ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಸಿಂಗಾಪುರಕ್ಕೆ ಕಳುಹಿಸುವುದಾಗಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರದಂದು ಗುರುಪ್ರೀತ್ ಕೌರ್ ಅವರನ್ನು ವಿವಾಹವಾಗಿದ್ದಾರೆ.ಚಂಡೀಗಢದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಕುಟುಂಬದ ಸಮೇತ ಪಾಲ್ಗೊಂಡಿದ್ದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭಗವಂತ ಮಾನ್ ಅವರ ಮಕ್ಕಳಿಬ್ಬರೂ ಬಂದಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಭಗವಂತ್ ಮಾನ್ ಅವರ ಪತ್ನಿ ಇಂದರ್ ಪ್ರೀತ್ ಕೌರ್ ಕೂಡ ಅವರೊಂದಿಗೆ ಪ್ರಚಾರ ಮಾಡಿದ್ದರು.
ಶುಕ್ರವಾರದಂದು ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು 1,600 ಕ್ಕೂ ಹೆಚ್ಚು ಜನರನ್ನು ಲೈನ್ ಮ್ಯಾನ್ ಹುದ್ದೆಗಳಿಗೆ ನೇಮಕ ಮಾಡುವುದಾಗಿ ಘೋಷಿಸಿದೆ.ಪಂಜಾಬ್ ಸ್ಟೇಟ್ ಪವರ್ ಕಾರ್ಪೊರೇಷನ್ ಲಿಮಿಟೆಡ್ 'ಅಸಿಸ್ಟೆಂಟ್ ಲೈನ್ಮ್ಯಾನ್' ಹುದ್ದೆಗೆ 1,690 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಬುಧವಾರದಂದು ಭ್ರಷ್ಟಾಚಾರ-ವಿರೋಧಿ ಸಹಾಯವಾಣಿಯನ್ನು ಪ್ರಾರಂಭಿಸಿದ್ದಾರೆ, ಇದು ಲಂಚ ಕೇಳುವ ಅಥವಾ ಇತರ ದುಷ್ಕೃತ್ಯಗಳಲ್ಲಿ ತೊಡಗಿರುವ ಅಧಿಕಾರಿಗಳ ವೀಡಿಯೊಗಳನ್ನು ಅಪ್ಲೋಡ್ ಮಾಡಲು ಜನರಿಗೆ ಅನುವು ಮಾಡಿಕೊಡುತ್ತದೆ.
ನೂತನವಾಗಿ ಪಂಜಾಬ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಈಗ ಭಗವಂತ್ ಮಾನ್ ಅವರು ಭ್ರಷ್ಟಾಚಾರದ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.ಹೌದು, ಈಗ ಸ್ವಾತಂತ್ರ ಹೋರಾಟಗಾರ ಭಗತ್ ಸಿಂಗ್ ಅವರ ಹುತಾತ್ಮ ದಿನವಾಗಿರುವ ಮಾರ್ಚ್ 23 ರಂದು ಭ್ರಷ್ಟಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಲ್ಪ್ ಲೈನ್ ಗೆ ಚಾಲನೆ ನೀಡಲಿದ್ದಾರೆ.
ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಪಂಜಾಬ್ ಸಹ-ಪ್ರಭಾರಿ ರಾಘವ್ ಚಡ್ಡಾ ಅವರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.
Punjab Assembly Election 2022: ಭಗವಂತ್ ಮಾನ್ ಅವರು ತಮ್ಮದೇ ಪಕ್ಷದ ಮಾಜಿ ಶಾಸಕ ಅಮರ್ಜಿತ್ ಸಿಂಗ್ ಅವರ ಭದ್ರತೆಯನ್ನು ಹಿಂಪಡೆದಿದ್ದಾರೆ. ಸುಮಾರು 369 ಸೈನಿಕರು ಮತ್ತು ಕಮಾಂಡೋಗಳನ್ನು ಭದ್ರತೆಯಿಂದ ತೆಗೆದುಹಾಕಲಾಗಿದೆ.
ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ಪಕ್ಷದ (ಎಎಪಿ) ನಾಯಕ ಭಗವಂತ್ ಮಾನ್ ಅವರು ಬುಧವಾರದಂದು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
Punjab Assembly Elections 2022: ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬಹುಮತ ಗಳಿಸಿದೆ. ಏತನ್ಮಧ್ಯೆ, ವೇಗದ ಬೌಲರ್ ಜೋಫ್ರಾ ಆರ್ಚರ್ ಮಾಡಿದ ಟ್ವೀಟ್ ವೈರಲ್ ಆಗುತ್ತಿದೆ, ಇದನ್ನು ಜನರು ಚುನಾವಣಾ ಭವಿಷ್ಯಕ್ಕೆ ಲಿಂಕ್ ಮಾಡುವ ಮೂಲಕ ನೋಡುತ್ತಿದ್ದಾರೆ. ಇದನ್ನು ಸ್ವತಃ ಎಎಪಿ ರಿಟ್ವೀಟ್ ಮಾಡಿದೆ.
ಪಕ್ಷದ ವರಿಷ್ಠ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಕನಸು ಇಂದು ನನಸಾಗಿದೆ ಎಂದು ಹೇಳಿದ್ದಾರೆ. ಪಂಜಾಬ್ನ ಜನರು ಈ ಬಾರಿ ಆಡಳಿತ ವ್ಯವಸ್ಥೆಯನ್ನು ಬದಲಾಯಿಸಿದ್ದಾರೆ, ಎಎಪಿ ದೇಶದಲ್ಲಿ ವ್ಯವಸ್ಥೆಯನ್ನು ಬದಲಾಯಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.