ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರಕಾರದ ವಿಶೇಷ ಅನುದಾನ ಮತ್ತು ಅತಿವೃಷ್ಠಿ ನಿಧಿಯಲ್ಲೂ ಆರ್ಥಿಕ ನೆರವು ನೀಡಲಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಆರಂಭಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜೂನ್ 03 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪದವೀಧರ ಮತದಾರರಿಗೆ ಮತದಾನ ಮಾಡಲು ಜೂನ್ 03 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಮೊನ್ನೆಯಷ್ಟೇ ದೇವೇಗೌಡ್ರು ತಮ್ಮ ಮೊಮ್ಮಗನಿಗೆ ಪತ್ರ ಬರೆದು ವಾರ್ನ್ ಮಾಡಿದ್ರು.ಈ ನಡುವೆ ನಾಳೆಯೇ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ಅವಧಿ ಲಾಸ್ಟ್ ದಿನ. ಈ ಮಧ್ಯೆ ವಿಡಿಯೋ ಬಿಟ್ಟು ಬೆಂಗಳೂರಿಗೆ ಬರ್ತೀನಿ ಎಂದಿದ್ದ ಪ್ರಜ್ವಲ್ ರೇವಣ್ಣ ಬರೋದು ಆಲ್ಮೋಸ್ಟ್ ಕನ್ಫರ್ಮ್ ಆಗಿದೆ.
ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆರೋಗ್ಯದ ಹಠಾತ್" ಹದಗೆಟ್ಟ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಭರವಸೆ ನೀಡಿದರು, ಇದರ ಹಿಂದೆ ಪಿತೂರಿ ಇದೆ. ಐದು ದಶಕಗಳ ಅಂತರದ ನಂತರ ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಪೂರ್ಣ ಬಹುಮತದ ಸರ್ಕಾರ ರಚನೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ.
ತತ್ವಗಳಿಲ್ಲದ ಎಎಪಿ: ಎಎಪಿ ಯಾವುದೇ ತತ್ವಗಳಿಲ್ಲದ ಪಕ್ಷವಾಗಿದೆ. ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಬಂಡಾಯವೆದ್ದು ಅಸ್ತಿತ್ವಕ್ಕೆ ಬಂದ ಪಕ್ಷ ಇಂದು ತಾನೇ ಆ ಹಾದಿ ತುಳಿದಿದೆ ಎಂದು ಜೋಶಿ ಆರೋಪಿಸಿದರು.
ವಿದ್ಯಾವಂತರೇ ಹೆಚ್ವು ಜಾತಿವಾದಿಗಳಾಗುತ್ತಿರುವುದು ದುರಂತದ ಸಂಗತಿ. ಆದ್ದರಿಂದ ವೈಚಾರಿಕತೆ ಮತ್ತು ಮಾನವೀಯತೆ ಇರುವ ಶಿಕ್ಷಣ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಧಾರವಾಡ ಬಸವ ನಗರದ ಶ್ರೀ. ವಿನಯ ಕ್ಷತ್ರಿಯ ಇವರು ತಮ್ಮ ಸ್ವಂತ ಕೆಲಸಕ್ಕಾಗಿ RENAULT KWID CAR ಖರೀದಿಸಿ ಅದಕ್ಕೆ ಎದುರುದಾರರ ಬಳಿ ರೂ.6,750/- ಹಣ ಪಾವತಿಸಿ ವಿಮೆಯನ್ನು ಪಡೆದಿದ್ದರು. ಆ ವಿಮೆಯಲ್ಲಿ ವಾಹನದ ಆಯ್.ಡಿ. ಮೌಲ್ಯ ರೂ.3 ಲಕ್ಷ ಅಂತಾ ನಮೂದಿಸಿತ್ತು.
ನೀಲಗಿರಿ ಶ್ರೇಣಿಯ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಆನೆಗಳ ನಿರಂತರ ಸಂಚಾರ ಮತ್ತು ಮಾನವ- ಆನೆಗಳ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳು ಅಂತಾರಾಜ್ಯ ಸಮನ್ವಯ ಸಮಿತಿಯನ್ನು (ಐಸಿಸಿ) ರಚಿಸಿವೆ.
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ ಹಿಡುಗಲಪಂಚೀ ಕೆರೆ ಬಳಿ ನಡೆದಿದೆ.
ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯಿರುವÀವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮೈಸೂರಿನ ಸರ್ಕಾರಿ ಅಂದ ಮಕ್ಕಳ ಪಾಠಶಾಲೆಯ ಆವರಣದಲ್ಲಿ ಕಳೆದ 24 ವರ್ಷಗಳಿಂದಲೂ ಅಂದ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೋಮೊ ಇನ್ ಸ್ಪೇಷಲ್ ಎಜ್ಯುಕೇಷನ್ (ಹೆಚ್.ಐ) ಹಾಗೂ (ವಿ.ಐ)ನ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಗರದ ಹೊರವಲಯದಲ್ಲಿನ ಗುಗ್ಗರಹಟ್ಟಿಯ ನ್ಯಾಯಬೆಲೆ ಅಂಗಡಿ 115 ರ ಬದಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಸುಮಾರು 750 ಚೀಲ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಪಡಿಸಿಕೊಂಡು ಮುಂದಿನ ಅಗತ್ಯ ಕ್ರಮ ವಹಿಸಿದೆ.
Bengaluru Fire Breaks Out: ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.