ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ 70 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದೆ ವೇಳೆ ಅವರು ಪಕ್ಷದ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿದ್ದಾರೆ.
ಹಿಂದಿನ ಶುಲ್ಕಕ್ಕೆ ಹೋಲಿಸಿದರೆ ಈಗ ಆಟೋ ನೋಂದಣಿ ಶುಲ್ಕವನ್ನು ಅರ್ಧಕ್ಕಿಂತಲೂ ಕಡಿಮೆ ಮಾಡಲಾಗಿದೆ. ಈ ಮೊದಲು ಆಟೋ ನೋಂದಣಿಗಾಗಿ ಚಾಲಕರು 1000 ರೂಪಾಯಿಗಳನ್ನು ಪಾವತಿಸಬೇಕಾಗಿತ್ತು, ಆದರೆ ಈಗ ಈ ಮೊತ್ತವನ್ನು ಕೇವಲ 300 ರೂಪಾಯಿಗೆ ಇಳಿಸಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರದಂದು ರಾಷ್ಟ್ರದ ರಾಜಧಾನಿಯಲ್ಲಿ ಉಚಿತ ವೈ-ಫೈ ಇಂಟರ್ನೆಟ್ ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಕೇಜ್ರಿವಾಲ್ ಪ್ರತಿ ಬಳಕೆದಾರರಿಗೆ 15 ಜಿಬಿ ಡೇಟಾವನ್ನು ಉಚಿತವಾಗಿ ನೀಡಲಾಗುವುದು, ಪ್ರತಿ ತಿಂಗಳು 200 ಎಂಬಿಪಿಎಸ್ ವೇಗದಲ್ಲಿ ಇಂಟರ್ ನೆಟ್ ನೀಡಲಾಗುವುದು ಎಂದು ಹೇಳಿದರು.
ಸರ್ಕಾರದ ಹೊಸ ಪ್ರಸ್ತಾಪವು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹೆಚ್ಚಿಸಿ, ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
200 ಯುನಿಟ್ವರೆಗಿನ ವಿದ್ಯುತ್ ಬಳಕೆಗೆ ಜನರು ವಿದ್ಯುತ್ ಬಿಲ್ ಪಾವತಿಸಬೇಕಾಗಿಲ್ಲ ಮತ್ತು ಆಗಸ್ಟ್ 1 ರಿಂದ ಅವರ ಬಿಲ್ಗಳನ್ನು ಮನ್ನಾ ಮಾಡಲಾಗುವುದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಈ ಇಬ್ಬರೂ ಮುಖಂಡರಿಗೆ ತಲಾ 10,000 ರೂ.ಗಳ ಬಾಂಡ್ ಮೇಲೆ ಜಾಮೀನು ನೀಡಲಾಗಿದ್ದು, ಮಾನಹಾನಿ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 25ಕ್ಕೆ ಕೋರ್ಟ್ ನಿಗದಿ ಮಾಡಿದೆ.
ಶಿರೋಮಣಿ ಅಕಾಲಿ ದಳ (ಎಸ್ಎಡಿ) ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಚೇರಿ ಮತ್ತು ಅದರ ಹತ್ತಿರದ ಪ್ರದೇಶಗಳ ಹೊರಗೆ ಬುಧವಾರ ಪೋಸ್ಟರ್ಗಳನ್ನು ಹಾಕಿ ದೆಹಲಿ ಶಾಲೆಗಳ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.
2019 ರ ಲೋಕಸಭೆ ಚುನಾವಣೆಯಲ್ಲಿ ಸೋಲಿನ ನಂತರ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ಮಹಿಳೆಯರ ವಿಶ್ವಾಸ ಗೆಲ್ಲಲು ಬೃಹತ್ ಯೋಜನೆಯನ್ನು ಜಾರಿಗೆ ತರುತ್ತಿದೆ.
ದೆಹಲಿ ವಾಸಿಸುವ ಮಹಿಳೆಯರಿಗೆ ಈಗ ಸಿಹಿ ಸುದ್ದಿಯೊಂದು ಬಂದಿದೆ. ಅದೇನೆಂದರೆ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಹಾಗೂ ಮೆಟ್ರೋ ಪ್ರಯಾಣದ ಅವಕಾಶ ನೀಡಲು ಯೋಜನೆಯೊಂದನ್ನು ರೂಪಿಸುತ್ತಿದೆ.ಈಗ ಎಲ್ಲವು ಅಂದುಕೊಂಡಂತೆ ಆದಲ್ಲಿ ಮಹಿಳೆಯರಿಗೆ ಇದು ನಿಜಕ್ಕೂ ಬಂಪರ್ ಸುದ್ದಿ ಎನ್ನಬಹುದು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಿಂದಾಗಿ ಕಾಂಗ್ರೆಸ್ ಕಡೆಗೆ ಮತಗಳು ಶಿಫ್ಟ್ ಆಗಿವೆ ಎಂದು ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಹೇಳಿದ್ದಾರೆ.ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತಾಗಿ ಪ್ರತಿಕ್ರಿಯಿಸಿದ ಅವರು "ಕಳೆದ ಅವಧಿ ಶೇ 13 ರಷ್ಟು ಮುಸ್ಲಿಂ ಮತಗಳು ಕಾಂಗ್ರೆಸ್ ಗೆ ವರ್ಗಾವಣೆಗೊಂಡಿವೆ" ಎಂದು ಹೇಳಿದರು.
ಅಣ್ಣಾ ಹಜಾರೆ ಚಳವಳಿಯಲ್ಲಿ ಭಾಗಿಯಲ್ಲದ ನನ್ನ ತಂದೆಗೆ ಯಾಕೆ ಆಮ್ ಆದ್ಮಿ ಪಕ್ಷ ಟಿಕೆಟ್ ನೀಡಿದೆ? ಅಷ್ಟಕ್ಕೂ ಒಬ್ಬ ಅನುಭವವಿಲ್ಲದ ರಾಜಕಾರಣಿಗೆ ಲೋಕಸಭೆ ಟಿಕೆಟ್ ದೊರೆತಿದೆ ಎಂದರೆ ಅದು ನಿಜಕ್ಕೂ 'ಅಚ್ಚರಿ' ತಂದಿದೆ ಎಂದು ಉದಯ್ ಹೇಳಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.