್ತಾನದ ಬಗೆಗಿನ ನಿಲುವಿನ ವಿಚಾರವಾಗಿ ವಜಾಗೊಳಿಸುವ ಸುಳಿವು ನೀಡಿದ್ದಾರೆ.
ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರೊಂದಿಗಿನ ಘರ್ಷಣೆಯ ನಂತರ ಅಂತಿಮವಾಗಿ ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿಧು ಅವರನ್ನು ಭಾನುವಾರ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.