Karnataka Assembly Elections: ನಗರದ 4 ಅಪರ ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿರುವ ಮಸ್ಟರಿಂಗ್ ಕೇಂದ್ರಗಳಿಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳು ಬಂದು ಮತಗಟ್ಟೆಗಳಿಗೆ ಅಗತ್ಯವಿರುವ ಇವಿಎಂ, ಕಂಟ್ರೋಲ್ ಯುನಿಟ್, ವಿವಿ ಪ್ಯಾಟ್, ಎಲ್ಲಾ ಸಾಮಗ್ರಿಗಳನ್ನು ತೆಗೆದುಕೊಂಡು ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ, ಇತರೆ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಲಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲೂ ವಸತಿ, ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಗೆಲುವಿನ ನಿರೀಕ್ಷೆಯಲ್ಲಿರುವ ಸಚಿವೆ ಶಶಿಕಲಾ ಜೊಲ್ಲೆ. ಜೊಲ್ಲೆಯ ಬೃಹತ್ ಸಮಾವೇಶಗಳಲ್ಲಿ ಜನಸಾಗರ. ಕೇಂದ್ರ-ರಾಜ್ಯ ಘಟಾನುಘಟಿ ನಾಯಕರಿಂದ ಮತಬೇಟೆ. ನಿಪ್ಪಾಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ. ನಾನು ಈ ಬಾರಿ ಹ್ಯಾಟ್ರಿಕ್ ಸಾಧನೆ ಸಾಧಿಸುತ್ತೇನೆ. ಮತದಾರರು ಆಶೀರ್ವಾದ ಮಾಡ್ತಾರೆ ಎಂದು ಚಿಕ್ಕೋಡಿಯಲ್ಲಿ ಶಶಿಕಲಾ ಜೊಲ್ಲೆ ಗೆಲುವಿನ ವಿಶ್ವಾಸ.
ನೀಟ್ ಪರೀಕ್ಷೆ ಹಿನ್ನೆಲೆ ಮೋದಿ ರೂಟ್ ಚೇಂಜ್. ಬೆಂಗಳೂರಲ್ಲಿ ಮೋದಿ ರೋಡ್ ಶೋ ಬದಲಾವಣೆ. ಭಾನುವಾರದ ಮೋದಿ ರೋಡ್ ಶೋ 4 ಕಿ.ಮೀ ಕಡಿತ. ಭಾನುವಾರದ ರೋಡ್ ಶೋ ಶನಿವಾರಕ್ಕೆ ನಿಗದಿ. ಶನಿವಾರದ ರೋಡ್ ಶೋ ಭಾನುವಾರಕ್ಕೆ ನಿಗದಿ.
ನಾನು ಈ ಬಾರಿಯೂ ಗೆಲ್ಲೋ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿರೋ ಶಶಿಕಲಾ ಜೊಲ್ಲೆ ಅವ್ರ ಜೊತೆ ನಮ್ಮ ಪ್ರತಿನಿಧಿ ಶಿವರಾಜ ನೇಸರಗಿ ನಡೆಸಿರೋ ಚಿಟ್ ಚಾಟ್ ಇಲ್ಲಿದೆ ನೋಡಿ.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚಂದ. ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ ಎಂದು ರಾಣೇಬೆನ್ನೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ರು.
ಮೇ 6ಕ್ಕೆ ಮತ್ತೆ ರಾಜ್ಯಕ್ಕೆ ಯೋಗಿ ಎಂಟ್ರಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಕ್ಕೆ ಆಗಮನ. ಬಂಟ್ವಾಳದಲ್ಲಿ ಆದಿತ್ಯನಾಥ್ ಬೃಹತ್ ರೋಡ್ ಶೋ. ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಭಾರೀ ರಣತಂತ್ರ.
Karnataka Assembly Election: ಮಾದರಿ ನೀತಿ ಸಂಹಿತೆಯನ್ನು ಜಾರಿ ಮಾಡಿ, ಚುನಾವಣಾ ಗಲಭೆಗಳನ್ನು ಗುರುತಿಸಿ, ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕೂಡ ಚುನಾವಣಾ ಅಕ್ರಮವೇಸಗುವವರು,ನೀತಿ ಸಂಹಿತೆ ಉಲ್ಲಂಘನೆ ಮಾಡುವವರ ಮೇಲೆ ಸಮರ ಸಾರಿದೆ.
Rain Effect: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೊಂದು ವಾರವಷ್ಟೆ ಬಾಕಿ ಉಳಿದಿದೆ. ರಾಜ್ಯದಲ್ಲಿ ಚುನಾವಣಾ ರಂದು ಹೆಚ್ಚಾಗುತ್ತಿದ್ದು ಪ್ರಚಾರದ ಭರಾಟೆಯೂ ಜೋರಾಗಿದೆ. ಇನ್ನೊಂದೆಡೆ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿರುವ ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಬೆಳಿಗ್ಗೆ, ಸಂಜೆ ಎಂದು ನೋಡದೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಆದರೆ, ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ವರುಣನ ಅಬ್ಬರವೂ ಜೋರಾಗಿದ್ದು ಚುನಾವಣಾ ಪ್ರಚಾರದ ಭರಾಟೆಗೆ ವರುಣರಾಜ ಅಡ್ಡಿಪಡಿಸುವ ಲಕ್ಷಣಗಳು ಹೆಚ್ಚಾಗಿದೆ.
ಸಂಜೆ ಕಲಬುರಗಿಯಲ್ಲಿ ರೋಡ್ ಶೋ
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರಚಾರಕ್ಕೆ ಮಂಗಳವಾರ ಬೆಳಗ್ಗೆ ಬರಲಿದ್ದು 11.30ಕ್ಕೆ ಚಿತ್ರದುರ್ಗದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ. ಮಧ್ಯ ಕರ್ನಾಟಕದ ಲಿಂಗಾಯತ, ವಾಲ್ಮೀಕಿ ಮತದಾರರ ಶಿಕಾರಿ ನಡೆಯಲಿದ್ದು ಸುಮಾರು ಎರಡೂವರೆ ಲಕ್ಷ ಮಂದಿ ಭಾಗವಹಿಸೋ ನಿರೀಕ್ಷೆಯಿದೆ. ಮಧ್ಯಾಹ್ನ ರಾಯಚೂರಿನ ಸಿಂಧನೂರಲ್ಲಿ ಮತಬೇಟೆ ನಡೆಸಲಿರೋ ಪ್ರಧಾನಿಗಳು ಸಂಜೆ ಕಲಬುರಗಿಯಲ್ಲಿ ರೋಡ್ ಶೋ ನಡೆಸಲಿದ್ದು ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ರಾಜ್ಯ ಬಿಜೆಪಿ ಪಕ್ಷದ ಪರವಾಗಿ ಇತರೆ ಪಕ್ಷಗಳು ಸಾಥ್ ನೀಡಲು ಮುಂದಾಗಿವೆ. ಬಿಜೆಪಿ ಅಭಿವೃದ್ಧಿ ಕೆಲಸಗಳನ್ನ ಗುರ್ತಿಸಿರುವ ಸಲುವಾಗಿ ರಾಷ್ಟ್ರೀಯ ಲೋಕಜನಶಕ್ತಿ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಬೆಂಬಲಕ್ಕೆ ನಿಂತಿದೆ.
Karnataka Assembly Election: ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಕೋಟೆನಾಡು ಚಿತ್ರದುರ್ಗ.. ವಿಜಯನಗರದಲ್ಲಿ ನಮೋ ಸುನಾಮಿ ಸದ್ದು ಮಾಡಲಿದೆ. ಬಳಿಕ, ಹೊಸಪೇಟೆಯ ಪುನೀತ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಜರುಗಲಿದ್ದು ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.
ಶ್ರೀರಂಗಪಟ್ಟಣ ಕ್ಷೇತ್ರದ ರವೀಂದ್ರ ಶ್ರೀಕಂಠಯ್ಯ ಪ್ರಚಾರ. ಟಿ.ಎಂ.ಹೊಸೂರು ಗ್ರಾಮದಲ್ಲಿ ಶ್ರೀಕಂಠಯ್ಯ ಮತಬೇಟೆ. ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು. ಗ್ರಾಮದಲ್ಲಿ ರೋಡ್ ಶೋ ಮೂಲಕ ರವೀಂದ್ರ ಮತಯಾಚನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.