₹40,000 crore scam: ಸಚಿವ ಮಧು ಬಂಗಾರಪ್ಪರವರದ್ದು ವಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರ, ಅವರು ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿಲ್ಲ, ತಮ್ಮ ಇಲಾಖೆಯಲ್ಲಿ ಅವ್ಯವಹಾರ ಮಾಡಿಲ್ಲ, ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣ ನಡೆಸಿಲ್ಲ, ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಿಲ್ಲವೆಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, "ಪ್ರತಿಯೊಂದು ಔಷಧಿಗೂ ಎಕ್ಸ್ಪೈರಿ ಡೇಟ್ ಇರುತ್ತದೆ. ಅದೇ ರೀತಿ ನರೇಂದ್ರ ಮೋದಿಯವರ ಔಷಧಿ ಇನ್ನು ಮುಂದೆ ದೇಶದಲ್ಲಿ ಕೆಲಸ ಮಾಡುವುದಿಲ್ಲ" ಎಂದು ಟೀಕಿಸಿದರು.
ಸಿಎಂ ಸಿದ್ದರಾಮಯ್ಯನವರ ಯೋಜನೆಗಳೆಲ್ಲಾ ಜಾರಿಯಾಗುವ ಬದಲು ಕೇವಲ ಘೋಷಣೆ ಮಾಡಲಷ್ಟೇ ಸೀಮಿತ. ಸಹಕಾರಿ ಸಾಲಗಳ ಬಡ್ಡಿ ಮನ್ನಾ ಎಂದು ಹೇಳಿಕೆ ನೀಡಿ ಈಗ ರೈತರಿಗೆ ಬ್ಯಾಂಕ್ ಮೂಲಕ ನೋಟಿಸ್ ಕೊಡಲಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
Parliament Elections 2024 Congress Manifesto: ಈ ಪ್ರಣಾಳಿಕೆ ಸಮಿತಿಯಲ್ಲಿ ಒಟ್ಟು 16 ಮಂದಿ ಇದ್ದಾರೆ. ಸಮಿತಿಗೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅಧ್ಯಕ್ಷರಾಗಿದ್ದರೆ, ಟಿಎಸ್ ಸಿಂಗ್ ದೇವ್ ಅವರು ಸಂಚಾಲಕರಾಗಿದ್ದಾರೆ. 3ನೇ ಸ್ಥಾನದಲ್ಲಿಯೇ ಸಿದ್ದರಾಮಯ್ಯರ ಹೆಸರಿದೆ.
Yuva Nidhi Eligibility criteria: ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು ಪ್ರತಿ ನೀಡಬೇಕು. ಪದವಿ, ಡಿಪ್ಲೊಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗಿರುವುದಿಲ್ಲ.
CM Siddaramaiah: ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61330 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ. ಸುಮಾರು 42000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.
ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯನವರು ಹೇಳಿದ್ದ ಸರ್ವಜನಾಂಗದ ಶಾಂತಿಯ ತೋಟ ಎಂಬುದನ್ನು ಬೊಗಳೆ ಎಂದು ಸಾಬೀತುಪಡಿಸಿ, ಈಗ “ಅಲ್ಪಸಂಖ್ಯಾತರ ಕಣ್ಣಿಗೆ ಬೆಣ್ಣೆ, ಉಳಿದವರ ಕಣ್ಣಿಗೆ ಸುಣ್ಣ” ಎಂಬ ನೀತಿ ಪಾಲಿಸುತ್ತಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ನಂಬಿಕೆ ದ್ರೋಹವೆಂದು ಬಿಜೆಪಿ ಟೀಕಿಸಿದೆ.
HD Kumaraswamy: ಕಾಂಗ್ರೆಸ್’ನ ದೊಡ್ಡ ಸಚಿವರು, ಕಾಂಗ್ರೆಸ್’ನ ಹಲವು ಶಾಸಕರು ಬಿಜೆಪಿ ಸೇರಬಹುದು. ಬಿಜೆಪಿ ಸೇರಲು ತಯಾರಿ ನಡೆಸುತ್ತಿರುವ ಸಚಿವರು ಕರ್ನಾಟಕ ರಾಜಕೀಯದಲ್ಲಿ ದೊಡ್ಡ ನಾಯಕರಾಗಿರುವ ಕಾರಣ ಕಾಂಗ್ರೆಸ್ ಸರ್ಕಾರಕ್ಕೆ ಮುಂಬರುವ ದಿನಗಳು ಸಂಕಷ್ಟದ ದಿನಗಳು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ʼಕರ್ನಾಟಕದ ಲೂಟಿಯ ಮಾಡೆಲ್ನ್ನು ಕಾಂಗ್ರೆಸ್ ದೇಶದಾದ್ಯಂತ ವಿಸ್ತರಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗುತ್ತಿಗೆದಾರರ ಮಂಚದ ಅಡಿ ಸಿಕ್ಕಂತೆಯೇ ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯರ ಮನೆಯಲ್ಲಿ ₹200 ಕೋಟಿ ಅಕ್ರಮ ಹಣ ಪತ್ತೆಯಾಗಿದೆ! ಭ್ರಷ್ಟಾಚಾರದ ನವ ಇತಿಹಾಸ ಬರೆಯುತ್ತಿರುವ ಕಾಂಗ್ರೆಸ್ ಶಾಸಕರ ಮನೆಯಲ್ಲಿ ಹುಡುಕಿದರೆ ಅದಕ್ಕಿಂತಲೂ ಹೆಚ್ಚು ಹಣ ಸಿಗಬಹುದು ಎಂದು ಬಿಜೆಪಿ ಟೀಕಿಸಿದೆ.
Karnataka PSI recruitment scam: ಕಲಬುರಗಿ ನಗರದ ಅಶೋಕ್ ನಗರ ಠಾಣೆಯಲ್ಲಿ ೫, ಸ್ಟೆಷನ್ ಬಜಾರ್ ಠಾಣೆಯಲ್ಲಿ ೨, ಚೌಕ್ ಠಾಣೆಯಲ್ಲಿ, ಧಾರವಾಡದ ಸಬ್ ಅರ್ಬನ್, ತುಮಕೂರಿನ ಕ್ಯಾತಸಂದ್ರ ಹಾಗೂ ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಗಳಲ್ಲಿ ದಾಖಲಾಗಿರುವ ತಲಾ ಒಂದೊಂದು ಎಫ್ಐಆರ್ ಮತ್ತು ಆರೋಪ ಪಟ್ಟಿಯನ್ನು ಒಟ್ಟಾಗಿಸಬೇಕು ಎಂದು ಆರ್.ಡಿ.ಪಾಟೀಲ್ ಮನವಿ ಮಾಡಿದ್ದ.
Majestic Nandini booths: ಪ್ರಚಾರದ ತೆವಲಿಗೆ ಬಿದ್ದು ನಂದಿನಿ ಬೂತ್ಗೆ ಹೋಗಿ ಉತ್ಪನ್ನಗಳನ್ನು ಖರೀದಿ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಇದೀಗ ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣದಲ್ಲಿನ ಶಾಪ್ಗಳನ್ನು ಕ್ಲೋಸ್ ಮಾಡಿಸುತ್ತಿದೆ. ಸೇವ್ ನಂದಿನಿ ಅಭಿಯಾನ ಇದೀಗ ಶುರುವಾಗಿದೆ ತುಘಲಕ್ ಸರ್ಕಾರದಿಂದ ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕಿದೆ.ʼ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಕಾಂಗ್ರೆಸ್ ಸರ್ಕಾರ ಬೀಳಿಸಲು ಕಾಂಗ್ರೆಸ್ 50 ಶಾಸಕರು ಸಿದ್ಧರಾಗವ್ರೆ ಕಾಂಗ್ರೆಸ್ಗೆ ಕಾಂಗ್ರೆಸ್ನವರೇ ಟಾಂಗ್ ಕೊಟ್ಟು ಸರ್ಕಾರ ಬೀಳಿಸ್ತಾರೆ ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ
Shri Guru Raghavendra Bank scandal: ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿರುವ ಆರೋಪ ಗುರು ರಾಘವೇಂದ್ರ ಬ್ಯಾಂಕ್ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಯಿಂದ ಸಾವಿರಾರು ಗ್ರಾಹಕರು ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು.
Bengaluru schools bomb threat case: ರಾಜ್ಯ ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Kanakadasa Jayanthi 2023: ದಾಸಶ್ರೇಷ್ಠ ಕನಕದಾಸರು ಸಮಾಜ ಸುಧಾರಕರಾಗಿದ್ದರು. ಅವರ ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಇಡೀ ಜಾತ್ಯಾತೀತವಾದ, ಮೇಲು-ಕೀಳು ಭೇದಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ ಮತ್ತು ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Self Employment Direct Loan Scheme: ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಜಾತಿಗೆ ಸೇರಿದ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವನ್ನು ಒದಗಿಸಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.