ದೆಹಲಿ ಸರ್ಕಾರ ಡಿಸೆಂಬರ್ 16 ರಿಂದ ಜನರಿಗೆ ಉಚಿತ ವೈಫೈ ಸೇವೆಯನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಪ್ರಕಟಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ಮುಖ್ಯಸ್ಥರು ದೆಹಲಿ ನಿವಾಸಿಗಳಿಗೆ ಡಿಸೆಂಬರ್ 16 ರಿಂದ ಉಚಿತ ವೈಫೈ ನೀಡಲಾಗುವುದು ಎಂದು ಹೇಳಿದರು.
ಹಿರಿಯ ನಾಗರಿಕರಿಗಾಗಿ ಉಚಿತ ಯಾತ್ರಾ ಯೋಜನೆಯಲ್ಲಿ ಕರ್ತಾರ್ಪುರ್ ಸಾಹಿಬ್ ಗುರುದ್ವಾರವನ್ನು ಸೇರಿಸಲು ದೆಹಲಿ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ದೆಹಲಿ ಕ್ಯಾಬಿನೆಟ್ ಸಭೆಯಲ್ಲಿ ಇದಕ್ಕೆ ತಾತ್ವಿಕವಾಗಿ ಅನುಮೋದನೆ ನೀಡಿತು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ಮಟ್ಟ ಹೆಚ್ಚಾಗುತ್ತಿದ್ದು, "ಜನರು ಉಸಿರಾಡಲು ತೊಂದರೆ ಎದುರಿಸುತ್ತಿದ್ದಾರೆ. ಮಾಲಿನ್ಯದಿಂದ ಮಕ್ಕಳಿಗೆ ತೊಂದರೆಯಾಗದಂತೆ ನಿಗಾ ವಹಿಸಲು ಖಾಸಗಿ ಮತ್ತು ಸರ್ಕಾರಿ ಶಾಲೆಯ ಪ್ರತಿ ವಿದ್ಯಾರ್ಥಿಗೂ ಎರಡು 'ಮಾಸ್ಕ್'ಗಳನ್ನು ವಿತರಿಸುತ್ತಿದ್ದೇವೆ" ಎಂದು ಶಾಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸುವಾಗ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು.
ದೆಹಲಿ ಸರ್ಕಾರವು ಒಟ್ಟು 45 ಕಿ.ಮೀ ವಿಸ್ತಾರದ ಕನಿಷ್ಠ ಒಂಬತ್ತು ರಸ್ತೆಗಳನ್ನು ಮರುವಿನ್ಯಾಸಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಪ್ರಕಟಿಸಿದ್ದಾರೆ. ರಸ್ತೆಗಳನ್ನು ಅಂತರರಾಷ್ಟ್ರೀಯ ಮಾನದಂಡಗಳೊಂದಿಗೆ ಮರುವಿನ್ಯಾಸಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ವಿದೇಶಾಂಗ ಇಲಾಖೆ ತಿರಸ್ಕಾರದ ನಡುವೆಯೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಡೆನ್ಮಾರ್ಕ್ ನ 'ಕೋಪನ್ ಹ್ಯಾಗನ್ ಸಿ 40' ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರಕ್ಕೆ ಈಗ ತಿರುಗೇಟು ನೀಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಡೆನ್ಮಾರ್ಕ್ನಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅನುಮತಿ ನಿರಾಕರಿಸಿರುವ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಎನ್ಆರ್ಸಿಯನ್ನು ದೆಹಲಿಯಲ್ಲಿ ಜಾರಿಗೆ ತರಬೇಕು. ದೆಹಲಿಯಲ್ಲಿ ಎನ್ಆರ್ಸಿ ಜಾರಿಗೆ ಬಂದರೆ ಮನೋಜ್ ತಿವಾರಿ ಅವರೇ ಮೊದಲು ಹೊರಹೋಗಬೇಕಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 'ಬಾಡಿಗೆದಾರರ ವಿದ್ಯುತ್ ಮೀಟರ್ ಯೋಜನೆ' ಅನ್ನು ಬುಧವಾರ ಪ್ರಾರಂಭಿಸಿದರು. ಈ ಯೋಜನೆಯಡಿ ದೆಹಲಿಯಲ್ಲಿ ವಾಸಿಸುವ ಬಾಡಿಗೆದಾರರು ಸಹ ಪ್ರಿಪೇಯ್ಡ್ ಮೀಟರ್ ಪಡೆಯಲು ಸಾಧ್ಯವಾಗುತ್ತದೆ.
ಕೇಂದ್ರ ಸರ್ಕಾರದ ನೂತನ ಮೋಟಾರು ಕಾಯ್ದೆಯನ್ನು ಭಾರಿ ದಂಡದ ಕಾರಣಕ್ಕೆ ಹಲವು ರಾಜ್ಯಗಳು ವಿರೋಧಿಸುತ್ತಿರಬಹುದು ಆದರೆ ಈಗ ಈ ಕಾಯ್ದೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಎಲ್ಲರ ಹುಬ್ಬರಿಸುವಂತೆ ಮಾಡಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮುಂಚೆಯೇ ದೆಹಲಿ ಕ್ಯಾಬಿನೆಟ್ 2019 ರ ಅಕ್ಟೋಬರ್ 29 ರಿಂದ ದೆಹಲಿಯ ಎಲ್ಲಾ ಸಾರಿಗೆ ನಿಗಮ ಮತ್ತು ಕ್ಲಸ್ಟರ್ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸರ್ಕಾರದ ಉಚಿತ ಕೋಚಿಂಗ್ ಯೋಜನೆಯು ಭಾರತೀಯ ಇನ್ಸ್ಟಿಟ್ಯೂಟ್ ಟೆಕ್ನಾಲಜಿ ಪ್ರವೇಶ ಪರೀಕ್ಷೆಯನ್ನು ಪಾಸಾಗಲು ಟೈಲರ್ ಮಗನಿಗೆ ಸಹಾಯ ಆಗಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ 200 ಯೂನಿಟ್ ವರೆಗಿನ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಪಾವತಿಸಬೇಕಿಲ್ಲ ಎಂದು ಘೋಷಿಸಿದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಮತ್ತೊಂದು ಉಡುಗೊರೆಯನ್ನು ನೀಡಿದ್ದಾರೆ. ಈ ಬಾರಿ ಕೇಜ್ರಿವಾಲ್ ನೀರಿನ ಬಿಲ್ ಬಾಕಿಯನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಘೋಷಿಸಿದರು.
ಅಜಯ್ ಮಾಕೆನ್ ತಮ್ಮ ಟ್ವೀಟ್ನಲ್ಲಿ, ರಾಜ್ಯ ಕಾಂಗ್ರೆಸ್ ಹುದ್ದೆಗೆ ರಾಜೀನಾಮೆ ನೀಡಿದಾಗಿನಿಂದ, ದೆಹಲಿಯ ರಾಜಕೀಯದೊಂದಿಗೆ ನನಗೆ ನೇರ ಸಂಪರ್ಕವಿಲ್ಲ ಆದರೆ ಜವಾಬ್ದಾರಿಯುತ ಪ್ರಜೆಯಾಗಿ, ನಾನು ನಿಮ್ಮನ್ನು ಸತ್ಯಕ್ಕೆ ಪರಿಚಯಿಸಲು ಬಯಸುತ್ತೇನೆ ಎಂದು ಬರೆದಿದ್ದಾರೆ.
ಆರ್ಥಿಕ ಕುಸಿತವನ್ನು ಎದುರಿಸಲು ಕೇಂದ್ರ ಸರ್ಕಾರ ಧೃಡವಾದ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎನ್ನುವ ಸಂಪೂರ್ಣ ನಂಬಿಕೆ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೇಶವು ಒಂದಾಗಿ ನಿಂತು ಆರ್ಥಿಕತೆಯನ್ನು ಸರಿಪಡಿಸಬೇಕಾದ ಒಂದು ಪರಿಸ್ಥಿತಿ ಇದು ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.