ಭಾರತದ ಮಹತ್ವಾಕಾಂಕ್ಷೆಯ ಮಿಶನ್ ಚಂದ್ರಯಾನ್-2 ರ ವಿಕ್ರಮ್ ಲ್ಯಾಂಡರ್ ಅನ್ನು ನಾವು ಪತ್ತೆಹಚ್ಚಿರುವುದಾಗಿ ಹೇಳಿಕೊಂಡ ಅಮೇರಿಕದ ಬಾಹ್ಯಾಕಾಶ ಸಂಸ್ಥೆ(NASA)ಗೆ ಇಸ್ರೋ ತಿರುಗೇಟು ನೀಡಿದೆ.
ಇಸ್ರೋ(ISRO)ದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ್-2 ಸೆಪ್ಟೆಂಬರ್ 7 ರಂದು ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡುವ ವೇಳೆ ಪತನಗೊಂಡಿತ್ತು. ಇದೀಗ ಅದರ ಅವಶೇಷಗಳನ್ನು ನಾಸಾ(NASA) ಪತ್ತೆಹಚ್ಚಿದ್ದು, ಅದರ ಕೀರ್ತಿಯನ್ನು ಚೆನ್ನೈ ಮೂಲದ ಯುವ ಇಂಜಿನಿಯರ್ ಷಣ್ಮುಗ ಸುಬ್ರಮಣಿಯನ್ ಅವರಿಗೆ ನೀಡಿದೆ.
ನಾಸಾ ತನ್ನ ಲೂನಾರ್ ರೆಕಾನೈಸನ್ಸ್ ಆರ್ಬಿಟರ್ (LRO) ಕ್ಯಾಮೆರಾ ಕ್ಲಿಕ್ ಮಾಡಿದ ಚಿತ್ರಗಳನ್ನು ಪೋಸ್ಟ್ ಮಾಡಿದೆ. ಇದು ಚಂದ್ರನ ಮೇಲೆ ಸೈಟ್ನ ಬದಲಾವಣೆಗಳನ್ನು ಮತ್ತು ಬಾಹ್ಯಾಕಾಶ ನೌಕೆ ಚಂದ್ರನ ಮೇಲ್ಮೈಯಲ್ಲಿ ಕಠಿಣವಾದ ಇಳಿಯುವಿಕೆಯನ್ನು ಮಾಡಿದ ಮೊದಲು ಮತ್ತು ನಂತರದ ಪ್ರಭಾವದ ಸ್ಥಳವನ್ನು ತೋರಿಸುತ್ತದೆ. ಲ್ಯಾಂಡರ್ನ ಪ್ರಭಾವದ ಸ್ಥಳ ಮತ್ತು ಅನುಕ್ರಮವಾಗಿ ನೀಲಿ ಮತ್ತು ಹಸಿರು ಚುಕ್ಕೆಗಳೊಂದಿಗೆ ವಿಕ್ರಮ್ ಲ್ಯಾಂಡರ್ ಇಳಿದಿರುವಾಗ ರಚಿತವಾದ ಸಂಬಂಧಿತ ಶಿಲಾಖಂಡರಾಶಿಗಳ ಕ್ಷೇತ್ರವನ್ನೂ ಇದು ತೋರಿಸಿದೆ.
Cartosat-3 ಉಪಗ್ರಹವು ಮೂರನೇ ತಲೆಮಾರಿನ ಸುಧಾರಿತ ಉಪಗ್ರಹವಾಗಿದ್ದು, ಉತ್ತಮ ಗುಣಮಟ್ಟದ ಛಾಯಾಚಿತ್ರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನು 509 ಕಿಲೋಮೀಟರ್ ಎತ್ತರದಲ್ಲಿರುವ ಕಕ್ಷೆಯಲ್ಲಿ 97.5 ಡಿಗ್ರಿಗಳಷ್ಟು ಹೊಂದಿಸಲಾಗುವುದು.
ಇಸ್ರೋ ಶುಕ್ರವಾರದಂದು ಚಂದ್ರಯಾನ -2 ರ ಅಧಿಕ ರೆಸಲ್ಯೂಶನ್ ಕ್ಯಾಮೆರಾ ತೆಗೆದ ಚಂದ್ರನ ಮೇಲ್ಮೈಯ ಚಿತ್ರಗಳನ್ನು ಹಂಚಿಕೊಂಡಿದೆ. ಆರ್ಬಿಟರ್ ಹೈ ರೆಸಲ್ಯೂಷನ್ ಕ್ಯಾಮೆರಾ ಚಂದ್ರನ ಅಧಿಕ ರೆಸಲ್ಯೂಶನ್ ಹೊಂದಿರುವ ಚಿತ್ರಗಳನ್ನು ನೀಡುತ್ತದೆ ಎಂದು ಇಸ್ರೋ ಹೇಳಿದೆ.
ಚಂದ್ರಯಾನ-2 ಆರ್ಬಿಟರ್ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ, ವಿಕ್ರಮ್ ಲ್ಯಾಂಡರ್ ನಿಂದ ಇನ್ನೂ ಯಾವುದೇ ಸಿಗ್ನಲ್ ಸಿಕ್ಕಿಲ್ಲ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ತಿಳಿಸಿದ್ದಾರೆ.
ಈಗ ಭಾರತದ ಬಹುನಿರೀಕ್ಷಿತ ಚಂದ್ರಯಾನ 2 ಯೋಜನೆ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ 'ಇಸ್ರೋ ಕೇವಲ ಚಂದ್ರನ ಮೇಲೆ ಅಷ್ಟೇ ಅಲ್ಲ ದೂರದ ಗೆಲಾಕ್ಸಿಗಳವರೆಗೆ ತಲುಪಲಿದೆ' ಎಂದು ಹೇಳಿದ್ದಾರೆ.
ಚಂದ್ರನ ಮೇಲ್ಮೈಗಿಂತ 2.1 ಕಿ.ಮೀ ದೂರದಲ್ಲಿದ್ದಾಗ ಬಾಹ್ಯಾಕಾಶ ಏಜೆನ್ಸಿಯೊಂದಿಗಿನ ಸಂಪರ್ಕವನ್ನು ಕಳೆದುಕೊಂಡಿರುವ ಚಂದ್ರಯಾನ-2 ರ ವಿಕ್ರಮ್ ಲ್ಯಾಂಡರ್ ಇರುವ ಸ್ಥಳ ಪತ್ತೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಕೆ.ಶಿವನ್ ಭಾನುವಾರ ಹೇಳಿದ್ದಾರೆ.
ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿಯಲು ಪ್ರಯತ್ನಿಸುವ ಮೂಲಕ ಭಾರತದ ಚಂದ್ರಯಾನ -2 ಜಗತ್ತಿನ ಗಮನ ಸೆಳೆಯಿತು. ಆದರೆ ಚಂದ್ರನನ್ನು ತಲುಪುವ ಮುನ್ನ ಸಂಪರ್ಕ ಕಡಿತಗೊಂಡ ಹಿನ್ನಲೆಯಲ್ಲಿ ಸ್ವಲ್ಪದರಲ್ಲೇ ಇತಿಹಾಸ ಸೃಷ್ಟಿಸುವ ಅವಕಾಶ ಕಳೆದುಕೊಂಡಿತು.
ಜೀವನದಲ್ಲಿ ಏರಿಳಿತಗಳು ಇದ್ದದ್ದೇ. ಸಂಪರ್ಕ ಕಡಿದುಕೊಂಡಾಗ ಎಲ್ಲರಿಗೂ ಬೇಸರವಾಗಿರುವುದನ್ನು ನಾನು ನೋಡಿದೆ. ಇದು ಕಡಿಮೆ ಸಾಧನೆಯಲ್ಲ. ದೇಶವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ- ಇಸ್ರೋ ವಿಜ್ಞಾನಿಗಳಿಗೆ ಟ್ವೀಟ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಂತ್ವನ.
ಚಂದ್ರಯಾನ-2 ಮಿಷನ್ ನ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿಯುವುದನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಹನ ನಡೆಸಿದರು.
ಚಂದ್ರಯಾನ್ -2 ರ ವಿಕ್ರಮ್ ಲ್ಯಾಂಡರ್ ಜೊತೆಗಿನ ಸಂಪರ್ಕವನ್ನು ಇಸ್ರೋ ಕಳೆದುಕೊಂಡ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ 8 ಗಂಟೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿಯಂತ್ರಣ ಕೇಂದ್ರದಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.