Crime News: ಹುಬ್ಬಳ್ಳಿ ಜಿಲ್ಲೆಯ ಆನಂದ ನಗರದ ಘೋಡಕೆ ಪ್ಲಾಟ್'ನ ನಿವಾಸಿಯಾಗಿದ್ದ ಮಂಜುಳಾ ಮುತ್ತಳಿ ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದು, ಇಂದು ಬೆಳಿಗ್ಗೆ ಆಕೆಯ ಗಂಡ ಭೀಮಪ್ಪ ಹಣಕಾಸಿನ ವಿಚಾರಕ್ಕೆ ಜಗಳ ತೆಗೆದಿದ್ದಾನೆ.
ಕಳೆನಾಶಕ ಸಿಂಪಡಿಸುದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ ನಾಯಕ್ ಮೃತ ದುರ್ದೈವಿ.
11 ಜಿಲ್ಲೆಗಳಲ್ಲಿ ಕೈಗಾರಿಕೆ, ವ್ಯಾಪಾರ ಸ್ಥಗಿತ ಹಲವೆಡೆ ವಾಣಿಜ್ಯ ವಹಿವಾಟು ಭಾಗಶಃ ಸ್ಥಬ್ಧ ಬೀದರ್ ಧಾರವಾಡ, ವಿಜಯಪುರ ಬೆಳಗಾವಿ ಉತ್ತರಕನ್ನಡ, ಹುಬ್ಬಳಿ ವಿಜಯನಗರ ಮೈಸೂರು ಉ.ಕರ್ನಾಟಕದ 25 ಸಂಸ್ಥೆಗಳಿಂದ ಬಂದ್ಗೆ ಬೆಂಬಲ
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ 22 ನೆ ಅವಧಿಗೆ ಮಹಾಪೌರರಾಗಿ 49 ನೇ ವಾರ್ಡ್ ಸದಸ್ಯೆ ವೀಣಾ ಚೇತನ ಬರದ್ವಾಡ ಅವರು ಅತಿ ಹೆಚ್ಚು (46) ಮತಗಳನ್ನು ಪಡೆದು ಆಯ್ಕೆ ಆಗಿದ್ದಾರೆ ಮತ್ತು ಪಾಲಿಕೆಯ 32 ನೇ ವಾರ್ಡ್ ಸದಸ್ಯ ಸತೀಶ ಸುರೇಂದ್ರ ಹಾನಗಲ್ ಅವರು ಉಪಮಹಾಪೌರರಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾ ಅಧ್ಯಕ್ಷಾಧಿಕಾರಿ ಆಗಿದ್ದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅವರು ಪ್ರಕಟಿಸಿದರು.
ಮುಂದೆ ಹೋಗುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಅತಿಜೋರಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ತಲೆ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಗದಗ ರಸ್ತೆಯ ನಳಂದಾ ಕಾಲೇಜು ಬಳಿ ನಡೆದಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ತಮ್ಮ ಚುನಾವಣೆ ಸೋಲಿನ ಆತ್ಮವಲೋಕನ ಸಭೆ ಕರೆದಿದ್ರು. ಈ ವೇಳೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಹಾಗೂ ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ರು. ಇದೇ ವೇಳೆ ಬಿಜೆಪಿ ನಾಐಕರ ವಿರುದ್ಧ ಹರಿಹಾಯ್ದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ದಿಲ್ಲಿಯ ಬಿಜೆಪಿ ನಾಯಕರು ನೀರಿಕ್ಷೆ ಮಾಡಿರಲಿಲ್ಲ ಎಂದು ಕುಟುಕಿದ್ರು
14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ದಾಳಿಯಲ್ಲಿ ಸಿಕ್ಕಿರುವ ಬಾಲ ಕಾರ್ಮಿಕ ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.
Rain Effect: ಕಿಮ್ಸ್ ಆಸ್ಪತ್ರೆಯ ನಿರ್ವಹಣೆಗಾಗಿ ಪ್ರತಿವರ್ಷ ಕೋಟ್ಯಾಂತರ ರೂಪಾಯಿ ಅನುದಾನ ಹರಿದು ಬಂದರು ಕೂಡಾ ಆ ಅನುದಾನ ಹರಿದು ಎಲ್ಲೋ ಸೇರುವುದರಿಂದ, ಮಳೆಯ ನೀರು ಮಾತ್ರ ಕಿಮ್ಸ್ ಆಸ್ಪತ್ರೆಯ ಒಳಗಡೆ ಸೇರುತ್ತಿದ್ದು ಕಿಮ್ಸ್ ಆಸ್ಪತ್ರೆಯ ಅವ್ಯವಸ್ಥೆ ಇಲ್ಲಿನ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಹುಬ್ಬಳ್ಳಿಯ ಕಾರವಾರ ರಸ್ತೆಯ ಕೆಂಪಗೇರಿ ಮತ್ತು ಧಾರವಾಡದ ಹೊಸ ಯಲ್ಲಾಪುರದ ತ್ಯಾಜ್ಯ ಘಟಕದಲ್ಲಿ ವರ್ಷಗಳಿಂದ ಗುಡ್ಡದಂತೆ ಸಂಗ್ರಹವಾಗಿರುವ ತ್ಯಾಜ್ಯದ ವಿಲೇವಾರಿಗೆ ಪಾಲಿಕೆ ಟೆಂಡರ್ ಕರೆದಿದೆ. ಕೆಂಪಗೇರಿ ಘಟಕದಲ್ಲಿರುವ ಅಂದಾಜು 3.6 ಲಕ್ಷ ಟನ್ ಹಳೆಯ ತ್ಯಾಜ್ಯ ತೆರವಿಗೆ 22.70 ಕೋಟಿ ಮತ್ತು ಹೊಸ ಯಲ್ಲಾಪುರದಲ್ಲಿರುವ 1.2 ಲಕ್ಷ ಟನ್ ತ್ಯಾಜ್ಯ ತೆರವಿಗೆ 7.15 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ.
Jagadish Shetter : 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ. ಕಾಂಗ್ರೆಸ್ನ ಅಭ್ಯರ್ಥಿಗಳು ರಾಜ್ಯಾದ್ಯಂತ ಮುನ್ನಡೆಯಲ್ಲಿದ್ದಾರೆ. ಆದರೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಹಿನ್ನಡೆ ಅನುಭವಿಸಿದ್ದಾರೆ.
Karnataka Vidhansabha Chunav 2023 Latest Update: ಹುಬ್ಬಳ್ಳಿಯ ಚನ್ನಪೇಟ್ನಲ್ಲಿರುವ ಅಂಬೇಡ್ಕರ್ ನಗರದಲ್ಲಿ ಮತಗಟ್ಟೆಯ ಗೋಡೆಯ ಸುತ್ತ ಭಾರತೀಯ ಸಾಂಪ್ರದಾಯಿಕವಾದ ಚಿತ್ರಕಲೆಗಳ ಆಕರ್ಷಕವಾದ ದೃಶ್ಯಗಳು ಕಂಡು ಬಂದಿದ್ದು ಮತದಾರರನ್ನು ಆಕರ್ಷಿಸಲು ಈ ರೀತಿಯ ವಿಭಿನ್ನ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.
Karnataka Vidhansabha Chunav 2023 Latest Update: ಹೌದು ! ಕುಂದಗೋಳ ತಾಲೂಕಿನ ಬಹುತೇಕ ಮತಗಟ್ಟೆಗಳಲ್ಲಿ ವಯೋವೃದ್ಧರು ತಮ್ಮ ತಮ್ಮ ಮಕ್ಕಳನ್ನು ಕರೆದುಕೊಂಡು ಉರಿ ಬಿಸಿಲಿನಲ್ಲಿ ಆಟೋ ಮಾಡಿಕೊಂಡು ಮತಗಟ್ಟೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ.
Karnataka Vidhansabha Chunav 2023 Latest Update: ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಮತ ಕೇಂದ್ರದಲ್ಲಿ ಗೊಂದಲ ಉಂಟಾಗಿದೆ. ಹೌದು.. ಒಂದೇ ಮತ ಕೇಂದ್ರದಲ್ಲಿ 400 ಕ್ಕೂ ಅಧಿಕ ಮತದಾರರ ಹೆಸರುಗಳು ಡಿಲೀಟ್ ಆಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕ ಚುನಾವಣೆ 2023: ಹುಬ್ಬಳ್ಳಿಯಲ್ಲಿ ಮತದಾರರ ಜೊತೆಗೆ ಬೆಕ್ಕು ಕೂಡ ಮತಗಟ್ಟೆಗೆ ಬಂದಿರುವ ಘಟನೆ ನಡೆದಿದೆ. ಈ ಬೆಕ್ಕನ್ನು ಕಂಡು ಮತಗಟ್ಟೆ ಸಿಬ್ಬಂದಿ ಅಚ್ಚರಿ ಗೊಂಡಿದ್ದು, ಅದನ್ನು ದೂರ ಕಳುಹಿಸಲು ಕೂಡ ಪ್ರಯತ್ನಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿಂದು ಅಮಿತ್ ಶಾ ಭರ್ಜರಿ ಮತಬೇಟೆ. ಚಿಕ್ಕೋಡಿ ವಿಭಾಗದ 4 ಕ್ಷೇತ್ರದಲ್ಲಿ ಬಿಜೆಪಿ ಚಾಣಕ್ಯನ ಸಭೆ. 12 ಗಂಟೆಗೆ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಸಭೆ. ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಮತಯಾಚನೆ.
ಇಂದು ಕಾಫಿನಾಡಿಗೆ ಆಗಮಿಸಲಿರುವ ಯೋಗಿ ಆದಿತ್ಯನಾಥ್. ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಯೋಗಿ ಮತ ಪ್ರಚಾರ. ಡಿ.ಎನ್.ಜೀವರಾಜ್ ಪರ ಮತ ಪ್ರಚಾರ ಮಾಡಲಿರುವ ಯೋಗಿ. ಬೆಳಗ್ಗೆ 10.15ಕ್ಕೆ ಹರಿಹರಪುರ ಹೆಲಿಪ್ಯಾಡ್ಗೆ ಯೋಗಿ ಆಗಮನ. ಹರಿಹರಪುರದಿಂದ ರಸ್ತೆ ಮೂಲಕ ಕೊಪ್ಪಕ್ಕೆ ಆಗಮಿಸಲಿರುವ ಯೋಗಿ.
ರಾಜ್ಯ ಚುನಾವಣಾ ಅಖಾಡಕ್ಕಿಂದು ಸೋನಿಯಾ ಗಾಂಧಿ ಎಂಟ್ರಿ. ಹುಬ್ಬಳ್ಳಿಯಲ್ಲಿಂದು ಸೋನಿಯಾ ಗಾಂಧಿ ಭರ್ಜರಿ ಮತಯಾಚನೆ. ಹುಬ್ಬಳ್ಳಿ ಪೂರ್ವ, ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ. ಬೆಳಗ್ಗೆ 11ಕ್ಕೆ ಹುಬ್ಬಳ್ಳಿಗೆ ಆಗಮಿಸಲಿರುವ ಸೋನಿಯಾ ಗಾಂಧಿ. ಹುಬ್ಬಳ್ಳಿಯಲ್ಲಿ ಬಿಜೆಪಿ ಹೈಕಮಾಂಡ್ಗೆ ಕೌಂಟರ್ ನೀಡಲು ಪ್ಲ್ಯಾನ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.