ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೊಲ್ಕತ್ತಾದ ಎರಡು ಪ್ರದೇಶಗಳಲ್ಲಿನ ಲಾಕ್ಡೌನ್ ಪರಿಸ್ಥಿತಿಯನ್ನು ಪರಿಶೀಲಿಸಿದರು ಮತ್ತು ನಿವಾಸಿಗಳು ಮನೆಯಲ್ಲಿಯೇ ಇರಬೇಕೆಂದು ಒತ್ತಾಯಿಸಿದರು.
ಇದು ಕೋಮುವಾದಿ ರಾಜಕಾರಣಕ್ಕೆ ಸಮಯವಲ್ಲ, ಜಾತಿ ಅಥವಾ ಧರ್ಮದ ಆಧಾರದ ಮೇಲೆ ರೋಗವು ತಾರತಮ್ಯ ಮಾಡುವುದಿಲ್ಲ ಎಂದು ತಬ್ಲಿಘಿ ಘಟನೆಯನ್ನು ಉಲ್ಲೇಖಿಸಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮುಂದಿನ ವರ್ಷ ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿ ಅವರ ಹೊಸ ಅಭಿಯಾನ 'ಬಾಂಗ್ಲರ್ ಗೋರ್ಬೊ ಮಮತಾ' ಹೆಸರಿನಲ್ಲಿ ರೂಪಿಸಲಾಗಿದೆ.ಈ ತಂತ್ರವನ್ನು ಚುನಾವಣಾ ಚಾಣಾಕ್ಯ ಎಂದೇ ಬಿಂಬಿತವಾಗಿರುವ ಪ್ರಶಾಂತ್ ಕಿಶೋರ್ ರೂಪಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ದೆಹಲಿಯಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿರುವ ಸಂದರ್ಭದಲ್ಲಿ ಅಭಿನಂದಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ದೆಹಲಿಯಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬ್ಯಾನರ್ಜಿ ಮಂಗಳವಾರ ವಿವಾದಾತ್ಮಕ ಕಾನೂನಿನ ಕುರಿತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆಗೆ ಸಿದ್ಧ, ಆದರೆ ಶಾಸನ ಮೊದಲು ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದರು.
ಕೇರಳ ಮತ್ತು ಪಂಜಾಬ್ ನಂತರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು 2019 ರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನವರಿ 27 ರಂದು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯವನ್ನು ತರಲಿದೆ.
ನವೆಂಬರ್ 22 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತದ ಮೊದಲ ಡೇ-ನೈಟ್ ಟೆಸ್ಟ್ ಪಂದ್ಯದ ಆರಂಭಿಕ ದಿನದಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದ್ದಕ್ಕಾಗಿ ಅಲ್ಲಿನ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಗುರಿಯಾಗಿಸಿಕೊಂಡು ಕೆಲವರು ಬಿಜೆಪಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಭಾರತೀಯ ಸಂವಿಧಾನವನ್ನು ಅನುಸರಿಸುತ್ತಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮಂಗಳವಾರ ಆರೋಪಿಸಿದ್ದಾರೆ.
ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಇತರ ಗಣ್ಯರು ಕುಳಿತಿದ್ದ ಮುಖ್ಯ ವೇದಿಕೆಯಲ್ಲಿ ನನಗೆ ಸ್ಥಾನ ನೀಡದೆ ಅವಮಾನ ಮಾಡಿದ್ದಲ್ಲದೆ, ಯಾವುದೋ ಮೂಲೆಯಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು ಎಂದು ರಾಜ್ಯಪಾಲ ಜಗದೀಪ್ ಧಂಖರ್ ಹೇಳಿದ್ದಾರೆ.
ಕೊಲ್ಕತ್ತಾದಲ್ಲಿ ಇಂದು ಅಮಿತ್ ಶಾ ಮಮತಾ ಬ್ಯಾನರ್ಜೀ ಅವರು ಮತಕ್ಕಾಗಿ ನುಸುಳುಕೋರರನ್ನು ರಾಜ್ಯದಲ್ಲಿ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಪಶ್ಚಿಮ ಬಂಗಾಳದಲ್ಲಿ ಒಡೆದಾಳುವ ರಾಜಕಾರಣ ನಡೆಯಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರದಂದು ಬಂಗಾಳದ ಜನರಿಗೆ ತಮ್ಮ ಮೇಲೆ ನಂಬಿಕೆ ಇಡುವಂತೆ ಮನವಿ ಕೊಂಡಿದ್ದಾರೆ. ಎಸ್ಆರ್ಸಿ ವಿಚಾರವಾಗಿ ಮಾತನಾಡಿದ ಅವರು ಅದನ್ನು ಪಶ್ಚಿಮ ಬಂಗಾಳದಲ್ಲಿ ಅನುಮತಿಸುವುದಿಲ್ಲ ಎಂದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರೊಂದಿಗಿನ ಸಭೆಯಲ್ಲಿ ನಾಗರಿಕರ ನೋಂದಣಿ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು, ದೇಶದಲ್ಲಿ ಸೂಪರ್ ತುರ್ತು ಪರಿಸ್ಥಿತಿ ಇದೆ ಮತ್ತು ಸಂವಿಧಾನದ ಹಕ್ಕುಗಳು ಮತ್ತು ಸ್ವಾತಂತ್ರ್ಯ ರಕ್ಷಣೆಗಾಗಿ ಎಲ್ಲರೂ ಸಿದ್ದರಾಗಿರಬೇಕು ಎಂದು ಕರೆ ನೀಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎನ್ಆರ್ಸಿ ಜಾರಿಗೆ ಬರಲಿದೆ. ಆದಾಗ್ಯೂ ಮಮತಾ ತಮ್ಮ ಮತ ಬ್ಯಾಂಕ್ ಉಳಿಸಿಕೊಳ್ಳಲು ಬಾಂಗ್ಲಾದೇಶಿಗರನ್ನು ರಕ್ಷಿಸಲು ಬಯಸಿದರೆ ಅವರು ಬಾಂಗ್ಲಾದೇಶದ ಪ್ರಧಾನಿಯಾಗುವುದು ಉತ್ತಮ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಟೀಕಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರದಂದು ನೇತಾಜಿ ಸುಭಾಸ್ ಚಂದ್ರ ಬೋಸ್ಗೆ ಏನಾಯಿತು ಎಂದು ತಿಳಿಯುವ ಹಕ್ಕಿದೆ ಎಂದು ಪ್ರತಿಪಾದಿಸಿದರು. 74 ವರ್ಷಗಳ ಹಿಂದೆ ನಾಪತ್ತೆಯಾದ ದಿನದಂದು ಮಣ್ಣಿನ ಮಗ ಸುಭಾಶ್ ಚಂದ್ರಬೋಸ್ ಅವರನ್ನು ಸ್ಮರಿಸುತ್ತಾ ಮಮತಾ ಬ್ಯಾನರ್ಜೀ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.