ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಗಳಿಂದ ಡಿಕೆಶಿ ಅರ್ಜಿ ಸ್ವೀಕರಿಸುತ್ತಿದ್ದರೆ, ಇತ್ತ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಲೆ ಇಲ್ಲವೇ? ಎಂದು BJP ಪ್ರಶ್ನಿಸಿದೆ.
ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್ನವರೇ ಸಾಕು ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ನಾನು ಅವರ ಇವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಗೆಲುವು.. ಸೋಲು ಜನರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ.
ಕೋಲಾರದಲ್ಲಿ ನೂರಕ್ಕೆ ನೂರು ಸಿದ್ದರಾಮಯ್ಯ ಗೆಲ್ಲಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಎಲ್ಲರೂ ಸೇರಿ ನಿಮ್ಮನ್ನು ಬಲಿ ನೀಡಲು ಹೊರಟಿದ್ದಾರೆ. ಕೋಲಾರಕ್ಕೆ ಹೋಗಬೇಡಿ ವರಣಾದಲ್ಲೇ ನಿಲ್ಲಿ ಎಂದು ಇಬ್ರಾಹಿಂ ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಈ ಬಾರಿ ಒಂದು ಕ್ಷೇತ್ರದಿಂದ ಸ್ಪರ್ಧಿಸಿ, ಮುಂದಿನ ಬಾರಿ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಿದರೆ ಆ ಕ್ಷೇತ್ರದ ಜನರ ಪ್ರೀತಿ ವಿಶ್ವಾಸ ಗಳಿಸಿಲ್ಲ ಎಂದರ್ಥ- ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ
ಚುನಾವಣೆ ಸಮೀಪಿಸುತ್ತಿರೋ ಹಿನ್ನಲೆ ಸಮುದಾಯಗಳತ್ತ ಬಿಜೆಪಿ ನಾಯಕರ ಕಣ್ಣು ಇಟ್ಟಿದ್ದಾರೆ. ಎಲೆಕ್ಷನ್ ಗೇಮ್ ಪ್ಲಾನ್ ರೂಪಿಸಿರೋ ಕೇಸರಿ ನಾಯಕರು ಸಮುದಾಯದ ಒಲೈಕೆಗೆ ಮುಂದಾಗಿದ್ದಾರೆ. ನಾಳೆ ಅಂದರೆ ನವಂಬರ್ 11 ರಂದು ಕೆಂಪೇಗೌಡ ಪ್ರತಿಮೆ ಉದ್ಘಾಟನೆನೆ ಪ್ರಧಾನಿ ಆಗಮನ ಜೊತೆಗೆ ಈ ಮೂಲಕ ಸಮುದಾಯದ ಜೊತೆ ನಾವೀದ್ದೇವೆ ಎನ್ನೋ ಮೆಸೇಜ್ ರವಾನೆ ಮಾಡುವ ಉದ್ದೇಶ ಕೂಡ ಇದೇ ಎಂದು ಹೇಳಲಾಗುತ್ತಿದೆ.
ವಿಧಾನಸಭೆ ಚುನಾವಣೆಗೆ ಇನ್ನೂ ಮೂಹೂರ್ತ ಫಿಕ್ಸ್ ಆಗಿಲ್ಲವಾದ್ರೂ ಚುನಾವಣೆಗೂ ಮುನ್ನ ರಾಜಕೀಯ ಟೆಸ್ಟ್ ಮ್ಯಾಚ್ ಭರ್ಜರಿ ನಡೆಯುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗಡಿ ಜಿಲ್ಲೆ ಬೀದರ್ನಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ 25 ಸಾವಿರಕ್ಕೂ ಅಧಿಕ ಜನರನ್ನ ಸೇರಿಸಿ ಚುನಾವಣೆ ರಣ ಕಹಳೆ ಮೋಳಗಿಸಿದ್ದಾರೆ.
ವಿಧಾನಸಭೆ ಅವಧಿ ಮುಕ್ತಾಯಕ್ಕೆ 6 ತಿಂಗಳು ಬಾಕಿ ಇದೆ. ಅದಾಗಲೇ ಬಿಜೆಪಿ ಚುನಾವಣಾ ಸಿದ್ಧತೆಗೆ ಮುಂದಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ರಣ ಕಹಳೆ ಮೊಳಗಿಸಿದೆ. ಬಿಜೆಪಿ ಆಯೋಜಿಸಿದ್ದ ಜನ ಸಂಕಲ್ಪ ಯಾತ್ರೆ ಮೂಲಕ ಹಾಲಿ ಮತ್ತು ಮಾಜಿ ಸಿಎಂ ಇಬ್ಬರೂ ಚುನಾವಣೆಗೆ ಸಿದ್ಧರಾಗಿ ಅಂತಾ ಕಾರ್ಯಕರ್ತರನ್ನು ಹುರಿದುಂಬಿಸಿದ್ರು.
ರಾಜ್ಯದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಶುರು ಮಾಡಿದೆ. ಈ ಯಾತ್ರೆಗೆ ಟಕ್ಕರ್ ಕೂಡಲು ಬಿಜೆಪಿ ಜನ ಸಂಕಲ್ಪ ಯಾತ್ರೆ ಶುರು ಮಾಡಿದ್ದು, ರಾಯಚೂರಿನಿಂದಲೇ ಪಾಂಚಜನ್ಯ ಮೊಳಗಿಸಿದೆ. ಮಾಜಿ ಸಿಎಂ ಮತ್ತು ಹಾಲಿ ಸಿಎಂ ಜೊತೆಯಾಗಿ ಸರ್ಕಾರದ ಸಾಧನೆ ತಿಳಿಸಲು ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿದ್ದು, ರಾಯಚೂರಿನಿಂದಲೇ ಪಾಂಚಜನ್ಯ ಮೊಳಗಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.. ಮೂರೂ ಪಕ್ಷಗಳು ಸಾಲು ಸಾಲು ಸಭೆಗಳು, ಪಾದಯಾತ್ರೆ, ರಥಯಾತ್ರೆಗಳನ್ನು ಹಮ್ಮಿಕೊಳ್ಳೋ ಮೂಲಕ ಅಧಿಕಾರದ ಗದ್ದುಗೆ ಏರಲು ತಂತ್ರ ಹೆಣೆದಿವೆ..
ಸಿಎಂ ಆಗೋ ದಾವಂತ ಇರೋದು ಸಿದ್ದು, ಡಿಕೆಶಿಗೆ. ನಮಗೆ ಯಾವುದೇ ಚುನಾವಣೆ ದಾವಂತ ಇಲ್ಲ ಎಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಅವಧಿ ಪೂರ್ವ ಚುನಾವಣೆ ಬರಲ್ಲ. ನಮ್ಮ ಸರ್ಕಾರದ ಪೂರ್ಣ ಅವಧಿ ಪೂರೈಸುತ್ತವೆ ಎಂದಿದ್ದಾರೆ.
ಸಿಎಂ ಆಗಿದ್ದಾಗ ಗಾಣಿಗ ಸಮಾಜದ ಅನೇಕ ಬೇಡಿಕೆ ಈಡೇರಿಸಿದ್ದೇನೆ. ಆ ತೃಪ್ತಿ ಗಾಣಿಗ ಸಮಾಜಕ್ಕೂ ಇದೆ, ನನಗೂ ಇದೆ ಎಂದು ಮಾಜಿ ಸಿಎಂ ಬಿಎಸ್ವೈ ಹೇಳಿದ್ದಾರೆ. ಚುನಾವಣೆ ಬಂದಾಗ ಯಾರ ಬಣ್ಣ ಏನೂ ಅಂತಾ ಗೊತ್ತಾಗುತ್ತೆ ಎಂದು ಪ್ರಿಯಾಂಕ್ಗೆ ತಿರುಗೇಟು ನೀಡಿದ್ದಾರೆ..
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆ ನಡೆಯಲಿದೆ. ರಾಜ್ಯದಲ್ಲಿ ಬರುವ ಮುಂದಿನ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಬಿಬಿಎಂಪಿ ಚುನಾವಣೆ ವಿಚಾರವಾಗಿಯೂ ಚರ್ಚೆ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.