ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆಯಾಗಿದೆ ಎಂದು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.
ಕೊಪಣಾದ್ರಿ ಎಂದೇ ಪ್ರಸಿದ್ಧವಾದ ಕೊಪ್ಪಳ ನಗರದ ರೈಲು ನಿಲ್ದಾಣ ಮತ್ತು ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮುನಿರಾಬಾದ್(ಹುಲಗಿ) ರೈಲು ನಿಲ್ದಾಣಗಳು ಸೇರಿದಂತೆ ದೇಶದ ವಿವಿಧ 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಮಂತ್ರಿಗಳಾದ ಮಾನ್ಯ ನರೇಂದ್ರ ಮೋದಿಜಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಆಗಸ್ಟ್ 06ರಂದು ಚಾಲನೆ ನೀಡಿದರು.
Karnataka Assembly Election 2023: ಹಾಬಲಕಟ್ಟಿ ಗ್ರಾಮದ ಭೋವಿ ಸಮುದಾಯದವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕೆ ಒತ್ತಾಯಿಸಿ ಈ ಹಿಂದೆ ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿ ಧರಣಿ ನಡೆಸಿದ್ದರು. ಇದಲ್ಲದೇ ಕುಷ್ಟಗಿ ತಹಶೀಲ್ದಾರ್ ಕಚೇರಿ ಮುಂಭಾಗ ಬರೋಬ್ಬರಿ 101 ದಿನಗಳ ಕಾಲ ಹೋರಾಟವನ್ನೂ ಕೈಗೊಳ್ಳಲಾಗಿತ್ತು.
ಕಳೆದ 4 ದಿನಗಳ ಹಿಂದಷ್ಟೇ ಬಾಗಲಕೋಟೆ ಮೂಲದ ವ್ಯಕ್ತಿಯೊಬ್ಬರು 110 ಕೆಜಿ ಜೋಳದ ಚೀಲ ಹೊತ್ತು ಬೆಟ್ಟ ಏರಿದ್ದರು. ಇದೀಗ 105 ಕೆಜಿ ಜೋಳದ ಚೀಲವನ್ನು ಹೊತ್ತು ಬೆಟ್ಟ ಹತ್ತಿದ ಹನುಮಂತಪ್ಪ ಸಾಹಸ ಮಾಡಿದ್ದಾರೆ.
ಇಂದು ಕೊಪ್ಪಳ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಯಲಿದೆ.. ಕುಷ್ಟಗಿ ಹಾಗೂ ತಾವರಗೇರಾ ಪಟ್ಟಣದಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ. ಬೈಕ್ ರ್ಯಾಲಿ ಮೂಲಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅದ್ದೂರಿ ಸ್ವಾಗತ ನೀಡಲು ಸಕಲ ಸಿದ್ಧತೆ ಮಾಡಲಾಗಿದೆ.
ಪ್ರೀತಿ ಮಾಡುವಂತೆ ಸುಮಾಳ ಹಿಂದೆ ಪ್ರಕಾಶ್ ಭಜಂತ್ರಿ ದುಂಬಾಲು ಬಿದ್ದಿದ್ದ. ಈ ವಿಷಯ ಹುಡುಗಿ ಮನೆಯವರಿಗೂ ತಿಳಿದಿತ್ತು. ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಆತನಿಗೆ ಬುದ್ಧಿವಾದವನ್ನೂ ಹೇಳಿದ್ದರಂತೆ.
Love Jihad: ಬಲವಂತದ ಮತಾಂತರದ ಕುರಿತು ಖಾಕಿಪಡೆ ತನಿಖೆ ನಡೆಸಿದೆ. ತಾನು ಮನಪೂರ್ವಕವಾಗಿ ಇಸ್ಲಾಂ ಧರ್ಮವನ್ನು ಸ್ವೀಕರಿಸಿ, ವಿವಾಹ ಆಗಿರುವುದಾಗಿ ಪೊಲೀಸರ ಎದುರು ಯುವತಿ ಹೇಳಿಕೆ ನೀಡಿದ್ದಾಳೆ.
ದೇಶಾದ್ಯಂತ ಬೆಳ್ಳಂಬೆಳಿಗ್ಗೆ NIA ಅಧಿಕಾರಿಗಳು PFI, SDPIಗೆ ಶಾಕ್ ನೀಡಿದ್ದಾರೆ. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿರುವ ಆರೋಪ ಹಿನ್ನೆಲೆಯಲ್ಲಿ PFI ಕಚೇರಿ ಹಾಗೂ ಮುಖಂಡರ ಮನೆ ಮೇಲೆ NIA ರೇಡ್ ಮಾಡಿ ಮಾಡಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಗಣೇಶ ವಿಸರ್ಜನೆ ವೇಳೆ ಝಗಮಗಿಸಿದ ಪುನೀತ್ ನೆನಪು. ಅಪ್ಪು ಹಾಡಿಗೆ ಕುಣಿದು ಕುಪ್ಪಳಿಸಿದ ಅಭಿಮಾನಿಗಳು. ಈ ವೇಳೆ ಡಿಜೆ ಲೇಸರ್ ಲೈಟ್ನಲ್ಲಿ ಮೂಡಿದ ಪುನೀತ್ ಭಾವಚಿತ್ರ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿದ್ದು ಭಾವೈಕ್ಯ ಮರೆದಿದ್ದಾರೆ.. ಸತತ 13 ವರ್ಷಗಳಿಂದ ಈ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಗ್ಯಾರೇಜ್ ಮಾಲೀಕರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ..
ಕೊಪ್ಪಳ ಜಿಲ್ಲೆಯ ಗಂಗಾವತಿಯ ದೇವಘಟ್ಟ ಸಮೀಪದ ನದಿಯಲ್ಲಿನ ನಡುಗಡ್ಡೆಯಲ್ಲಿ ಇಬ್ಬರು ಕುರಿಗಾಹಿಗಳು ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಲೆನಾಡಿನ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಅಧಿಕ ಪ್ರಮಾಣದಲ್ಲಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ 105 ಟಿಎಂಸಿ ಸಾಮಾರ್ಥ್ಯದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಒಳಹರಿವಿನ ಪ್ರಮಾಣ ಕೂಡ ಜಾಸ್ತಿಯಾಗಿದೆ. ಇದರಿಂದ ಸದ್ಯ ಜಲಾಶಯದಿಂದ ತುಂಗಭದ್ರ ನದಿಗೆ 1 ಲಕ್ಷ 70 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.