ರಾಜ್ಯದಲ್ಲಿ ಭಾಗ್ಯಗಳ ಮೇಲೆ ಭಾಗ್ಯಗಳನ್ನ ಕಲ್ಪಿಸಿರುವ ಕೈ ಸರ್ಕಾರ, ಇದೀಗ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಮತ್ತೊಂದು ಬಗೆಯ ಹಣದ ಭಾಗ್ಯವನ್ನ ಕಲ್ಪಿಸುತ್ತಿದೆ. ಗೃಹಲಕ್ಷ್ಮಿ ಜೊತೆಗೆ ಮತ್ತೊಂದು ಯೋಜನೆ ಮೂಲಕ ನಿಮ್ಮ ನಿಮ್ಮ ಖಾತೆಯನ್ನ ತುಂಬಿಸಲು ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದೆ. ಅರೆರೆ... ಇದೇನಿದು ಹೊಸ ಯೋಜನೆ, ನಮ್ ಖಾತೆಗೆ ಇನ್ನೆಷ್ಟು ದುಡ್ ಬರುತ್ತೆ ಅಂದುಕೊಂಡ್ರಾ ಇಲ್ಲಿದೆ ನೋಡಿ ಪೂರ್ತಿ ವರದಿ..
Karnataka Congress government: ಕರ್ನಾಟಕದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಉಚಿತ 10 ಕೆಜಿ ಅಕ್ಕಿ ವಿತರಿಸುವುದಾಗಿ ಆಶ್ವಾಸನೆ ನೀಡಿತ್ತು.
Karnataka BJP Slams CM Siddaramaiah: ರಾಜ್ಯದಲ್ಲಿ ನೂರಕ್ಕೆ ನೂರು ಜಾರಿಯಾದ ಏಕೈಕ ಗ್ಯಾರಂಟಿ ಯಾವುದೆಂದು ನೂರೈವತ್ತರ ಗಡಿ ಗಾಟಿದ ಟೊಮೆಟೊ-ಬದನೆಗಳೇ ತೋರಿಸಿಕೊಡುತ್ತಿವೆ ಎಂದು ಬಿಜೆಪಿ ಟೀಕಿಸಿದೆ.
ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಬೊಮ್ಮಾಯಿ, ಪ್ರತಿ ವರ್ಷ 1 ವಾರ ಮಳೆ ವಿಳಂಬವಾದರೆ ಕೃಷಿ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ಹೇಳಿದರು.
Gruha Lakshmi Scheme: ಜುಲೈ 14ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಈಗಾಗಲೇ ಆಡಳಿತ ಹಳಿತಪ್ಪಿದೆ. ‘ಒಂದು ಸರ್ಕಾರ, ಹತ್ತಾರು ಮುಖ್ಯಮಂತ್ರಿಗಳು' ಎನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಸಿದ್ದರಾಮಯ್ಯನವರು ಒಬ್ಬರೇ ಮುಖ್ಯಮಂತ್ರಿ ಅಲ್ಲ. ಇಲಾಖೆಗೊಬ್ಬ ಮುಖ್ಯಮಂತ್ರಿ ಇದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
ಪೋಲಿಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಾಗುವುದು ಎಂದು ಪರಮೇಶ್ವರ್ ಹೇಳಿದರು.
Anna Bhagya Scheme: ಸಿದ್ದರಾಮಯ್ಯನವರೇ ಜುಲೈ 1ಕ್ಕೆ ಪ್ರಧಾನಿ ಮೋದಿ ಸರ್ಕಾರದ 5 ಕೆಜಿ ಉಚಿತ ಅಕ್ಕಿ ಕರ್ನಾಟಕದ ಜನರಿಗೆ ಈಗಾಗಲೇ ಸಿಕ್ಕಿದೆ. #ATMSarkaraದ 10 ಕೆಜಿ ಅಕ್ಕಿ ಎಲ್ಲಿದೆ?’ ಎಂದು ಬಿಜೆಪಿ ಪ್ರಶ್ನಿಸಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.