ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ. 2000 ನೋಟುಗಳು ಹಿಂಪಡೆದ ಹಿನ್ನಲೆ ಪ್ರಧಾನಿಯಾಗಿರುವವರು ವಿದ್ಯಾವಂತರಾಗಿರಬೇಕು ಎಂದು ಹೇಳುವ ಮೂಲಕ ವ್ಯಂಗ್ಯವಾಡಿದ್ದಾರೆ.
Delhi Unlock : ರಾಷ್ಟ್ರ ರಾಜಧಾನಿಯ ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು, ನಾಳೆಯಿಂದ ಅಂದರೆ ಜೂನ್ 14ರಿಂದ ಆರ್ಥಿಕ ಚಟುವಟಿಕೆಗಳಿಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅನುಮತಿ ನೀಡಿದ್ದಾರೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು 'COVID 19 ವೈರಸ್ ಪೀಡಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಆದುದರಿಂದ ಹೆಚ್ಚುವರಿಯಾಗಿ ಹಾಸಿಗೆಗಳನ್ನು ಸಿದ್ದಮಾಡಿ ಇಟ್ಟುಕೊಂಡಿರಿ. ಜೊತೆಗೆ COVID 19 ವೈರಸ್ ತಗುಲಿ ಸಾವನ್ನಪ್ಪುವವರ ಸಂಖ್ಯೆ ಕೂಡ ಹೆಚ್ಚಾಗಲಿದೆ. ಕೊರೊನಾಕ್ಕೆ ಬಲಿಯಾದವರ ಶವಸಂಸ್ಕಾರಕ್ಕಾಗಿ ಜಾಗಗಳನ್ನು ಗುರುತಿಸಿ' ಎಂದು ಜಿಲ್ಲಾಡಳಿಗಳಿಗೆ ಪತ್ರ ಬರೆದಿದೆ.
ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆ ರಾಷ್ಟ್ರರಾಜಧಾನಿ ದೆಹಲಿಯನ್ನು ಮಾರ್ಚ್ 31ರವರೆಗೆ ಲಾಕ್ ಡೌನ್ ಮಾಡಲಾಗಿದೆ. ಮಾರ್ಚ್ 23ರ ಬೆಳಗ್ಗೆ 6ಗಂಟೆಯಿಂದ ಮಾರ್ಚ್ 31ರ ಮಧ್ಯರಾತ್ರಿಯವರೆಗೆ ದೆಃಲಿ ಲಾಕ್ ಡೌನ್ ಆಗಿರಲಿದೆ. ಅಂದರೆ, ಅತ್ಯಾವಶ್ಯಕ ವಸ್ತುಗಳನ್ನು ಹೊರತುಪಡಿಸಿ ಇತರೆ ಎಲ್ಲ ರೀತಿಯ ಸೇವೆಗಳು ಈ ಅವಧಿಯಲ್ಲಿ ಬಂದ್ ಇರಲಿವೆ.
ದೆಹಲಿ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಮಂಗಳವಾರ ದೆಹಲಿಯಲ್ಲಿ ನಡೆದಿರುವ ಮತ ಎಣಿಕೆ ಪ್ರಕ್ರಿಯೆಯ ವೇಳೆ ಮತ್ತೊಮ್ಮೆ EVM ವಿಚಾರವಾಗಿ ಹೇಳಿದೆ ನೀಡಿದ್ದಾರೆ. ಆರಂಭಿಕ ಟ್ರೆಂಡ್ಸ್ ಗಳಲ್ಲಿ ಆಮ್ ಆದ್ಮಿ ಪಕ್ಷ ಮುಂಚೂಣಿಯಲ್ಲಿ ಇದ್ದರೆ, ಭಾರತೀಯ ಜನತಾ ಪಕ್ಷ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಪಕ್ಷ ಇದುವರೆಗೆ ಒಂದೂ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿಲ್ಲ. ಈ ಸಂದರ್ಭದಲ್ಲಿ ಮಾತನಾಡಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ, 'EVM ಟ್ಯಾಂಪರ್ ಪ್ರೂಫ್ ಆಗಿಲ್ಲ ಮತ್ತು ಹಲವು ಅಭಿವೃದ್ಧಿ ಹೊಂದಿರುವ ದೇಶಗಳಲ್ಲಿ ಇವುಗಳನ್ನು ಬಳಸಲಾಗುವುದಿಲ್ಲ' ಎಂದಿದ್ದಾರೆ.
ಈ ಕುರಿತು ಮಾತನಾಡಿರುವ ಹರ್ಷಿತಾ ಕೆಜ್ರಿವಾಲ್, ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳಿಗೆ ರಾಜಕೀಯ ಮಾಡಲು ಬಿಡಿ. ನಮ್ಮ ಪರ ದೆಹಲಿಯ ಎರಡು ಕೋಟಿ ಜನರು ಪ್ರಚಾರದಲ್ಲಿ ತೊಡಗಿದ್ದಾರೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.