ಗದಗ ಜಿಲ್ಲೆಯಲ್ಲಿ ಬೆಳವಣಿಕಿ ಎಂದರೆ ಅದು ಕಾಮ್ರೇಡ್ ಗಳ ಊರು ಎನ್ನುವಷ್ಟರ ಮಟ್ಟಿಗೆ ಈ ಗ್ರಾಮ ಜನಜನಿತವಾಗಿದೆ.ಕಳೆದ ಎರಡು ದಶಕಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾದ ರಾಜಕಾರಣವನ್ನು ಕಟ್ಟಲು ಈ ಗ್ರಾಮದ ಸಂಗಾತಿಗಳು ಬಿಸಿಯೂಟ ನೌಕರರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ನೌಕರರು,ಹಾಗೂ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಹೀಗೆ ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ಆ ಮೂಲಕ ಕಳೆದ 20 ವರ್ಷಗಳ ಅವಧಿಯಲ್ಲಿ ಗ್ರಾಮದ ಮಟ್ಟದಲ್ಲಿ ನಿರ್ಣಾಯಕ ರಾಜಕೀಯ ಶಕ್ತಿಯಾಗಿದ್ದಾರೆ.ಈ ಕಾರಣಕ್ಕಾಗಿ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಗ್ರಾಪಂ ಚುನಾವಣೆಯಲ್ಲಿ ಪ್ರಬಲ ಸ್ಪರ್ಧಿಗಳಾಗಿ ಹೊರಹೊಮ್ಮುತ್ತಿದ್ದಾರೆ.ಈ ಬಾರಿ ನಡೆದ ಗ್ರಾಮ ಪಂಚಾಯತ್ ಚುನಾವಣೆ (
ಮತದಾರರನ್ನು ತಲುಪುವುದಕ್ಕಾಗಿ ಅಭ್ಯರ್ಥಿಗಳು ಡಿಜಿಟಲ್ ವ್ಯವಸ್ಥೆಯ ಮೊರೆಹೋಗಿದ್ದು, ತಾವು ಮಾಡಿರುವ ಕೆಲಸಗಳನ್ನು ಹಾಗೂ ಮತದಾರರನ್ನು ಸೆಳೆಯುವುದಕ್ಕಾಗಿ ಅಗತ್ಯವಿರುವುದನ್ನು ಸೋಶಿಯಲ್ ಮೀಡಿಯಾ ಹಾಗೂ ಸ್ಮಾರ್ಟ್ ಫೋನ್ ಗಳ ಮೂಲಕ ಪ್ರಚಾರ
ಗದಗ ಜಿಲ್ಲೆಯ ಬೆಟಗೇರಿ ಹೊಬಳಿಯ ಚಿಕ್ಕೊಪ್ಪ, ಹಿರೇಕೊಪ್ಪ, ಹುಯಿಲಗೋಳ, ಗಾವರವಾಡ ಮುಂತಾದ ಗ್ರಾಮಗಳಿಗೆ ಕೀಟ ಮತ್ತು ರೋಗ ಬಾಧಿತ ಕ್ಷೇತ್ರಗಳನ್ನು ಕೃಷಿ ವಿಶ್ವವಿಧ್ಯಾಲಯ, ಧಾರವಾಡದ ವಿಜ್ಞಾನಿ ಡಾ.ಎಸ್.ಪಿ.ಹುಂಡೇಕರ ಇವರೊಂದಿಗೆ ಕೃಷಿ ಅಧಿಕಾರಿ ಹೇಮಾ ಮೊರಬ ಮತ್ತು ಸಹಾಯಕ ಕೃಷಿ ಅಧಿಕಾರಿ ಎಮ್.ಜಿ.ಬೆಟದೂರ ಇವರು ವೀಕ್ಷಿಸಿದರು. ವಿವಿಧ ಬೆಳೆಗಳ ರೋಗ ಮತ್ತು ಕೀಟಗಳ ನಿರ್ವಹಣಾ ಕ್ರಮಗಳನ್ನು ರೈತರೊಂದಿಗೆ ಹಂಚಿಕೊಂಡರು.
ಹೋಂ ಕ್ವಾರಂಟೈನ್, ಸಾಂಸ್ಥಿಕ ಕ್ವಾರಂಟೈನ್ನಲ್ಲಿರುವ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಕ್ವಾರಂಟೈನ್ ಪ್ರದೇಶದಿಂದ ಬೇರೆ ಕಡೆಗೆ ಚಲನ ವಲನ ಮಾಡುವುದಾಗಲಿ ಅಥವಾ ತಮ್ಮ ಮೊಬೈಲ್ಗಳನ್ನು ಸ್ವಿಚಾಫ್ ಮಾಡಬಾರದು. ಒಂದು ವೇಳೆ ಉದ್ದೇಶಪೂರ್ವಕವಾಗಿ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಥವಾ ಮೊಬೈಲ್ ಸ್ವಿಚಾಫ್ ಮಾಡಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಐ.ಪಿ.ಸಿ. ಸೆಕ್ಷನ್ 188 ರನ್ವಯ ಎಫ್ಐಆರ್ (FIR) ದಾಖಲಿಸಲಾಗುವುದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಗದಗಿನ ಸುನಿಲ್ ಜೋಶಿ ಬಿಸಿಸಿಐನ ಆಯ್ಕೆ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.ಈ ಸಂದರ್ಭದಲ್ಲಿ ಗಲ್ಲಿ ಕ್ರಿಕೆಟ್ ನಿಂದ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ತಮ್ಮದೇ ಛಾಪು ಮೂಡಿಸಿದ ಅವರ ಪಯಣ ನಿಜಕ್ಕೂ ಎಲ್ಲರಿಗೂ ಸ್ಫೂರ್ತಿದಾಯಕ ಎನ್ನಬಹುದು.
ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಂಗೀಂದ್ರ ನೇತೃತ್ವದಲ್ಲಿ ನಡೆದ ಪೀಠಾರೋಹಣ ಸಮಾರಂಭದಲ್ಲಿ ಗದಗಿನ ತೋಂಟದಾರ್ಯ ಮಠದ ಪೀಠಾಧ್ಯಕ್ಷರಾಗಿ ಡಾ.ಸಿದ್ದರಾಮ ಸ್ವಾಮೀಜಿ ಅಧಿಕಾರ ವಹಿಸಿಕೊಂಡರು.
ಶನಿವಾರದಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ ಶರಣ ಶ್ರೀ ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿಗಳ ಅಂತ್ಯಕ್ರಿಯೆಗೆ ಇಂದು ಸಾವಿರಾರು ಜನರ ಸಾಗರವೇ ಹರಿದುಬಂದಿತು.ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀಗಳನ್ನು ಗದುಗಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಶನಿವಾರದಂದು ಡಾ. ತೋಂಟದಾರ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೃದಯಾಘಾತದಿಂದ ಕೊನೆಯುಸಿರೆಳೆದ ಹಿನ್ನೆಲೆಯಲ್ಲಿ ಈಗ ಮಠದ 20ನೇ ಪೀಠಾಧಿಪತಿಯಾಗಿ ಶ್ರೀ ಮ.ನಿ.ಪ್ರ ನಾಗನೂರು ರುದ್ರಾಕ್ಷಿಮಠದ ಸಿದ್ದರಾಮ ಮಹಾಸ್ವಾಮಿ ಅವರು ಆಯ್ಕೆ ಮಾಡಲಾಗಿದೆ.
ಕನ್ನಡ ಮತ್ತು ಕರ್ನಾಟಕದ ಸಾಕ್ಷಿ ಪ್ರಜ್ಞೆಯಂತಿದ್ದ ಗದುಗಿನ ಶ್ರೀ ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿಗಳು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ಈಗ ಶ್ರೀಗಳೊಂದಿಗಿನ ಒಡನಾಟದ ಬಗ್ಗೆ ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.