Mallikarjun Kharge: ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಸಂವಿಧಾನ 371ಜೆ ತಿದ್ದುಪಡಿಯ ಮೂಲಕ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಿದರು. ಹೀಗಾಗಿ ಈ ಭಾಗದಲ್ಲಿ ನಮ್ಮ ಸಮುದಾಯ ಸೇರಿದಂತೆ ಎಲ್ಲರಿಗೂ ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ರೀತಿಯ ಅನುಕೂಲವಾಗಿದೆ.
Pro-Pakistan Slogans in Karnataka: ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಘೋಷಣೆಯ ನಂತರ ವಿಧಾನಸೌಧದ ಆವರಣದಲ್ಲಿ ಯಾರಾದರೂ ಪಾಕಿಸ್ತಾನದ ಪರ ಜೈಕಾರ ಹಾಕಿರುವುದು ಸಾಬೀತಾದರೆ ಅಂಥವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಅಂತಹ ಶಕ್ತಿಗಳ ವಿರುದ್ಧ ಸರಕಾರ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಿದ್ದು, ಸದ್ಯಕ್ಕೆ ತನಿಖೆ ಆರಂಭಿಸಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಡಚ್ ಕಂಪನಿಗಳ ಹೂಡಿಕೆಗೆ ಉತ್ತೇಜನ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲು ನೆದರ್ಲೆಂಡ್ಸ್ ಪ್ರಧಾನಿ ಶ್ರೀ ಮಾರ್ಕ್ ರುಟೆ ಅವರ ಸಮ್ಮುಖದಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದುಂಡು ಮೇಜಿನ ಸಭೆ ನಡೆಯಿತು.
ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಚಿಕ್ಕಬಾಣಾವಾರ- ಬೆನ್ನಿಗಾನಹಳ್ಳಿ ನಡುವಿನ ಕಾಮಗಾರಿಯನ್ನು ಸಚಿವ ಎಂ.ಬಿ.ಪಾಟೀಲ್ ಅವರು ವೀಕ್ಷಿಸಿದರು. ಸರ್ವಜ್ಞನಗರ ಶಾಸಕರು ಹಾಗೂ ಇಂಧನ ಸಚಿವರಾದ ಶ್ರೀ ಕೆ.ಜೆ ಜಾರ್ಜ್,ಶಾಸಕರಾದ ಮುನಿರತ್ನ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀ ಗೌರವ್ ಗುಪ್ತ ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದರು.
M B Patil : ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಗುರುವಾರ ಹೇಳಿದ್ದಾರೆ.
M B Patil : "ನಾನು ಬಿ ಎಲ್ ಸಂತೋಷ್ ಅವರ ಬಗ್ಗೆ ಮಾತನಾಡಿದ ತಕ್ಷಣ ಅದು ಇಡೀ ಬ್ರಾಹ್ಮಣ ಸಮುದಾಯವನ್ನು ಬೈದಂತಲ್ಲ. ನನ್ನ ಮತ್ತು ಬ್ರಾಹ್ಮಣರ ನಡುವಿನ ಸಂಬಂಧ ಎಷ್ಟೊಂದು ಮಧುರವಾಗಿದೆ ಎನ್ನುವುದನ್ನು ಒಮ್ಮೆ ವಿಜಯಪುರಕ್ಕೆ ಬಂದು ನೋಡಲಿ.
ಲಿಂಗಾಯತರ ವಿಷಯದಲ್ಲಿ ಬಿಜೆಪಿ ಅವರು ಗಾಬಾರಿಗೊಂಡಿದ್ದಾರೆ. ರಾಜ್ಯದ ಬಿಜೆಪಿಯ ಯಾವುದೇ ನಾಯಕನ ಮುಖವನ್ನು ಇಟ್ಟು ಜನರ ಬಳಿಗೆ ಹೋಗಲಿಕ್ಕೆ ಆಗುತ್ತಿಲ್ಲ ಇವರಿಗೆ, ಮೋದಿ ಶಾ ಅವರನ್ನು ಕರ್ನಾಟಕದ ಶಾಶ್ವತ ನಿವಾಸಿಗಳಾಗಿ ಬಿಟ್ಟಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಧ್ರುವನಾರಾಯಣ ನಿಧನಕ್ಕೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಸಂತಾಪ ಸೂಚಿಸಿದ್ದಾರೆ. ಸಜ್ಜನ ರಾಜಕಾರಣಿ, ಶಾಸಕರಾಗಿ ಬದ್ಧತೆಯಿಂದ ಕೆಲಸ ಮಾಡಿದ್ರು. ದೇವರು ದೊಡ್ಡ ಅನ್ಯಾಯ ಮಾಡಿದ್ದಾನೆ ಎಂದಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಕ್ರೈಂ ಮೀತಿ ಮೀರಿ ಹೋಗುತ್ತಿದೆ. ಮನೆ ಕೆಲಸಕ್ಕೆ ಸೇರಿಕೊಳ್ಳುವ ಹಲವರು ಕಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದಾರೆ. ಅದರಲ್ಲೂ ಮನೆ ಕೆಲಸಕ್ಕೆ ಸೇರುವ ಹೊರ ರಾಜ್ಯದವರು ಮನೆಯನ್ನು ಗುಡಿಸಿ ಗುಂಡಾಂತರ ಮಾಡೋದು ಕಾಮನ್ ಆಗಿದೆ. ಹೀಗೆ ಮಾಜಿ ಗೃಹ ಸಚಿವ, ಹಾಲಿ ಶಾಸಕರ ಮನೆಯಲ್ಲಿ ಕಳ್ಳನೊಬ್ಬ ಕೈಚಳಕ ತೋರಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ರಾಜ್ಯದ ನೀರಾವರಿ ಸಮಸ್ಯೆಗಳ ಬಗ್ಗೆ ಹಾಗೂ ಇದರ ಪರಿಹಾರ ಚರ್ಚೆಗೆ ಸರ್ವಪಕ್ಷ ನಿಯೋಗವನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದೆ ಹೋಗೋಕೆ ಇವರಿಗೆ ಹೆದರಿಕೆ ಏಕೆ? ಎಂದು ಕೆಪಿಸಿಸಿ ನಿಯೋಜಿತ ಪ್ರಚಾರ ಸಮ್ಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ (M B Patil) ಪ್ರಶ್ನಿಸಿದರು.
ಪ್ರತ್ಯೇಕ ಲಿಂಗಾಯಿತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಎಂ.ಬಿ. ಪಾಟೀಲ್ ಇತ್ತೀಚೆಗೆ ಸಿದ್ದಗಂಗಾ ಶ್ರೀಗಳ ಜೊತೆ ಮಾತುಕತೆ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಸಚಿವ ವಿನಯ್ ಕುಲಕರ್ಣಿ, ಬಿ.ಆರ್.ಪಾಟೀಲ್, ಬಸವರಾಜ್ ಹೊರಟ್ಟಿ, ಜಾಮಧಾರ್, ಜಯಣ್ಣ ಮತ್ತಿತರರಿಂದ ಸುದ್ದಿಗೋಷ್ಠಿ ಕರೆದು ಸಮಜಾಯಿಷಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.