Hubballi News : ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಲೇವಡಿ ಮಾತುಗಳನ್ನಾಡಿದ್ದ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು ನೀಡಿದೆ.ತನ್ನನ್ನು ಎಕ್ಸ್ ಜಾಲತಾಣದಲ್ಲಿ ಕೆಣಕಿದ್ದ ಕಾಂಗ್ರೆಸ್ ಪಕ್ಷಕ್ಕೆ ಅದೇ ಜಾಲತಾಣದಲ್ಲಿ ಜೆಡಿಎಸ್ ಕುಟುಕಿದೆಯಲ್ಲದೆ, ಆ ಪಕ್ಷವನ್ನು ಗೆದ್ದಲು ಹಿಡಿದ ಪಕ್ಷ ಎಂದು ಟೀಕಿಸಿದೆ.
KS Eshwarappa : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಡುವೆ ಮಾತುಕತೆ ನಡೆಯುತ್ತಿದೆ. ಸದ್ಯ ಈ ಬಗ್ಗೆ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.
ರಾಮನಗರದ ಮೆಡಿಕಲ್ ಕಾಲೇಜ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡಿರುವ ಬಗ್ಗೆ ಜೆಡಿಎಸ್ ಯುವಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರಕಾರ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಲು ಬಯಸಿದೆ.ಕೋಲಾರ, ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ಒಪ್ಪಿಗೆ ನೀಡಿದೆ.
DK Shivakumar : “ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಅವರಿಗೆ ಅಭಿನಂದನೆಗಳು. ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು? ಇವು ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರಕಾರವನ್ನು ಯಾಕೆ ಆಗ್ರಹಿಸುತ್ತಿಲ್ಲ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
Congress Meeting : ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ರಾಜ್ಯ ಕಾಂಗ್ರೆಸ್ ಪಾಳೆಯ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಇದರ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಭಾನುವಾರ (ಸೆ.3) ಕರೆಯಲಾಗಿದೆ.
HD Kumaraswamy health Condition : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.