Independence Day 2023 : ಉರ್ಫಿ ಜಾವೇದ್ ಆಗಸ್ಟ್ 15 ರಂದು ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಫೋಟೋವನ್ನು ನೋಡಿದ ಅಭಿಮಾನಿಗಳು ಹುಚ್ಚರಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಜನರ ಗಮನವನ್ನು ಸೆಳೆಯುತ್ತಿದ್ದಾರೆ.
ಭಾರತವು ತನ್ನ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳನ್ನು ಉತ್ತರ ಕಾಶ್ಮೀರದ ಗಡಿ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕದಡಲು ಭಯೋತ್ಪಾದಕರು ಗಡಿಯಾಚೆಗೆ ನುಸುಳಲು ಪ್ರಯತ್ನಿಸಬಹುದು ಎಂದು ಭದ್ರತಾ ಪಡೆಗಳಿಗೆ ಮಾಹಿತಿ ಇದೆ.
ಕಳೆದ ಒಂದು ತಿಂಗಳಲ್ಲಿ, ಎಲ್ಒಸಿ ಮತ್ತು ಅಂತರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪಡೆಗಳು ಸುಮಾರು ಒಂದು ಡಜನ್ ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸಿವೆ. ಈ ಒಳನುಸುಳುವಿಕೆ ಪ್ರಯತ್ನಗಳಲ್ಲಿ ಅರ್ಧ ಡಜನ್ ಭಯೋತ್ಪಾದಕರು ಹತ್ಯೆಯಾಗಿದ್ದಾರೆ.
Lalbagh fruit and flower show : ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
Flower Show At Lalbagh: ಈ ವರ್ಷ ಕರ್ನಾಟಕದ ಶಕ್ತಿ ಸೌಧ ಎಂತಲೇ ಕರೆಯಲ್ಪಡುವ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್ ನಲ್ಲಿ ಫ್ಲವರ್ ಶೋ ನಡೆಯಲಿದೆ. ರಾಜ್ಯದ ಹಿರಿಮೆ ಹಿಗ್ಗಿಸಿದ ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಅವರ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ಫಲಪುಷ್ಪ ಫಲಕಗಳ ಮೂಲಕ ತಿಳಿಸಲಾಗುತ್ತಿದೆ.
ಬಂಧಿತರು ಭಾರತಕ್ಕೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೇ ಪಾಕಿಸ್ತಾನದ ರಾಷ್ಟ್ರಗೀತೆ ಹಾಕಿದ್ದರು. ಅಷ್ಟಲ್ಲದೆ ಆ್ಯಪ್ ನಲ್ಲಿ ಇದ್ದ ಹತ್ತೂ ಜನರು ಕೂಡ ತಮ್ಮ ಡಿಪಿಗಳಲ್ಲಿ ಪಾಕಿಸ್ತಾನದ ಫ್ಲಾಗ್ ಹಾಕಿದ್ರು .
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಮಲಾರಪಾಳ್ಯದಲ್ಲಿ ನಿವೃತ್ತ ಸೈನಿಕ ನವೀನ್ ಅವರ ಸ್ಮಾರಕದ ಮುಂದೆ 9 ವರ್ಷದ ಪುತ್ರಿ ಹನಿ ಎಂಬಾಕೆ ಕೊಳಲಿನಲ್ಲಿ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನ ಆಚರಿಸಿದ್ದಾಳೆ. ಮಗಳ ಈ ನಮನಕ್ಕೆ ತಾಯಿ ಭವ್ಯಾ ಸಾಥ್ ಕೊಟ್ಟಿದ್ದಾರೆ. ಕೆಲ ವರ್ಷಗಳ ಹಿಂದೆ ನವೀನ್ ಅಪಘಾತದಲ್ಲಿ ಅಸುನೀಗಿದ್ದರು. ಅದಾದ ಬಳಿಕ, ಸ್ವಾತಂತ್ರ್ಯ ದಿನದಂದು ನಮನ ಸಲ್ಲಿಸುವುದನ್ನು ಕುಟುಂಬ ರೂಢಿಸಿಕೊಂಡಿದೆ.
ಭಾರತ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ.ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಲು ನಾವು ರಾಷ್ಟ್ರಧ್ವಜ ಹಿಡಿದು ಹೆಜ್ಜೆ ಹಾಕಬೇಕಿದೆ ಎಂದು ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಒಟ್ಟು 8 ಬೆದರಿಕೆ ಕರೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಇದಾದ ಬಳಿಕ ಆಸ್ಪತ್ರೆಯ ಜನರು ಡಿಬಿ ರೋಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಈ ಕರೆಯನ್ನು ಪರಿಶೀಲಿಸುತ್ತಿದ್ದಾರೆ.
Independence Day 2022: ಆತ್ಮ ನಿರ್ಭರ ಭಾರತ ಪ್ರತಿಯೊಬ್ಬ ನಾಗರಿಕನ, ಪ್ರತಿ ಸರ್ಕಾರದ, ಸಮಾಜದ ಪ್ರತಿಯೊಂದು ಘಟಕದ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದು ಸರ್ಕಾರದ ಅಜೆಂಡಾ ಅಥವಾ ಸರ್ಕಾರಿ ಕಾರ್ಯಕ್ರಮವಲ್ಲ. ಇದು ಸಮಾಜದ ಸಾಮೂಹಿಕ ಆಂದೋಲನವಾಗಿದ್ದು, ಇದನ್ನು ಮುಂದುವರೆಸಿಕೊಂಡು ಹೋಗಬೇಕಾಗಿ ಕರೆ ನೀಡಿದ್ದಾರೆ.
Independence day 2022 : ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ, ರಾಜ್ಯಕ್ಕೆ ಐದು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಸ್ವಚ್ಛತೆ, ಪೌಷ್ಠಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕೆ ಹಾಗೂ ಸೈನಿಕರ ಕ್ಷೇಮಾಭಿವೃದ್ಧಿಗೆ ಕೆಲವು ಕೊಡುಗೆ ನೀಡಲು ಸರ್ಕಾರದ ಹೊಸ ಯೋಜನೆ ಘೋಷಿಸಿದೆ.
ಇಂದು, ದೇಶದಾದ್ಯಂತ ಸ್ವಾತಂತ್ರ್ಯ ದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 75 ವರ್ಷವಾಗಲಿದೆ. ಈ ಖುಷಿಯಲ್ಲಿ ಭಾರತೀಯರು ಸ್ವಾತಂತ್ರ್ಯದ ಅಮೃತೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ರಾಷ್ಟ್ರೀಯ ಹಬ್ಬವೂ ವಿಶೇಷ ಎನ್ನುವಂತಾಗಿದೆ. ಆದರೆ ಭಾರತದ ಪ್ರಜೆಗಳು ಸ್ವಾತಂತ್ರ್ಯದ ಅಮೃತ ಹಬ್ಬವನ್ನು ಹೇಗೆ ಆಚರಿಸುತ್ತಿದ್ದಾರೆ. ಅವರ ಜೊತೆಗೆ ಇತರ 5 ದೇಶಗಳು ಸಹ ಈ ದಿನ ಭಾರತದೊಂದಿಗೆ ತಮ್ಮ ಸ್ವಾತಂತ್ರ್ಯವನ್ನು ಆಚರಿಸುತ್ತವೆ ಎಂಬುದು ನಿಮಗೆ ತಿಳಿಯಬೇಕಾದ ಸಂಗತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.