ಮುಂದಿನ ವಾರ ಯುಎಸ್ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ದೆಹಲಿ ಸರ್ಕಾರಿ ಶಾಲೆ ಭೇಟಿ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಅವಕಾಶವಿಲ್ಲ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ. ಕೇಜ್ರಿವಾಲ್ ಮತ್ತು ಶ್ರೀ ಸಿಸೋಡಿಯಾ ಅವರ ಹೆಸರನ್ನು ಕೇಂದ್ರ ಸರ್ಕಾರ ಈ ಕಾರ್ಯಕ್ರಮದಿಂದ ಕೈಬಿಡಲಾಗಿದೆ ಎಂದು ಪಕ್ಷದ ಮೂಲಗಳು ಆರೋಪಿಸಿವೆ.
ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಮೂರನೇ ಅವಧಿಯನ್ನು ಭಾನುವಾರ ಪ್ರಾರಂಭಿಸಿದರು.ಇದೇ ವೇಳೆ ಅಭಿವೃದ್ಧಿಯತ್ತ ಮುಂದುವರಿಯಲು ದೆಹಲಿ ನಿವಾಸಿಗಳ ಬೆಂಬಲವನ್ನು ಕೋರಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಠಿಸಿದ ‘ಹನುಮಾನ್ ಚಾಲಿಸಾ’ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸಹಾಯ ಮಾಡಿದೆ ಎಂದು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಮಂಗಳವಾರ ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಗುರಿಯಾಗುತ್ತಿದ್ದಂತೆ, ಅದರ ಮಾಜಿ ಮಿತ್ರ ಶಿವಸೇನೆ ದೆಹಲಿ ಜನರು “ಬಿಜೆಪಿಯ ವಿಭಜಕ ಮತ್ತು ದ್ವೇಷ ತುಂಬಿದ ಅಭಿಯಾನವನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತೊಮ್ಮೆ ಅಭೂತಪೂರ್ವ ಗೆಲುವಿನೊಂದಿಗೆ ಸರ್ಕಾರ ರಚಿಸುವತ್ತ ಹೆಜ್ಜೆ ಹಾಕಿದೆ. ಅದೇ ಸಮಯದಲ್ಲಿ ಭಾರಿ ನಿರೀಕ್ಷೆ ಹೊಂದಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.
ವ್ಯಕ್ತಿಯೊಬ್ಬರು ತಮ್ಮ ಮುದ್ದಾದ ಮಗುವಿಗೆ ದೆಹಲಿ ಮುಖ್ಯಮಂತ್ರಿ 'ಅರವಿಂದ್ ಕೇಜ್ರಿವಾಲ್' ರೀತಿ ಉಡುಪು ಧರಿಸಿದ್ದಾರೆ. ಕೇಜ್ರಿವಾಲ್ ಶೈಲಿಯಲ್ಲಿ ಮಫ್ಲರ್ ಧರಿಸಿದ ಈ ಮಗು ಎಎಪಿ ಕ್ಯಾಪ್ನಲ್ಲಿ ತುಂಬಾ ಮುದ್ದಾಗಿ ಕಾಣುತ್ತಿದೆ.
ದೆಹಲಿ ಚುನಾವಣೆಯಲ್ಲಿ ಅಂತಿಮ ಮತದಾನ ಶೇಕಡಾ 62.59 ರಷ್ಟಿದೆ ಎಂದು ಚುನಾವಣಾ ಆಯೋಗ ಭಾನುವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಮುಕ್ತಾಯಗೊಂಡ ಒಂದು ದಿನದ ನಂತರ ಪತ್ರಿಕಾಗೋಷ್ಠಿ ಬಂದಿದೆ ಮತ್ತು ಆಡಳಿತ ಪಕ್ಷವಾದ ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಗಳ ನಡುವೆ, ಚುನಾವಣಾ ಆಯೋಗ ಅಂತಿಮ ಮತದಾನದ ಶೇಕಡಾವಾರು ಘೋಷಣೆಯನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಭಾನುವಾರ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಉತ್ತಮ ಸಾಧನೆ ಮಾಡುವ ನಿರೀಕ್ಷೆಯಿಲ್ಲ ಎಂದು ಹೇಳಿದರು. ಇದೇ ವೇಳೆ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಹೊಗಳಿದರು.
2020 ರ ದೆಹಲಿ ವಿಧಾನಸಭಾ ಚುನಾವಣೆ ಮತದಾನ ಕೊನೆಗೊಂಡಿದ್ದು, ಈಗ ಬಹುತೇಕ ಚುನಾವನೋತ್ತರ ಸಮೀಕ್ಷೆಗಳು ಆಡಳಿತ ಪಕ್ಷ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ ಮತ್ತೊಮ್ಮೆ ನಿಚ್ಚಳ ಬಹುಮತದಿಂದ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದಿವೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಅವರ ಹಾಡುಗಳಿಗಾಗಿ ಅಪಹಾಸ್ಯ ಮಾಡುವುದಿಲ್ಲ ಅವರು ಚೆನ್ನಾಗಿ ನೃತ್ಯ ಮಾಡುತ್ತಾರೆ ಎಂದು ಹೇಳಿದ್ದಾರೆ.
ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ತಮ್ಮನ್ನು ಭಯೋತ್ಪಾದಕ ಎಂದು ಹಣೆಪಟ್ಟ ಕಟ್ಟಿರುವುದು ತಮಗೆ ತುಂಬಾ ನೋವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಗುರುವಾರ ನಡೆದ ಶೂಟ್ ಔಟ್ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 'ನಾವು ಮಕ್ಕಳ ಕೈಗೆ ಪೆನ್ನು ನೀಡುತ್ತಿದ್ದೇವೆ, ಅವರು ಬಂದೂಕುಗಳನ್ನು ನೀಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಸಲ್ಲಿಸಿದ ದೂರಿಗೆ ಪ್ರತಿಕ್ರಿಯೆಯಾಗಿ ಮತದಾನ ಸಮಿತಿ ನೋಟಿಸ್ ನೀಡಿದೆ. ಜನವರಿ 31 ರೊಳಗೆ ತಮ್ಮ ಉತ್ತರವನ್ನು ಸಲ್ಲಿಸುವಂತೆ ಎಎಪಿ ಮುಖ್ಯಸ್ಥರಿಗೆ ಮತದಾನ ಸಮಿತಿ ನಿರ್ದೇಶನ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.