ನಗರದ ಕೆ. ಆರ್. ವೃತ್ತದ ಬಳಿ ಸರ್. ಮೋಕ್ಷಗುಂಡಂ ವಿಶ್ವೇಶ್ವರಯ್ಯಅವರ 163ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಪುತ್ಥಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಡಿ.ಕೆ. ಶಿವಕುಮಾರ್ ಮಾಲಾರ್ಪಣೆ ಮಾಡಿದರು.
ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ, ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎನ್ನುವ ಸೂಚನೆ ನೀಡಿದರು.
ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಯ ಅನುಷ್ಠಾನ ಸಂಬಂಧ ಮತ್ತು ಜಿಲ್ಲೆಯ ಪರಿಸ್ಥಿತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಸಭೆಯಲ್ಲಿ ಸಿಎಂ ಚರ್ಚಿಸಲಿದ್ದಾರೆ. ಜೊತೆಗೆ ಜಿಲ್ಲೆಗಳ ಮಳೆ ಸ್ಥಿತಿಗತಿ ಹಾಗೂ ಬೆಳೆ ಹಾನಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ನೆದರ್ಲೆಂಡ್ ಪ್ರಧಾನಿ ಮಾರ್ಕ್ ರಟ್ ಅವರು ಇಂದು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಬೆಂಗಳೂರು ಹಾಗೂ ನೆದರ್ಲೆಂಡ್ ನಡುವಿನ ಔದ್ಯಮಿಕ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ಕುರಿತು ಚರ್ಚಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.
ರಾಜ್ಯದ ನೆಲ ಜಲ ಭಾಷೆ ವಿಚಾರದಲ್ಲಿ ಪ್ರತಿಪಕ್ಷಗಳು ಪ್ರಶ್ನೆ ಮಾಡಿದರೆ, ಅದನ್ನು ರಾಜಕೀಯ ಎಂದು ಭಾವಿಸುವುದು ತಪ್ಪು. ಹಾಗೇ ಭಾವಿಸುವ ಪ್ರಶ್ನೆಯೇ ಬೇಕಿಲ್ಲ. ನೀರನ್ನು ಹರಿಸುವ ಮೊದಲೇ ಸರ್ವಪಕ್ಷ ಸಭೆ ಕರೆದಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು- ಹೆಚ್.ಡಿ. ಕುಮಾರಸ್ವಾಮಿ
ಕಾವೇರಿ ವಿಚಾರದಲ್ಲಿ ನಾವು ಕಾನೂನು, ಸಂವಿಧಾನ ಹಾಗೂ ಕೋರ್ಟ್ ಆದೇಶಕ್ಕೆ ಗೌರವ ನೀಡಬೇಕು. ಈ ಹಿಂದೆ ಇದ್ದ ಸರ್ಕಾರಗಳು ನ್ಯಾಯಾಲಯದ ಆದೇಶಗಳನ್ನು ಇದೇ ರೀತಿ ಪಾಲಿಸಿವೆ. ನೀರು ಬಿಡುಗಡೆ ಮಾಡಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ನಮ್ಮ ಹಕ್ಕನ್ನು ಅವರಿಗೆ ಬಿಟ್ಟು ಕೊಟ್ಟು, ತಾವು ಮಾಡಿದ ತಪ್ಪಿಗೆ. ರೈತರಿಗೆ ಸುಪ್ರೀಂ ಕೋರ್ಟಿಗೆ ಹೋಗಿ ಅಂತ ಹೇಳುತ್ತಿದ್ದಾರೆ. ರೈತರು ಸುಪ್ರೀಂಕೋರ್ಟಿಗೆ ಹೋಗಬೇಕಾದರೆ ನಿಮ್ಮನ್ನು ಯಾಕೆ ಆಯ್ಕೆ ಮಾಡಬೇಕಿತ್ತು ಇವರು ಯಾಕೆ ಸರಕಾರದಲ್ಲಿ ಅಧಿಕಾರ ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಬಿಜೆಪಿ ವಲಸೆ ಶಾಸಕರು ಮತ್ತೆ ಕಾಂಗ್ರೆಸ್ ಗೆ ಬಂದರೆ ಹೆಚ್ಚಿನ ಸ್ಥಾನಗಳನ್ನ ಗೆಲ್ಲಬಹುದು ಎಂಬ ಲೆಕ್ಕಾಚಾರ ಕೈ ಹಿರಿಯ ನಾಯಕರಲ್ಲಿದೆ. ಈ ಪೈಕಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವ ವಹಿಸಿದ್ದಾರೆ. ಆದರೆ ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಭಿನ್ನ ನಿಲುವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
Basavaraj Bommai : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದ ಎಟಿಎಂ ಸರ್ಕಾರದ ಮುಲಾಜಿನಲ್ಲಿದ್ದಾರೆ. ಹೀಗಾಗಿ ಅವರು ಗುತ್ತಿಗೆದಾರರಿಗೆ ಬಿಲ್ ಕೊಡಿಸಲು ಮಧ್ಯ ಪ್ರವೇಶ ಮಾಡುವುದಿಲ್ಲ. ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಲೋಕಸಭೆ ಗೆಲ್ಲಲ್ಲು ದೆಹಲಿಯಲ್ಲಿ ಕಾಂಗ್ರೆಸ್ ರಣತಂತ್ರ ನಡೆಸಿದೆ.. ನಿನ್ನೆ ಮೀಟಿಂಗ್ ಮಾಡಿ ಕಾಂಗ್ರೆಸ್ ನಾಯಕರಿಗೆ ಹೊಸ ಟಾರ್ಗೆಟ್ ನೀಡಿದೆ.. ಮುಂದಿನ ಲೋಕಸಭಾ ಚುನಾವಣೆ ಕಡೆ ಹೆಚ್ಚು ಗಮನವಿರಲಿ..
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಚಿವರ ವಿರುದ್ಧ ಶಾಸಕರು ಬರೆದಿದ್ದಾರೆ ಎನ್ನುವ ಪತ್ರ ಸುಳ್ಳು. ಈಗಾಗಲೇ ನಾವು ಶಾಸಕರ ಜೊತೆ ಮಾತನಾಡಿದ್ಧೇವೆ. ಈ ವರ್ಷ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡಲು ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.