ಕೋಮುಗಲಭೆ ಎಬ್ಬಿಸುವ ಕ್ರಿಮಿನಲ್ಗಳಿಗೆ ಬೆಂಬಲವಾಗಿ ರಾಜ್ಯದ ಕೋಮುವಾದಿ ಕಾಂಗ್ರೆಸ್ ಸರ್ಕಾರ ನಿಂತಿರುವುದಂತು ಸ್ಪಷ್ಟ. ಕೋಲಾರದಲ್ಲಿ ಆರಂಭವಾದ ಕೋಮುದಳ್ಳುರಿ, ಶಿವಮೊಗ್ಗವನ್ನು ದಾಟಿ, ಈಗ ವಿಜಯಪುರದ ಆಲಮಟ್ಟಿಗೆ ಕಾಲಿಟ್ಟಿದೆ ಎಂದು ಬಿಜೆಪಿ ಟೀಕಿಸಿದೆ.
ಐಸಿಸ್ ಜೊತೆ ನಂಟು ಹೊಂದಿರುವ ಕಾರಣ, ರಾಜ್ಯದ ಧಾರವಾಡ, ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಕೇಂದ್ರ ತನಿಖಾ ದಳವು ಉಗ್ರರನ್ನು ಬಂಧಿಸುತ್ತಿದೆ. ಇಷ್ಟು ವರ್ಷ ಶಾಂತಿಯ ನೆಲೆಬೀಡಾಗಿದ್ದ ಕರ್ನಾಟಕ, ದಿಢೀರ್ ಅಂತಾ ಉಗ್ರರ ವಾಸಸ್ಥಾನವಾಗಿ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣವೆಂದು ಬಿಜೆಪಿ ಆರೋಪಿಸಿದೆ.
Hindu Rashtra: ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
ಈಗಾಗಲೇ ಕಲುಷಿತ ನೀರಿಗೆ ಸಾಕಷ್ಟು ಜೀವಗಳು ಬಲಿಯಾಗಿವೆ, ಹೀಗಿರುವಾಗಲೂ ಎಲ್ಲಾ ಇಲಾಖೆಯ ಒಳಗೂ ಮೂಗು ತೂರಿಸುವ ನೀವು ಜಿಲ್ಲಾ ಸಿಇಒಗಳಿಗೆ ಸೂಚನೆ ನೀಡಿ ಕೈ ತೊಳೆದುಕೊಂಡರೆ ಸಾಕೇ? ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಇತ್ತೀಚೆಗೆ 490 ಪಿಎಸ್ಐ ನೇಮಕಾತಿ ದೈಹಿಕ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಇದೇ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಾಳೆ ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ನಡೆಯುತ್ತವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪ್ರಮಾಣ ವಚನ ಸ್ವೀಕರಿಸುವ ದಿನವನ್ನು ಮುಂದೂಡಬಹುದಲ್ಲವೇ..? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
Karnataka new Cabinet ministers : ದೆಹಲಿಯಲ್ಲಿರುವ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್ ಜೊತೆಯಲ್ಲಿ ಸಂಪುಟ ರಚನೆ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಶೀರ್ಘದಲ್ಲೆ ಹೊಸ ಸಚಿವರ ಪಟ್ಟಿಯನ್ನು ಸಿದ್ಧಪಡಿಸಲಿದ್ದಾರೆ.
Karnataka assembly elections 2023: ತಮಗೆ & ಡಿ.ಕೆ.ಶಿವಕುಮಾರ್ ಅವರಿಗೆ ಸಿದ್ದರಾಮಯ್ಯರಂತೆ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಅಗತ್ಯವಿಲ್ಲವೆಂದು ಡಾ.ಜಿ.ಪರಮೇಶ್ವರ್ ಹೇಳುವ ಮೂಲಕ ಸಿದ್ದರಾಮಯ್ಯ ಬಣಕ್ಕೆ ಬಹಿರಂಗ ಗುದ್ದು ನೀಡಿದ್ದಾರೆ ಎಂದು ಟೀಕಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.