Karnataka Assembly Election 2023: ಸುಮಾರು 15 ನಿಮಿಷಗಳ ಕಾಲ ಗದಗನ ನಡುಬೀದಿಯಲ್ಲಿ ಗೂಳಿಗಳ ಕಾದಾಟ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಕೂಡ ಆಗುತ್ತಿದೆ.
ರಾಜ್ಯದ ಪ್ರಮುಖ ಸುಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ-2023ರ ಪ್ರಯುಕ್ತ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯೆ ಮಾರಾಟ ನಿಷೇಧಿಸಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ವಿಧಾನಸಭೆ ಚುನಾವಣೆಯ ಮತದಾನವು ಇದೇ ಮೇ 10 ರಂದು ಬೆಳಗಿನ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು, ಚುನಾವಣೆ ನಿಯಮದ ಪ್ರಕಾರ ಯಾವುದೇ ಪಕ್ಷದವರು ಹಾಗೂ ಅಭ್ಯರ್ಥಿಗಳು ಮತದಾರರನ್ನು ಕ್ಷೇತ್ರದ ಹೊರಗಿನಿಂದ ಅಥವಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಮಾಡಲು ವಾಹನಗಳಲ್ಲಿ ಕರೆದುಕೊಂಡು ಬರುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.
Karnataka Assembly Election: ಸಿದ್ದರಾಮಯ್ಯ ಅವರಂತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಪ್ರಧಾನಿ ಇಲ್ಲಿಗೆ ಬಂದು ಭಾವನಾತ್ಮಕವಾಗಿ ಮಾತನಾಡಿ ಹೋಗುತ್ತಾರೆ. ಆದರೆ, 40% ಲಂಚದ ಬಗ್ಗೆ ಅವರೆಲ್ಲೂ ಮಾತನಾಡಲ್ಲ, ದೂರು ಕೊಟ್ಟರೂ ಕ್ರಮ ತೆಗೆದುಕೊಂಡಿಲ್ಲ, ಲಂಚ ತಿನ್ನಲ್ಲ -ತಿನ್ನಲು ಬಿಡಲ್ಲ ಎನ್ನುತ್ತಾರೆ. ಇಲ್ಲಿ ಬಿಜೆಪಿ ಅವರು 40% ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
ಹುಬ್ಬಳ್ಳಿ, ಮೇ08: ಲಿಂಗಾಯತ ವೇದಿಕೆ ಎನ್ನುವುದು ಎಲ್ಲಿಯೂ ಇಲ್ಲ, ಅದೊಂದು ಕಾಲ್ಪನಿಕ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
‘ದಿ ಕೇರಳ ಸ್ಟೋರಿ’ ವಿವಾದ: ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕರ್ನಾಟಕದ ಚುನಾವಣಾ ರ್ಯಾಲಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ಹೊಗಳಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಚಿತ್ರವನ್ನು ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದ್ದಾರೆ.
ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ-2023 ಅಂಗವಾಗಿ ಮೇ 10, 2023 ರಂದು ಮತದಾನ ನಡೆಯಲಿದೆ. ಮುದ್ರಣ ಮಾಧ್ಯಮಗಳಲ್ಲಿ ದಾರಿತಪ್ಪಿಸುವ ಮತ್ತು ಕಾನೂನು ಉಲ್ಲಂಘಿಸುವ ಜಾಹಿರಾತುಗಳನ್ನು ಪ್ರಕಟಿಸುತ್ತಿರುವುದನ್ನು ಕೇಂದ್ರ ಚುನಾವಣಾ ಆಯೋಗ ಗಮನಿಸಿದೆ. ಚುನಾವಣೆಯ ಅಂತಿಮ ಹಂತದಲ್ಲಿ ಇಂತಹ ಜಾಹಿರಾತುಗಳು ಇಡೀ ಚುನಾವಣಾ ಪ್ರಕ್ರಿಯೆಯನ್ನು ಕಲುಷಿತಗೊಳಿಸುವ ಸಾಧ್ಯತೆಯಿದ್ದು, ಇದರಿಂದ ಬಾಧಿತರಾದ ಅಭ್ಯರ್ಥಿಗಳು ಮತ್ತು ಪಕ್ಷಗಳು ಅವುಗಳಿಗೆ ಸ್ಪಷ್ಟೀಕರಣ ಅಥವಾ ಖಂಡಿಸುವ ಅವಕಾಶವನ್ನು ಕಳೆದುಕೊಂಡಂತಾಗುತ್ತದೆ.
ನೆಹರೂ ಹಾಗೂ ಇಂದಿರಾ ಗಾಂಧಿ ಅವರು ನಿರ್ಮಿಸಿದ ಮಂಗಳೂರು ವಿಮಾನ ನಿಲ್ದಾಣಗಳನ್ನು ಅದಾನಿ ಅವರಿಗೆ ಮಾರಿದ್ದಾರೆ. ಈ ದೇಶದ ಎಲ್ಲಾ ಸಂಪತ್ತನ್ನು ಯಾಕೆ ಮಾರಿದ್ದಾರೆ? ಇದು ಭಯೋತ್ಪಾದನೆಯಲ್ಲದಿದ್ದರೆ ಮತ್ಯಾವುದು ಭಯೋತ್ಪಾದನೆ? ಇದು ಬಿಜೆಪಿಯ ಭ್ರಷ್ಟಾಚಾರದ ಭಯೋತ್ಪಾದನೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನಿಜವಾದ ಡಬಲ್ ಇಂಜಿನ್ ಎಂದರೆ ಒಂದು ಇಂಜಿನ್ ಆರ್ಥಿಕ ವಿಕಾಸಕ್ಕೆ ಇರಬೇಕು ಆಗ ಅದಕ್ಕೆ ಡಬಲ್ ಇಂಜಿನ್ ಸರ್ಕಾರ ಎಂದು ಹೇಳಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
Karnataka Assembly Election 2023: ವರುಣಾವನ್ನು ತಾಲೂಕು ಮಾಡಿಲ್ಲ, ಒಂದು ಪಟ್ಟಣ ಪಂಚಾಯಿತಿ ಮಾಡಿಲ್ಲ. ಆದರೂ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ, 14 ಬಜೆಟ್ ಮಾಡಿದ್ದೀರಿ. ನೀವು ಏನೂ ಮಾಡಿಲ್ಲ, ಆದರೂ ಇಷ್ಟೆಲ್ಲ ಸಿಕ್ಕಿದೆ ಎಂದು ಸೋಮಣ್ಣ ಹೇಳಿದ್ದಾರೆ.
Karnataka Assembly Election 2023: ನಾನು ದಾದಾಗಿರಿ ಮಾಡಲು ಶುರು ಮಾಡಿದರೆ ಕಾಂಗ್ರೆಸ್ನವರು ಮನೆಯಿಂದ ಹೊರಗೆ ಬರಲು ಆಗುವುದಿಲ್ಲ ಅಂತಾ ಮರಗೋಳದಲ್ಲಿ ಹೇಳಿದ್ದಾನಂತೆ. ಆ ಪಾರನಿಗೆ ಗೊತ್ತಿರಲಿ ಚಿತ್ತಾಪುರದ ಈ ಮೊಮ್ಮಗ ಇನ್ನೂ ಜೀವಂತವಾಗಿದ್ದಾನೆಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.