ನರೇಂದ್ರ ಮೋದಿಯವರು 2014ರ ನೀಡಿದ್ದ ಭರವಸೆಗಳನ್ನು ನೆನೆಸಿಕೊಳ್ಳಬೇಕು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಹಾಕುವುದಾಗಿ ಹೇಳಿದರು...ಆದರೆ ಬರಲಿಲ್ಲ.ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ ರೈತರ ಆದಾಯ ದುಪ್ಪಟ್ಟು ಆಗಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿಲ್ಲ. ಅಚ್ಚೇ ದಿನ್ ಬರಲಿಲ್ಲ ಎಂದು ವಿವರಿಸಿದರು.ಅಲ್ಪ ಸಂಖ್ಯಾತರ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಕುರಿತು ಸಿಎಂ ಪ್ರಸ್ತಾಪಿಸಿದರು.
Lok Sabha Election 2024: ಲಿಂಗ ಸಮಾನತೆ ಹಾಗೂ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆ ಉತ್ತೇಜಿಸಲು 'ಸಖಿ ಸೌರಭ ಶೀರ್ಷಿಕೆಯಡಿ ಮತಗಟ್ಟೆಗಳನ್ನು ವಿಶೇಷವಾಗಿ ಅಲಂಕರಿಸಿ ಮಹಿಳೆಯರನ್ನು ಮತದಾನಕ್ಕೆ ಪ್ರೇರೆಪಿಸಲಾಗಿದ್ದು ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 16 ಸಖಿ ಸೌರಭ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.
CM Siddaramaiah: ಹಿಂದುಳಿದ ಜಾತಿ ಮತ್ತು ಎಸ್ ಸಿ / ಎಸ್ ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.
Lok Sabha Election 2024: ಮಂಡ್ಯ ಕ್ಷೇತ್ರದಲ್ಲಿ ಹಣದ ಆಟ ಜಾಸ್ತಿಯಾಗಿದೆ. ಅಡ್ಡದಾರಿಯಲ್ಲಿ ಹಣ ಮಾಡಿದವರ ಉಪಟಳವೂ ಹೆಚ್ಚಾಗಿದೆ. ನಾನು ಗೆದ್ದರೆ ಇದಕ್ಕೆ ಕಡಿವಾಣ ಹಾಕುತ್ತೇನೆ. ಒಳ್ಳೆಯ ರೀತಿಯಲ್ಲಿ ಚುನಾವಣೆ ಆಗಬೇಕು, ಜನರಿಗೆ ಒಳ್ಳೆಯ ಗುಣ ನಡತೆಯ, ಜನಪರ ಕೆಲಸ ಮಾಡುವವರು ರಾಜಕಾರಣಕ್ಕೆ ಬರಬೇಕು. ಅಂತಹ ಉತ್ತಮರನ್ನು ರಾಜಕೀಯಕ್ಕೆ ತರುವುದಕ್ಕಾಗಿ ನಾನು ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇನೆ. ಪಕ್ಷದ ಸಂಘಟನೆಯಲ್ಲಿ ಕೂಡ ಬದಲಾವಣೆಗಳನ್ನು ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
Lok Sabha Election 2024: ಲೋಕಸಭೆ ಚುನಾವಣೆ ಮುಗಿಯುವವರೆಗೂ ಮನೆಮನೆಗೆ ತೆರಳಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೆಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಹೋಗುವ ಸಂಕಲ್ಪ ಮಾಡಿದ್ದಾರೆ. ನಾವೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಬಸವರಾಜ ಬೊಮ್ಮಾಯಿಯವರನ್ನು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
Hassan : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
CM Siddaramaiah: ಲೋಕಸಭಾ ಚುನಾವಣೆ ಅಂಗವಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಪರವಾಗಿ ಬೇಲೂರಿನಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು
Lok Sabha Election 2024: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ.ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Lok Sabha Election 2024: ಈ ಕುರಿತಾಗಿ ಅವರನ್ನು ಉಲ್ಲೇಖಿಸಿ ಹಂಚಿಕೊಂಡಿರುವ ಸೋಶಿಯಲ್ ಮೀಡಿಯಾ ಪೋಸ್ಟ್ ನಲ್ಲಿ "ಸನ್ಮಾನ್ಯ ಹೆಚ್.ಡಿ. ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ ಎಂದು ಹೇಳಿದ್ದಾರೆ.
Lok Sabha Election 2024: ತುಂಗಾ ಮೇಲ್ದಂಡೆ ಯೋಜನೆಯಲ್ಲಿ ಒಂದು ಲಕ್ಷ ಎಕರೆ ನೀರಾವರಿ ಮಾಡಿರುವುದು ಸಾಮಾನ್ಯ ಮಾತಲ್ಲ. ಇದರಿಂದ ಹಾನಗಲ್, ಹಿರೆಕೆರೂರು, ರಾಣೆಬೆನ್ನೂರು ತಾಲೂಕುಗಳಲ್ಲಿ ನೀರಾವರಿಯಾಗಿದೆ. ಈ ಕೆಲಸ ಸಾಧ್ಯವಿಲ್ಲ ಎಂದು ಹೇಳಿದ್ದರು. ಅದನ್ನು ಮಾಡಿ ತೋರಿಸಿದ್ದೇನೆ.ಶಿಗ್ಗಾಂವಿ ಕ್ಷೇತ್ರ ಬಿಟ್ಟು ಎಂಟು ಏತ ನೀರಾವರಿ ಯೋಜನೆ ಮಾಡಿದ್ದೇನೆ ಎಂದರು.
10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೋದಿ ಅವರು ಮೊದಲು ಹೇಳಬೇಕು.ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
CM Siddaramaiah: ಎಂಜಿನಿಯರಿಂಗ್ ವ್ಯಾಸಂಗ ಮಾಡಿದವರು ಕೂಲಿಗಳಾಗಿದ್ದಾರೆ. ಪಿಎಚ್ಡಿ ಪದವೀಧರರು ಜವಾನ ಹುದ್ದೆಗೆ ಅರ್ಜಿ ಹಾಕುತ್ತಿದ್ದಾರೆ. ಒಂದು ಹುದ್ದೆಗೆ ಸರಾಸರಿ ಮೂರು ಸಾವಿರ ಅರ್ಜಿಗಳು ಬರುತ್ತಿವೆ ಎಂದರೆ ಸ್ಪರ್ಧೆ ಹೇಗಿದೆ ಊಹಿಸಿ!ಈ ಸ್ಪರ್ಧೆಯಲ್ಲಿ ಓಡಲಾಗದ, ಇಬ್ಬರು ನಿರುದ್ಯೋಗಿಗಳು ಪ್ರತಿ ದಿನ ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ!
Lok Sabha Election 2024: ಐಟಿ, ಸಿಬಿಐ ದುರುಪಯೋಗ ಪಡೆಸಿಕೊಂಡು ಇಬ್ಬರು ಮುಖ್ಯಮಂತ್ರಿಗಳಾದ ಕೇಜರಿವಾಲ್ ಮತ್ತು ಹೇಮಂತ್ ಸುರೇನ್ ಅವರನ್ನು ಜೈಲಿಗೆ ಕಳಯಹಿಸಿದ ಮೋದಿಯವರೇ BJP ಸಂಗ್ರಹಿಸಿದ 7600 ಕೋಟಿ ಹಣಕ್ಕೆ ಒಂದು ಪೈಸೆ ತೆರಿಗೆ ಕಟ್ಟಿಲ್ಲವಲ್ಲಾ ಈ ಹಗರಣಕ್ಕಾಗಿ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ ಎಂದು ಮೋದಿಯವರನ್ನು ಪ್ರಶ್ನಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಖಾರವಾಗಿ ತಿರುಗೇಟು ಕೊಟ್ಟ ಅವರು; ಹೊಸ ತೊಡಕು ದಿನ ನಮ್ಮ ತೋಟದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗೆ ಅಷ್ಟು ಜ್ಞಾನ ಇಲ್ಲವೇ? ಆದರೆ ಊಟವನ್ನೇ ದೊಡ್ಡ ವಿವಾದ ಮಾಡುತ್ತಿರುವ ಕಾಂಗ್ರೆಸ್ ನವರು ಅದೆಷ್ಟು ಹತಾಶರಾಗಿದ್ದಾರೆ ಎನ್ನುವುದು ಇದರಿಂದ ಅರ್ಥವಾಗುತ್ತದೆ ಎಂದರು.
Basavaraj Bommai: ಮೋದಿಯವರು ತಮ್ಮ ತಾಯಿ ತೀರಿ ಹೋದಾಗ ಕೇವಲ ಎರಡು ತಾಸಿನಲ್ಲಿ ಅವರ ಅಂತ್ಯ ಸಂಸ್ಕಾರ ಮುಗಿಸಿ ಮತ್ತೆ ದೇಶದ ಕರ್ತವ್ಯಕ್ಕೆ ಹಾಜರಾದರು. ದೇಶದ ಸಫಾಯಿ ಕರ್ಮಚಾರಿಗಳ ಪಾದಪೂಜೆ ಮಾಡಿದರು. ಇಡೀ ದೇಶದ ಜನಸಂಖ್ಯೆಯನ್ನು ಆಸ್ತಿಯನ್ನಾಗಿ ಪರಿಗಣಿಸಿ ದೇಶದ ಅಭಿವೃದ್ದಿಗೆ ಜನಸಂಖ್ಯೆ ಕಾರಣ ಅಂತ ಜಗತ್ತಿಗೆ ತೊರಿಸಿ ಕೊಟ್ಟರು.
Karnataka Politics: ನಾನು ಪ್ರಥಮವಾಗಿ ರಾಜಕೀಯಕ್ಕೆ ಸ್ಪರ್ಧೆ ಮಾಡಿದಾಗ ಕೃಷ್ಣ ಅವರು ಆಶೀರ್ವಾದ ಮಾಡಿದ್ದರು. ಆ ಸಂಗತಿಯನ್ನು ಮಾತುಕತೆಯ ವೇಳೆ ಹಿರಿಯರಾದ ಕೃಷ್ಣ ಅವರೇ ನೆನೆಸಿಕೊಂಡರು. ನನ್ನನ್ನು ಆಶೀರ್ವಾದ ಮಾಡಿ ನಾಡಿನ ಅಭಿವೃದ್ಧಿಗಾಗಿ ಕೆಲಸ ಮಾಡಿ ಎಂದು ಹೇಳಿದ್ದಾರೆ ಎಂದರು ಕುಮಾರಸ್ವಾಮಿ ಅವರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.