ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪರಸ್ಪರ ಟೀಕಾಪ್ರಹಾರ ನಡೆಸಿದ್ದ ಮೋದಿ ಮತ್ತು ಮಮತಾ ಬ್ಯಾನರ್ಜೀ ಈಗ ಅದಕ್ಕೆಲ್ಲ ತಾತ್ಕಾಲಿಕ ವಿರಾಮ ಬಿದ್ದಂತಾಗಿದೆ.ಪ್ರಧಾನಿ ಮೋದಿ ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀಯವರನ್ನು ತಮ್ಮ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಅವರು ಒಪ್ಪಿಗೆ ನೀಡಿ ಬರುವದಾಗಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದಲ್ಲಿ ಬಿಜೆಪಿ ದೇಶಾದ್ಯಂತ ಜಯಭೇರಿ ಗಳಿಸಿದ ನಂತರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಬಂಗಾಳಿ, ಹಿಂದಿ, ಹಾಗೂ ಇಂಗ್ಲೀಶ್ ನಲ್ಲಿ 'ನಾನು ಒಪ್ಪುವುದಿಲ್ಲ' ಎನ್ನುವ ಶೀರ್ಷಿಕೆ ಅಡಿಯಲ್ಲಿ ಕವಿತೆ ಬರೆದಿದ್ದಾರೆ.ಈಗ ಇದನ್ನು ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮುಂಬರುವ ದಿನಗಳಲ್ಲಿ ಬಿಜೆಪಿ ತಮಿಳುನಾಡು, ಕೇರಳ ಹಾಗೂ ಈಶಾನ್ಯ ಭಾಗಗಳಲ್ಲಿ ಬಿಜೆಪಿ ವಶಪಡಿಸಿಕೊಳ್ಳಲಿದೆ ಎಂದು ಬಿಜೆಪಿ ನಾಯಕ ಹಿಮಾಂತ್ ಬಿಸ್ವಾ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ. ಬಂಗಾಳದಲ್ಲಿ ಜೈ ಶ್ರೀರಾಮ್ ಘೋಷಣೆಗೆ ಮುಖ್ಯಮಂತ್ರಿ ಅಡ್ಡಿ ಪಡಿಸಿದ್ದು ತಪ್ಪು ನಿರ್ಧಾರ ಎಂದು ಹೇಳಿದರು.
ಹಿರಿಯ ಬಿಜೆಪಿ ನಾಯಕ ಹಾಗೂ ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್ ವರ್ಗಿಯಾ ಮಮತಾ ಬ್ಯಾನರ್ಜಿ ಅವರು ಎನ್ಕೌಂಟರ್ನಲ್ಲಿ ಬರಾಕ್ಪೋರ್ ಬಿಜೆಪಿ ಅಭ್ಯರ್ಥಿ ಅರುಣ್ ಸಿಂಗ್ ಅವರನ್ನು ಎನ್ಕೌಂಟರ್ ಮಾಡಬಹುದು ಎಂದು ಆರೋಪಿಸಿದ್ದಾರೆ.
ಲೋಕಸಭಾ ಚುನಾವಣೆ (ಲೋಕಸಭಾ ಚುನಾವಣೆಗಳು 2019) ಅಂತ್ಯದ ನಂತರ ಚುನಾವಣೋತ್ತರ ಸಮೀಕ್ಷೆಗಳು ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಇದರ ಬೆನ್ನಲ್ಲೇ ಪ್ರತಿಪಕ್ಷಗಳ ಕಾರ್ಯತಂತ್ರ ರೂಪಿಸುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ(ಎಸ್ಪಿ)ದ ಮುಖಂಡ ಅಖಿಲೇಶ್ ಯಾದವ್ ಅವರು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
84 ದಿನಗಳಲ್ಲಿ 7 ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆ 2019ರ ಚುನಾವಣಾ ಫಲಿತಾಂಶ ಮೇ 23 ರಂದು ಹೊರಬೀಳಲಿದೆ. ಚುನಾವಣೆ ಮುಗಿದ ಬೆನ್ನಲ್ಲೇ ನಿನ್ನೆ ಸಂಜೆ ಹಲವು ಮಾಧ್ಯಮಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಕೂಡ ಪ್ರಕಟವಾಗಿವೆ.
ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ನಲ್ಲಿ ಬುಧುವಾರದಂದು ನಡೆದ ರ್ಯಾಲಿಯೊಂದರಲ್ಲಿ ತಮ್ಮ ಕುರಿತಾಗಿ ಮಾಡಿರುವ ಭಾಷಣದ ವಿಚಾರವಾಗಿ ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಮೋದಿಗೆ ಮಾನಹಾನಿ ನೋಟಿಸ್ ಜಾರಿ ಮಾಡಿದ್ದಾರೆ. ಈಗ ಈ ನೋಟಿಸ್ ಸ್ವೀಕರಿಸಿದ 36 ಗಂಟೆಗಳೊಳಗೆ ಮೋದಿ ಬೇಷರತ್ತಾದ ಕ್ಷಮೆ ಕೋರಬೇಕೆಂದು ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ವಿದ್ಯಾಸಾಗರ ಪ್ರತಿಮೆಯನ್ನು ಪುನರ್ ನಿರ್ಮಿಸುವುದಾಗಿ ಮೋದಿ ಭರವಸೆ ನೀಡಿದ್ದಾರೆ. ನಾವು ಅವರ (ಬಿಜೆಪಿ) ಹಣವನ್ನು ಏಕೆ ತೆಗೆದುಕೊಳ್ಳಬೇಕು, ಬಂಗಾಳವು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ರೋಡ್ ಶೋ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ನೇರ ಹೊಣೆ. ಕೊಲ್ಕತ್ತಾದಲ್ಲಿ ಹಂಗಾಮ ನಡೆಸಿದ್ದೇ ಬಿಜೆಪಿ ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರೇ ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದು ಎಂದು ಮಮತಾ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಫೋಟೋ ಟ್ರೋಲ್ ಮಾಡಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ಆದೇಶದ 18 ಗಂಟೆಗಳ ಬಳಿಕ ಇಂದು ಬಿಡುಗಡೆ ಮಾಡಲಾಗಿದೆ.
ಬಿಜೆಪಿ ಹಾಗೂ ಆರೆಸೆಸ್ಸ್ ಬೆಂಬಲಿಗರು ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಭದ್ರತಾ ಪಡೆಗಳ ವೇಷದಲ್ಲಿ ಪ್ರವೇಶಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೆ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.