Anna Bhagya scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಹಾರ ಹಾಗೂ ಅಕ್ಕಿ ವಿತರಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಇದರ ನಡುವೆ ಹೊಸ ಪಡಿತರ ಚೀಟಿ ಕೊಡುವುದಕ್ಕೂ ಸಿದ್ದರಾಮಯ್ಯರ ಸರ್ಕಾರ ನಿರಾಕರಿಸಿದೆ ಎಂದು ಬಿಜೆಪಿ ಟೀಕಿಸಿದೆ.
Gruha Lakshmi Yojana: ಕಾಂಗ್ರೆಸ್ ಸರ್ಕಾರದ ‘ಗೃಹಲಕ್ಷ್ಮಿ ಯೋಜನೆ’ಯ ಉದ್ಗಾಟನೆಯನ್ನು ಆಗಸ್ಟ್ 27ರ ಬದಲು ಆಗಸ್ಟ್ 30ಕ್ಕೆ ಮುಂದೂಡಲಾಗಿದೆ. ಇದಲ್ಲದೆ ಬೆಳಗಾವಿ ಬದಲು ಮೈಸೂರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಅಕ್ರಮದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಶಾಮಿಲಾಗಿದ್ದಾರೆ ಅಂತಾ ಸ್ಥಳೀಯರು ಆರೋಪ ಮಾಡಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ಕಾಳದಂಧೆಯ ಅಕ್ಕಿ ಸಿಕ್ಕರೂ ಅಧಿಕಾರಿಗಳು ಜಾಣಮೌನ ವಹಿಸಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ.
National Education Policy 2020: ಎಲ್ಲವನ್ನೂ ರಾಜಕೀಯ ಪ್ರೇರಿತವಾಗಿ ನೋಡದೇ, ನಮ್ಮ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದಲೂ ನೋಡಬೇಕೆಂದು ರಾಜ್ಯದ ಜನತೆಯ ಪರವಾಗಿ ಒತ್ತಾಯಿಸುತ್ತಿದ್ದೇನೆ ಎಂದು ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಮಾಡಿದ್ದ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕ್ಷೇತ್ರ ಪುನರ್ ವಿಂಗಡಣೆಯನ್ನು ರದ್ದು ಮಾಡಿ ಮತ್ತೆ ರಾಜ್ಯ ಕಾಂಗ್ರೇಸ್ ಸರ್ಕಾರ ವಾರ್ಡ್ಗಳ ಸಂಖ್ಯೆಯನ್ನು 225 ಕ್ಕೆ ಸೀಮಿತಗೊಳಿಸಿ ಅಧಿಸೂಚನೆ ಹೊರಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದು ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಲು ಎಲ್ಲಾ ತಯಾರಿ ನಡೆಸುತ್ತಿದೆ.
Basavaraj Bommai Slams Congress government: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.
ಕಮಿಷನ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಪರಸ್ಪರ ಆರೋಪ ಮಾಡುತ್ತಿವೆ. ಈ ರಾಷ್ಟ್ರೀಯ ಪಕ್ಷಗಳಿಗೆ ದೇಶದ ಜನರ ಸಮಸ್ಯೆಗೆ ಪರಿಹಾರ ಬೇಕಿಲ್ಲ. 2 ರಾಷ್ಟ್ರೀಯ ಪಕ್ಷಗಳಿಗೆ ದೇಶದ ಹಣ ಲೂಟಿ ಹೊಡೆಯುವ ಚಿಂತೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
Fake Bill Scams: ಸಿಎಂ, ಡಿಸಿಎಂ ಕಿತ್ತಾಟದಲ್ಲಿ ಕಾಂಗ್ರೆಸ್ ಶಾಸಕರು ಅಂತೂ ಅನಾಥರಾಗಿದ್ದಾರೆ. ಯಾವುದೇ ಕ್ಷೇತ್ರವಿರಲಿ #ATMSarkaraಕ್ಕೆ ಕಮಿಷನ್ ಗ್ಯಾರಂಟಿ ಆದ್ರೆ ಮಾತ್ರ ಅನುದಾನಕ್ಕೆ ಪರ್ಮಿಷನ್..! ಎಂದು ಬಿಜೆಪಿ ಟೀಕಿಸಿದೆ.
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದರು.
N Chaluvaraya Swamy bribery case: ನಕಲಿ ಪೆನ್ ಡ್ರೈವ್ ಆಯ್ತು, ಶಾಸಕ ಬಿ.ಆರ್.ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು! ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
'ಕೈ'ಕಮಾಂಡ್ #ATMSarkaraಕ್ಕೆ ಕಲೆಕ್ಷನ್ ಟಾಸ್ಕ್ ನೀಡುತ್ತಿದೆ. ಅದನ್ನು ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಈಗ ಸಚಿವ ಎನ್.ಚೆಲುವರಾಯಸ್ವಾಮಿ ಸರದಿ. ಅಧಿಕಾರಿಗಳನ್ನು ಬಳಸಿಕೊಂಡು ಕಲೆಕ್ಷನ್ ಮಾಡಿ ಎನ್ನುವುದನ್ನು ಹೈಕಮಾಂಡ್ ಸಭೆಯಲ್ಲಿ ಸೂಚನೆ ಕೊಟ್ಟಿದ್ದೇ? ಎಂದು ಕಟೀಲ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವು ಶಕ್ತಿ ಯೋಜನೆಯನ್ನು ಅಸಮರ್ಪಕವಾಗಿ ಜಾರಿ ಮಾಡಿ ತಪ್ಪನ್ನು ನೌಕರರ ತಲೆಗೆ ಕಟ್ಟಲು ಮುಂದಾಗಿದೆ. ಮಹಿಳಾ ಪ್ರಯಾಣಿಕರ ಸಂಚಾರದ ಬಗ್ಗೆ ಸಾರಿಗೆ ಸಿಬ್ಬಂದಿಗಳು ಅಕ್ರಮವೆಸಗುತ್ತಿದ್ದಾರೆಂದು ಅವರಿಗೆ ಎಚ್ಚರಿಕೆಯ ನೋಟಿಸ್ ನೀಡಿದೆ ಎಂದು ಬಿಜೆಪಿ ಟೀಕಿಸಿದೆ.
ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಬಿಜೆಪಿಗೆ ಉತ್ತರ ಕರ್ನಾಟಕದ ಜನರ ಬಗ್ಗೆ, ದಲಿತರ ಬಗ್ಗೆ, ಕಪ್ಪುವರ್ಣದವರ ಬಗ್ಗೆ ನಿಜಕ್ಕೂ ಗೌರವ ಇದ್ದಿದ್ದೇ ಆದರೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರನ್ನು, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಹಾಗೂ ಉತ್ತರ ಕರ್ನಾಟಕದ ಜನತೆಯನ್ನು ಅತ್ಯಂತ ಕೀಳು ಅಭಿರುಚಿಯ ಮಾತುಗಳಿಂದ ಅವಮಾನಿಸಿದ ಆರಗ ಜ್ಞಾನೇಂದ್ರ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಬೇರೆ ಇಲಾಖೆಗಳಲ್ಲಿ ಮೂಗು ತೂರಿಸುವುದನ್ನು ಬಿಟ್ಟು ಮೊದಲು ಶುದ್ಧ ಕುಡಿಯುವ ನೀರು ಪೂರೈಕೆ, ಬಲಿಯಾಗುತ್ತಿರುವ ಅಮಾಯಕ ಜೀವಗಳ ಬಗ್ಗೆ ಸೊಲ್ಲೆತ್ತಲು ಸಮಯ ಕೊಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
Bhuvaneshwari Devi statue: ನಾಡದೇವಿ ಭುವನೇಶ್ವರಿಗೆ ಪ್ರತಿಮೆ ನಿರ್ಮಾಣ ಮಾಡುವ ಯೋಜನೆ ಎಲ್ಲಾ ಅನುಮತಿಯೂ ಪಡೆದು ಅನುದಾನ ಬಿಡುಗಡೆಯಷ್ಟೇ ಬಾಕಿ ಎಂದಾಗ ಕಾಂಗ್ರೆಸ್ ಸರ್ಕಾರ ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲ ಎನ್ನುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
Udupi Progress review meeting: ಅಧಿಕಾರಿಗಳಿಗೆ ಸ್ಥಾನಮಾನ, ಸಂಬಳ, ಸವಲತ್ತುಗಳು ಸಿಗುವುದು ಜನರ ತೆರಿಗೆ ಹಣದಿಂದ. ಜನಸ್ಪಂದನೆಗಾಗಿ ಕೆಲಸ ಮಾಡಲು ಸಾಕಷ್ಟು ಅಧಿಕಾರಿಗಳು ಇದ್ದಾರೆ. ಜನ ಸ್ಪಂದನೆಗೆ ಸಿದ್ಧರಿಲ್ಲದವರು ಸ್ಥಾನ ತ್ಯಾಗ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.