ʼಪ್ರಧಾನಿ ಮೋದಿ ಅವರಾಗಲೀ, ಬಿಜೆಪಿಯವರಾಗಲೀ ಇವತ್ತಿನವರೆಗೆ ಯುವಕರು, ಮಹಿಳೆಯರು, ಶೂದ್ರರು, ದಲಿತರು, ಶ್ರಮಿಕರು, ದುಡಿಯುವವರ ಪರವಾಗಿ ಒಂದೇ ಒಂದು ಸರಿಯಾದ ಕಾರ್ಯಕ್ರಮ ಜಾರಿ ಮಾಡಲಿಲ್ಲ. ಇದೇನಾ ಅಚ್ಛೆ ದಿನ್? ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳು, ಅಡುಗೆ ಎಣ್ಣೆ ಬೆಲೆ ಆಕಾಶಕ್ಕೆ ಏರಿಸಿದ್ದೀರಲ್ಲಾ ಮೋದಿಯವರೇ? ಇದಾ ನಿಮ್ಮ ಅಭಿವೃದ್ಧಿ?ʼ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Unemployment Rate In India: ಕೇಂದ್ರ ಸರ್ಕಾರವೇ ಪ್ರತಿ ೩ ತಿಂಗಳಿಗೊಮ್ಮೆ ನಡೆಸುವ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (PLFS) ಪ್ರಕಾರ, 2019ರಿಂದ 2022ರವರೆಗಿನ ಅವಧಿಯಲ್ಲಿ ದೇಶದ ನಿರುದ್ಯೋಗ ಪ್ರಮಾಣ 22.9%ಕ್ಕೆ ಏರಿಕೆಯಾಗಿದೆ. ಹೆಚ್ಚಾಗಿರುವುದು ಉದ್ಯೋಗಗಳ ಸಂಖ್ಯೆಯೇ? ಇಲ್ಲವೇ ನೀವು ಹೇಳುತ್ತಿರುವ ಸುಳ್ಳುಗಳ ಸಂಖ್ಯೆಯೇ ಪ್ರಧಾನಿಗಳೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Gruha Lakshmi Scheme: 17,500 ರೂ. ಬೆಲೆಯ ಫ್ರಿಡ್ಜ್ ಖರೀದಿಸಿ ಲತಾ ಅವರು ಜನರ ಗಮನ ಸೆಳೆದಿದ್ದಾರೆ. ಯುಗಾದಿ ಹಬ್ಬಕ್ಕೆ ಸಂಗ್ರಹಿಸಿ ಇಟ್ಟಿದ್ದ ಒಟ್ಟು ಹಣದಲ್ಲಿ ಫ್ರಿಡ್ಜ್ ಖರೀದಿಸಿ ಖುಷಿಪಟ್ಟಿದ್ದಾರೆ.
Lok Sabha Election 2024: 3 ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿ 20 ಭಯೋತ್ಪಾದಕರು ಸತ್ತಿರುವ ಸುದ್ದಿ ಬಂದಿತ್ತು. ಇದು ನವಭಾರತ, ಈಗ ಭಯೋತ್ಪಾದಕರು ತಮ್ಮ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಅಂತಾ ಯೋಗಿ ಖಡಕ್ ಸಂದೇಶ ನೀಡಿದ್ದಾರೆ.
Lok Sabha Elections 2024: ಉಚಿತ ಬಸ್ ಪ್ರಯಾಣ , ವಿದ್ಯುತ್, ತಿಂಗಳಿಗೆ ೨ ಸಾವಿರ ಹಣ ಸಿಗುತ್ತಿರುವುದರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು ಸಲ್ಲಿಸುವುದರ ಜೊತೆಗೆ ಕಾಂಗ್ರೆಸ್ ಬೆಂಬಲಿಸುವ ಭರವಸೆ ನೀಡುತ್ತಿದ್ದಾರೆ ಎಂದು ಸ್ಟಾರ್ ಚಂದ್ರು ಹೇಳಿದ್ದಾರೆ.
Lok Sabha Election 2024: ಚುನಾವಣೆ ದಿನ ಚುನಾವಣಾ ಕೇಂದ್ರದ ಬಳಿ ಕಾರ್ಯನಿರ್ವಹಿಸಲು ಆಶಾ ಕಾರ್ಯಕರ್ತೆಯರಿಗೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದಿಷ್ಟು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಶಾ ಕಾರ್ಯಕರ್ತೆಯರು ಬೇಡಿಕೆ ಇಟ್ಟಿದ್ದಾರೆ.
Lok Sabha Election 2024: ಗ್ಯಾರಂಟಿ ಗ್ಯಾರಂಟಿ ಎನ್ನುತ್ತಾ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಕಡೇ ಪಕ್ಷ ರಸ್ತೆಗಳಿಗೆ ಒಂದು ಬುಟ್ಟಿ ಮಣ್ಣು ಸಹ ಹಾಕಿಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕೃಷ್ಣ ಬೈರೇಗೌಡ ಕಿಡಿಕಾರಿದ್ದಾರೆ.
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ. ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ. ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ.
Rameswaram Cafe Blast Case: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಸಮರ್ಥ ಆಡಳಿತ ಮತ್ತು ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಈ ಎರಡೂ ಪ್ರಕರಣಗಳು ಕೈಗನ್ನಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
Congress guarantee schemes: 1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ನೀಡುವುದರ ಜೊತೆಗೆ 1.50 ರೂ. ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಇದಕ್ಕೆ ಉತ್ತರಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ʼನಿಗಮ / ಮಂಡಳಿ / ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡ ಎಲ್ಲರಿಗೂ ಅಭಿನಂದನೆಗಳು. ನಮ್ಮ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ನಾಡಿನ ಸರ್ವಾಂಗೀಣ ಪ್ರಗತಿಯ ನಮ್ಮ ಪ್ರಯತ್ನಕ್ಕೆ ತಾವೆಲ್ಲರೂ ಬೆಂಬಲವಾಗಿ ನಿಲ್ಲಲಿದ್ದೀರೆಂದು ನಂಬಿದ್ದೇನೆʼ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Panchayat Development Officer: ಗ್ರಾಮ ಪಂಚಾಯ್ತಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪೈಕಿ ಹಿರಿಯ PDO ಹಾಗೂ PDOಗಳನ್ನು ರಾಜ್ಯ ವೃಂದಕ್ಕೆ ಸೇರಿಸಲಾಗಿದೆ. PDOಗಳ ಪೈಕಿ 1,500 ಮಂದಿಗೆ ಬಡ್ತಿ ಮೂಲಕ ಹಿರಿಯ PDO ಹುದ್ದೆ ನೀಡಲು ತಿದ್ದುಪಡಿ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.
ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. NPS ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.
Gazetted Probationary Post: 16 ಇಲಾಖೆಗಳು ಖಾಲಿ ಇರುವ KAS ಸೇರಿದಂತೆ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ.
Karnataka Budget 2024 Live Updates: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದರು. ಇದು ಅವರು ಮಂಡಿಸಿದ 15ನೇ ಬಜೆಟ್ ಆಗಿದ್ದು, ದಾಖಲೆ ನಿರ್ಮಿಸಿದ್ದಾರೆ. ತಮ್ಮ ಬಜೆಟ್ನಲ್ಲಿ ಸಿದ್ದರಾಮಯ್ಯನವರು ಯಾವ್ಯಾವ ಇಲಾಖೆಗೆ ಏನು ಕೊಡುಗೆ ನೀಡಿದ್ದಾರೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
R Ashok Statement: ಕಾಂಗ್ರೆಸ್ ಸರ್ಕಾರದ ಬಜೆಟ್ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು, ಬಜೆಟ್ ತಯಾರಿಕೆ ಎನ್ನುವುದು ಗಂಭೀರ ಹಾಗೂ ಪವಿತ್ರವಾದ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘ಅಡ್ಡಕಸುಬಿʼ ಬಜೆಟ್’ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ಹೇಳಿದ್ದಾರೆ.
Karnataka Budget 2024 Live Updates: ಕಳೆದ ಬಾರಿಯ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ.ಇತ್ತು. ಈ ಬಾರಿ 3.71 ಲಕ್ಷ ಕೋಟಿ ರೂ. ತಲುಪಿದೆ. ಕಳೆದ ಬಜೆಟ್ನಲ್ಲಿ ಸರ್ಕಾರವು 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗುವ ಸಾಧ್ಯತೆ ಇದೆ.
ವಿಧಾನಮಂಡಲ ಜಂಟಿ ಅಧಿವೇಶನ ನಿನ್ನೆಯಿಂದ ಆರಂಭವಾಗಿದೆ. ರಾಜ್ಯಪಾಲರು ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ್ರು. ಸರ್ಕಾರದ ಸಾಧನೆಗಳು, ಭವಿಷ್ಯದ ಯೋಜನೆಗಳ ಬಗ್ಗೆ ಬೆಳಕುಚೆಲ್ಲಿದ್ರು. ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರೆಂಟಿಗಳ ಬಗ್ಗೆ ಥಾವರ್ ಚಂದ್ ಗೆಹ್ಲೋಟ್ ಗುಣಗಾನ ಮಾಡಿದ್ರು. ಬಡವರು, ಮಧ್ಯಮ ವರ್ಗದವರ ಪರ ಸರ್ಕಾರ ಅನೇಕ ಕಾರ್ಯಕ್ರಮಗಳನ್ನ ನೀಡ್ತಿದೆ ಅಂತ ಶ್ಲಾಘಿಸಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.