ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly Elections) ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಬಿ.ಎಸ್ ಯಡಿಯೂರಪ್ಪ (BS Yeddyurappa) ಅವರ ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಅವರನ್ನು ಆ ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ- ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ
MB Patil: ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಅಭ್ಯರ್ಥಿ ಪರವಾಗಿ ಜಯಘೋಷ ಮೊಳಗಿಸಿದರು. ಕಾರ್ಯಕರ್ತರ ಉತ್ಸಾಹವೇ ಪಕ್ಷದ ಬಲವಾಗಿದ್ದು, 1ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಶ್ರೀ ರಾಜು ಅವರು ವಿಜಯ ಸಾಧಿಸಲಿದ್ದಾರೆಂಬ ವಿಶ್ವಾಸ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.
Minister MB Patil: ನಾನು ವಿಜಯಪುರ, ಬಳ್ಳಾರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆ ಓಡಾಡಿದ್ದೇನೆ. ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡುವುದು ನಮ್ಮ ಕರ್ತವ್ಯ. ಜನರು ಬಿಸಿಲನ್ನೂ ಲೆಕ್ಕಿಸದೆ ಕಾಂಗ್ರೆಸ್ ಪರವಾಗಿ ಸ್ಪಂದಿಸುತ್ತಿದ್ದಾರೆ. ಬೆಳಗಾವಿ, ಬೀದರ್, ಕಲಬುರಗಿ, ಹಾವೇರಿ ಮುಂತಾದ ಕಡೆಗಳಲ್ಲೆಲ್ಲ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮೋದಿಯವರ 10 ವರ್ಷಗಳ ಆಡಳಿತ ಜನರಿಗೆ ಸಾಕಾಗಿ ಹೋಗಿದೆ- ಸಚಿವ ಎಂ.ಬಿ. ಪಾಟೀಲ
ಎಲೆಕ್ಟ್ರೋಲ್ ಬಾಂಡ್ ಗಳ ಮೂಲಕವೇ ಸುಮಾರು 7,500 ಕೋಟಿ ರೂ.ಗಳ ಅಕ್ರಮ ನಡೆಸಿ, ಮೋದಿಯವರು ಭ್ರಷ್ಟಾಚಾರಕ್ಕೆ ಹೊಸ ಭಾಷ್ಯ ಬರೆದಿದ್ದಾರೆ. ಅವರ ಮುಖವಾಡ ಕಳಚಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ದೇಶದ ಪ್ರಮುಖ ಕನ್ನಡಕ ಸರಣಿ ಲೆನ್ಸ್ಕಾರ್ಟ್ ಬೆಂಗಳೂರಿನಲ್ಲಿ ತನ್ನ ಮೆಗಾ ಫ್ಯಾಕ್ಟರಿಯನ್ನು ನಿರ್ಮಿಸಲು ಯೋಜಿಸುತ್ತಿದೆ.ಈ ವಿಚಾರವನ್ನು ಲೆನ್ಸ್ಕಾರ್ಟ್ ಸಹ-ಸಂಸ್ಥಾಪಕ ಪೆಯೂಶ್ ಬನ್ಸಾಲ್ ಈ ಮಾಹಿತಿಯನ್ನು ಲಿಂಕ್ಡ್ಇನ್ನಲ್ಲಿ ಹಂಚಿಕೊಂಡಿದ್ದಾರೆ.ಇದಕ್ಕಾಗಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 60 ಕಿಮೀ ಪ್ರದೇಶದಲ್ಲಿ 25 ಎಕರೆ ಜಮೀನು ಬೇಕು ಎಂದು ಪೋಸ್ಟ್ನಲ್ಲಿ ಬರೆದಿದ್ದಾರೆ.
ಲೆನ್ಸ್ ಕಾರ್ಟ್ ಉನ್ನತಾಧಿಕಾರಿ ಪೀಯೂಷ್ ಬನ್ಸಾಲ್ 'ಎಕ್ಸ್'ನಲ್ಲಿ ತಮ್ಮ ಅಗತ್ಯದ ಬಗ್ಗೆ ಒಂದು ಪೋಸ್ಟ್ ಹಾಕಿದ್ದರು.ಅದರಲ್ಲಿ ಅವರು, ಯಾವುದಾದರೂ ಉದ್ಯಮ ಸಂಸ್ಥೆಗೆ ಜಮೀನು ಮಾರಾಟ ಮಾಡಲು ಆಸಕ್ತಿ ಇದ್ದರೆ ತಮಗೆ ಇ-ಮೇಲ್ ಕಳಿಸುವಂತೆ ಕೋರಿದ್ದರು.
ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಗೆ ಸಹಕರಿಸಿದ ಸ್ಥಳೀಯ ಜನರು ಹಾಗೂ ನೇತೃತ್ವ ವಹಿಸಿದ ಜಿಲ್ಲಾಡಳಿತದ ಬಗ್ಗೆಯೂ ಪಾಟೀಲ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಅಭಿವೃದ್ಧಿಯ ಬಗ್ಗೆ ಹಾಗೂ ಜನರ ಕಷ್ಟನಷ್ಟಗಳ ಬಗ್ಗೆ ನಿಜವಾದ ಕಾಳಜಿ ಇತ್ತು. ಪ್ರವಾಹ, ಬರ ಸೇರಿದಂತೆ ಯಾವುದೇ ನೈಸರ್ಗಿಕ ವಿಪತ್ತು ಉಂಟಾದಾಗ ಕರ್ನಾಟಕ ಸೇರಿದಂತೆ ದೇಶದ ಯಾವುದೇ ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತಿದ್ದರು. ಆದರೆ, ಮೋದಿ ಅವರಿಗೆ ಇಂತಹ ನಿಜವಾದ ಕಾಳಜಿ ಇಲ್ಲ. - ಸಚಿವ ಎಂ.ಬಿ. ಪಾಟೀಲ
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಲಾಭಾಂಶದ ಈ ಬಾಬ್ತಿನ ₹19.84 ಕೋಟಿ ರೂ.ಗಳನ್ನು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಗುರುವಾರ ಚೆಕ್ ರೂಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಧಾನಸೌಧದಲ್ಲಿ ಹಸ್ತಾಂತರಿಸಿದರು.
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
Minister MB Patil: ಜಾತಿ ಗಣತಿ ವರದಿ ಬಗ್ಗೆ ವಿಶೇಷವಾಗಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಆತಂಕ ಇರುವುದು ನಿಜ. ಏಕೆಂದರೆ ಇಲ್ಲಿ ಹೆಚ್ಚಿನವರು ಉಪಪಂಗಡಗಳ ಹೆಸರು ಬರೆಸಿದ್ದಾರೆ. ಇದರ ಬದಲು ಎಲ್ಲ ಉಪಪಂಗಡಗಳೂ 'ವೀರಶೈವ ಲಿಂಗಾಯತ' ಎಂದಾಗಬೇಕು ಎಂದು ನಾವು ದನಿ ಎತ್ತಿದ್ದು ನಿಜ ಎಂದು ಅವರು ವಿವರಿಸಿದರು.
ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಕೇಂದ್ರದ ಅಧಿಕಾರಿಗಳು ಬಂದು ವರದಿ ಸಲ್ಲಿಸಿದ್ದು ಕೂಡ ಹಳೆಯ ಮಾತಾಯಿತು. ಆದರೆ ಕೇಂದ್ರದ ಬಿಜೆಪಿ ಸರ್ಕಾರವು ಇಲ್ಲಿಯವರೆಗೂ ನಮಗೆ NDRF ಅಡಿಯಲ್ಲಿ ಒಂದು ಪೈಸೆಯನ್ನೂ ಕೊಟ್ಟಿಲ್ಲವೆಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.
ಬಂಡವಾಳ ಆಕರ್ಷಣೆಯಲ್ಲಿ ರಾಜ್ಯವು ರಾಷ್ಟ್ರದಲ್ಲೇ ಮುಂಚೂಣಿಯಲ್ಲಿದ್ದು, ನಿರಂತರವಾಗಿ ಬಂಡವಾಳ ಆಕರ್ಷಿಸಲು ಹಾಗೂ ನಮ್ಮಲ್ಲಿ ನೆಲೆಯೂರಿರುವ ಕಂಪನಿಗಳಿಂದ ಮರುಹೂಡಿಕೆ ಉತ್ತೇಜಿಸಲು ಹೊಸ ಸಂಸ್ಥೆಯನ್ನು ರಚಿಸುವ ಸಂಬಂಧ ಚರ್ಚೆ ಆರಂಭಿಸಲಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಕೈಗಾರಿಕೆಗಳಿಗೆ ಕುಡಿಯುವ ನೀರು ಪೂರೈಕೆ ಪ್ರಾಥಮಿಕ ಜವಾಬ್ದಾರಿಯಾಗಿದೆ. ರಾಜ್ಯದ ಉದ್ಯಮಗಳ ಬೆಳವಣಿಗೆಯ ದೃಷ್ಟಿಯಿಂದ ಇದು ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಇದನ್ನು ವಿವಿಧ ಇಲಾಖೆಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪಾಟೀಲ್ ಹೇಳಿದರು.
World Economic Forum: ಲುಲು ಗ್ರೂಪ್ ಸದ್ಯಕ್ಕೆ ಪ್ರತಿತಿಂಗಳು 250 ಟನ್ನುಗಳಷ್ಟು ಸೀಬೆ ಹಣ್ಣು, ಸಪೋಟ, ಹಸಿ ಮೆಣಸಿನಕಾಯಿ, ಬೆಂಡೇಕಾಯಿ, ಬದನೆಕಾಯಿ ಇತ್ಯಾದಿಗಳನ್ನು ಖರೀದಿಸುತ್ತಿದೆ. ವಿಜಯಪುರದಲ್ಲಿ ಜೋಳ, ದ್ರಾಕ್ಷಿ, ಹತ್ತಿ, ಕುಸುಬೆ, ಎಳ್ಳು, ಲಿಂಬೆ ಇತ್ಯಾದಿಗಳ ಕಣಜವಾಗಿದೆ. ಲುಲು ಹೂಡಿಕೆಯಿಂದ ಸ್ಥಳೀಯ ರೈತರಿಗೆ ಅನುಕೂಲ ಆಗಲಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
ರಾಜ್ಯದಲ್ಲಿ ಹೂಡಿಕೆಗೆ ಮುಂದಾಗಿರುವ ಮೈಕ್ರೋಸಾಫ್ಟ್ ಕಂಪನಿಯು ಕೌಶಲ್ಯಾಭಿವೃದ್ಧಿ ಮತ್ತು ಸುಗಮ ಆಡಳಿತ ಉಪಕ್ರಮಗಳ ತರಬೇತಿ ಕೊಡಲಿದೆ. ಹಿಟಾಚಿ ಕಂಪನಿಯು ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಸೇವೆ, ಶಿಕ್ಷಣ ಮತ್ತು ಇ-ಗವರ್ನೆನ್ಸ್ ಕ್ಷೇತ್ರಗಳಲ್ಲಿ ಬಂಡವಾಳ ತೊಡಗಿಸಲಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.