ಯತ್ನಾಳ್ ಅವರಿಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ಆದರೆ ಬಿಜೆಪಿಯವರು ತಮ್ಮ ಸಮಾಧಾನಕ್ಕೆ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಬಹುಶಃ, ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ಬಗ್ಗೆ ಯತ್ನಾಳ್ ಅವರ ಹತ್ತಿರ ಮಾಹಿತಿ ಇರುವುದರಿಂದಲೇ ಅವರು ಹಿಂದೇಟು ಹಾಕುತ್ತಿರಬಹುದು ಎಂದರು.
`ಮೃತ ಕಾರ್ಮಿಕರೆಲ್ಲರೂ ಬಿಹಾರದವರು. ಇವರ ಪಾರ್ಥಿವ ಶರೀರಗಳನ್ನು ಬೆಳಗಾವಿ ಅಥವಾ ಕಲಬುರಗಿ ವಿಮಾನ ನಿಲ್ದಾಣದ ಮೂಲಕ ಪಾಟ್ನಾಗೆ ಕಳಿಸಿ ಕೊಡಲಾಗುವುದು. ಬಳಿಕ, ಮೃತ ಕಾರ್ಮಿಕರ ಊರುಗಳಲ್ಲಿರುವ ಕುಟುಂಬಗಳಿಗೆ ಶವಗಳನ್ನು ತಲುಪಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ.
ತೆಲಂಗಾಣದಲ್ಲಿಂದು ಮತದಾನ ಮುಕ್ತಾಯವಾಗಿದೆ.. ಭಾನುವಾರ ಪಂಚರಾಜ್ಯದ ಫಲಿತಾಂಶ ಹೊರಬೀಳಲಿದೆ.. ಈ ಬಗ್ಗೆ ಆರ್.ಅಶೋಕ್, ಪ್ರಹ್ಲಾದ್ ಜೋಶಿ, ಎಂ.ಬಿ.ಪಾಟೀಲ್ ಮಾತನಾಡಿದ್ದಾರೆ.. ಏನ್ ಹೇಳಿದ್ದಾರೆ ಕೇಳೋಣ ಬನ್ನಿ..
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು 1,777 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು ಇದಕ್ಕೆ ರೈತರಿಂದ ಪ್ರತಿರೋಧ ಕಂಡುಬರುತ್ತಿದೆ. ಈ ಸಂಬಂಧವಾಗಿ ಅನುಕೂಲಕರ ತೀರ್ಮಾನಕ್ಕೆ ಬರಲು ಅ.25ರ ನಂತರ ಮತ್ತೊಂದು ಸಭೆ ಕರೆಯಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿ ಇರುವ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಅತ್ಯಾಧುನಿಕ ಇ.ವಿ.ಮೊಬಿಲಿಟಿ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವನ್ನು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಎಸ್ ಟಿ ಸೋಮಶೇಖರ್ ಜತೆಯಲ್ಲಿದ್ದರು.
ಐಕೆಎಫ್ ಪುನಾರಚನೆಗೆ ಸಂಬಂಧಿಸಿದಂತೆ ಅ.13ರಂದು ಆದೇಶ ಹೊರಡಿಸಲಾಗಿದೆ. ಜಿಂದಾಲ್ ಸ್ಟೀಲ್ ವರ್ಕ್ಸ್ ಉದ್ಯಮದ ಮಾಲೀಕರಾಗಿರುವ ಜಿಂದಾಲ್ ಅವರನ್ನು ಉಕ್ಕು ವಲಯದಿಂದ ಆಯ್ಕೆ ಮಾಡಲಾಗಿದ್ದು, ಇವರು ಫೋರಂನ ನಿರ್ದೇಶಕ ಮತ್ತು ಕೋ-ಚೇರ್ ಪರ್ಸನ್ ಆಗಿ ಕೆಲಸ ಮಾಡಲಿದ್ದಾರೆ ಎಂದು ಐಕೆಎಫ್ ಅಧ್ಯಕ್ಷರೂ ಆದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಕನ್ನಡಿಗರು ತಮ್ಮ ಪರಂಪರೆಗೆ ಅನುಗುಣವಾಗಿ ಅಮೆರಿಕದ ಸಂಸ್ಕೃತಿ-ಸಮಾಜಗಳಲ್ಲಿ ಒಂದಾಗಿದ್ದು, ಅಮೆರಿಕ ಮತ್ತು ಭಾರತದ ನಡುವಿನ ಸೇತುವೆಗಳಂತೆ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಸಂಗತಿಯಾಗಿದೆ ಎಂದು ಅವರು ಬಣ್ಣಿಸಿದರು.
ಲಾಭದಲ್ಲಿದ್ದರೂ ಸಮಕಾಲೀನ ಮಾರುಕಟ್ಟೆಗೆ ತಕ್ಕಂತೆ ಇಲ್ಲದಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್)ಕ್ಕೆ ಸಂಪೂರ್ಣ ಹೊಸ ರೂಪ ಕೊಟ್ಟು, ಕಾರ್ಪೊರೇಟ್ ಶೈಲಿಯಲ್ಲಿ ಅದರ ಚಟುವಟಿಕೆಗಳು ಇರುವ ಹಾಗೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
Kaveri water dispute: ಕರ್ನಾಟಕ ಹಾಗೂ ತಮಿಳುನಾಡು ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವಾಗಿ ಬಿಜೆಪಿಯವರಿಗೆ ತಮ್ಮದೇ ಪ್ರಧಾನಮಂತ್ರಿಯನ್ನು ಭೇಟಿ ಮಾಡಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಜಲಸಂಪನ್ಮೂಲ ಸಚಿವರೂ ಆದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮಂಗಳವಾರ ಕೇಳಿದ್ದಾರೆ.
ಪಕ್ಷದ ಹಿರಿಯ ನಾಯಕರಾಗಿರುವ ಎಮ್ಎಲ್ಸಿ ಬಿ.ಕೆ. ಹರಿಪ್ರಸಾದ್ ಅವರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರೂ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು.
Mysore Paper Mills: ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನರಾಗಿದ್ದ ಸರ್ ಎಂ ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಮೈಸೂರು ಪೇಪರ್ ಮಿಲ್ಸ್ ಸದ್ಯಕ್ಕೆ 1,482 ಕೋಟಿ ರೂ. ನಷ್ಟದ ಸುಳಿಯಲ್ಲಿದೆ. ಜೊತೆಗೆ 229 ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ.
ಜವಾಹರ್ ಲಾಲ್ ನೆಹರು ಸೇರಿದಂತೆ ಅನೇಕರು ಅರ್ಥಪೂರ್ಣ ಕೆಲಸಗಳನ್ನು ಮಾಡುವ ಮೂಲಕ ಭಾರತವನ್ನು ದೈತ್ಯ ಆರ್ಥಿಕ ಶಕ್ತಿಯಾಗಿ ಬೆಳೆಸಿದರು. ಇದನ್ನು ಮೋದಿ ಸೇರಿದಂತೆ ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.