ಇತ್ತೀಚಿಗೆ ರಾಜೀವ್ ಗಾಂಧಿ ಜೀವನ ಭ್ರಷ್ಟಾಚಾರಿ ನಂಬರ್ 1 ಆಗುವ ಮೂಲಕ ಅಂತ್ಯವಾಯಿತು ಎನ್ನುವ ಪ್ರಧಾನಿ ಹೇಳಿಕೆಗೆ ಕಟುವಾಗಿ ಉತ್ತರಿಸಿರುವ ಮಮತಾ ಬ್ಯಾನರ್ಜೀ ನಿಮ್ಮ ದೇಹ ಮುಡಿಯಿಂದ ಅಡಿಯವರೆಗೆ ರಕ್ತದಲ್ಲೇ ಮುಳುಗಿದೆ ಎಂದು ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿ ಫೋನಿ ಚಂಡಮಾರುತಕ್ಕೂ ಮುಂಚೆ ಮಮತಾ ದೀದಿಯೊಂದಿಗೆ ಮಾತನಾಡಲು ಇಚ್ಚಿಸಿದೆ ಆದರೆ ಅವರು ನನ್ನೊಂದಿಗೆ ಮಾತನಾಡದೆ ಸೋಕ್ಕಿನ ನಡೆ ತೋರಿದ್ದಾರೆ ಎಂದು ದೂರಿದ ಬೆನ್ನಲ್ಲಿ ಮಮತಾ ಬ್ಯಾನರ್ಜೀ ಮೋದಿಗೆ ತಿರುಗೇಟು ನೀಡಿ 'ನಿಮ್ಮನ್ನು ನಮ್ಮ ಪ್ರಧಾನ ಮಂತ್ರಿ ಎಂದು ಪರಿಗಣಿಸಿಯೇ ಇಲ್ಲ' ಎಂದು ಪ್ರತ್ಯುತ್ತರ ನೀಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿಯೂ ಪರಿಶೀಲನಾ ಸಭೆ ನಡೆಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಭಾನುವಾರ ಎರಡು ಬಾರಿ ಕರೆ ಮಾಡಿದರೂ ಸ್ವೀಕರಿಸದೆ, ಪ್ರಧಾನಿ ಕರೆಯನ್ನು ಕಡೆಗಣಿಸಿದ್ದಾರೆ ಎನ್ನಲಾಗಿದೆ.
40 ಟಿಎಂಸಿ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಚುನಾವಣೆ ಮುಗಿದ ಬಳಿಕ ಅವರು ತಮ್ಮನ್ನು ತೊರೆಯುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ನೀಡಿರುವ ಸಂದರ್ಶನದಲ್ಲಿ ಪ್ರಧಾನಿ ಮೋದಿ ತಮಗೆ ಮಮತಾ ಬ್ಯಾನರ್ಜೀ ಪ್ರತಿವರ್ಷ ಉಡುಗೊರೆಗಳನ್ನು ಕಳುಹಿಸುತ್ತಾರೆ ಎಂದು ಹೇಳಿದ್ದರು.ಈಗ ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜೀ ಮುಂದಿನ ಬಾರಿ ಮಣ್ಣಿನ ಉಂಡೆಯೊಳಗೆ ಗೋಡಂಬಿ ಒಣದ್ರಾಕ್ಷಿಯಂತೆ ಹರಳುಗಳನ್ನು ಸೇರಿಸುತ್ತೇವೆ.ಆಗ ಹಲ್ಲುಗಳು ಮುರಿಯುತ್ತವೆ ಎಂದು ಹೇಳಿದ್ದಾರೆ.
ಜನತೆಗೆ ಕೇವಲ ಭರವಸೆಗಳನ್ನು ನಿಡುವ ರಾಜಕಾರಣಿಗಳನ್ನು ನೋಡಿ ಬೇಸರವಾಗಿದೆ. ಹಾಗಾಗಿ ರಾಜ್ಯದಲ್ಲಿ ಅಭಿವೃದ್ಧಿಯನ್ನು ತಂದಿರುವ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ ಎಂದು ದಿನೇಶ್ ತ್ರಿವೇದಿ ಹೇಳಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಚಾಯ್ವಾಲಾ ಎಂದು ಬಿಂಬಿಸಿಕೊಂಡು ಜನತೆಯ ಮತ ಪಡೆದಿದ್ದರು. ಈಗ ಅವರು ಚಾಯ್ವಾಲಾ ಆಗಿ ಉಳಿದಿಲ್ಲ. ಸ್ವತಃ ಚೌಕಿದಾರ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.
ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ "ಪ್ರಧಾನಿ ಮೋದಿ ಸುಳ್ಳು ಹೇಳಬಾರದು. 56 ಇಂಚಿನ ಎದೆ ಎಂದು ಹೇಳುವ ಅವರು ಬರಿ ಸುಳ್ಳು ಹೇಳುವುದರಲ್ಲೇ ನಿರತರಾಗಿದ್ದಾರೆ" ಎಂದು ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.