ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ತಪ್ಪಲಿನಲ್ಲಿರುವ ಹರಪಳ್ಳಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂಕುಸಿತದ ಪರಿಣಾಮ ಬೆಟ್ಟದ ಒಂದು ಭಾಗವೇ ಕೊಚ್ಚಿ ಹೋಗಿದೆ. ಬೆಟ್ಟದ ಮೇಲ್ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ.
ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದೆ. ಹಾಗಾಗಿ ಇಂದು ಕೊಡಗು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವೆಡೆ ಗುಡ್ಡ ಕುಸಿದು ಅವಾಂತರ ಸೃಷ್ಟಿಯಾಗಿದೆ. ಸಂಪರ್ಕ ಬಂದ್ ಹಿನ್ನೆಲೆ ಅಂಗನವಾಡಿ ಸೇರಿದಂತೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಾಮರಾಜನಗರದಲ್ಲಿ ಕೂಡ ಎಡಬಿಡದೇ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅರ್ಜಿದಾರರು ದುರುದ್ದೇಶದಿಂದ ಪ್ರತಿವಾದಿಗಳ ಮೇಲೆ ಒತ್ತಡ ತರಲು ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ನ್ಯಾಯಾಲಯದ ಸಮಯವನ್ನು ಹಾಳು ಮಾಡಿದ್ದಾರೆಂದು ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿಲಾಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಅಲ್ಲದೆ ದಂಡದ ಮೊತ್ತವನ್ನು 1 ತಿಂಗಳ ಒಳಗಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸುವಂತೆ ಸೂಚಿಸಲಾಗಿದೆ.
ಕಾಡು ನಾಶವಾದಂತೆಲ್ಲಾ ಕಾಡು ಪ್ರಾಣಿಗಳು ನಾಡಿಗೆ ಬರುವುದು ಮಾಮೂಲಾಗಿದೆ.ಹೀಗೆ ದಾರಿ ತಪ್ಪಿ ನಾಡಿಗೆ ಬಂದು ನರಳಾಡುತ್ತಿದ್ದ ಕರಡಿಯನ್ನ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದಲ್ಲಿ ಇಂದು ರಕ್ಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆಪ್ಟೆಂಬರ್ 5 ರಂದು ಶಾಲಾ, ಕಾಲಾಜುಗಳಿಗೆ ರಜೆ ಘೋಷಿಸಲಾಗಿದೆ.
ಆಗಸ್ಟ್ 5 ರಿಂದ 7ರ ವರೆಗೆ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಯುವ ಸಂಸದ ತೇಜಸ್ವಿ ಸೂರ್ಯ ಮೈಸೂರಿನ ಶಲ್ಯ-ಪಂಚೆ ಧರಿಸಿ ಮೈಸೂರಿನ ಗತ ವೈಭವ ಮೆರೆದರು.
ಬಡಾವಣೆ ನಿರ್ಮಾಣ, ಬಡಾವಣೆಗಳಿಗೆ ಸಂಪರ್ಕ ರಸ್ತೆ, ಜಿಲ್ಲಾ ಕ್ರೀಡಾಂಗಣ ಹಾಗೂ ಸರ್ಕಾರಿ ಜೂನಿಯರ್ ಕಾಲೇಜು ದುರಸ್ತಿ ಹಾಗೂ ಪ್ರಾದೇಶಿಕ ವಿಜ್ಞಾನ ಕೇಂದ್ರದ ದುರಸ್ತಿಗೆ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಮನೆ ನಿರ್ಮಾಣದ ಜೊತೆಗೆ ಕುಡಿಯುವ ನೀರು ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾಮಗಾರಿಗಳನ್ನು ಸಹ ತುರ್ತಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸೂಚನೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.