ತಮ್ಮ ಭಾಷಣದಲ್ಲಿ ಉತ್ತರ ಪ್ರದೇಶದ ವೈಭವದ ಗತಕಾಲವನ್ನು ಉಲ್ಲೇಖಿಸಿದ ಮುರ್ಮು, "ಬುಡಕಟ್ಟು ಸಮಾಜದಲ್ಲಿ ಜನಿಸಿದ ಮಹಿಳೆಯೊಬ್ಬರು ಬೆಂಬಲ ಪಡೆಯಲು ನಿಮ್ಮ ಮುಂದೆ ಬಂದಿದ್ದಾರೆ" ಎಂದು ಹೇಳಿದರು. "ನನ್ನ ಬಲವಾದ ಇಚ್ಛಾಶಕ್ತಿಯ ಉನ್ನತ ಶಿಕ್ಷಣವನ್ನು ಪಡೆದುಕೊಂಡೆ. ಅನೇಕ ಕೊರತೆಗಳ ಹೊರತಾಗಿಯೂ ಈ ಸಾಧನೆ ಮಾಡಿದೆ. ನಾನು ದುರ್ಬಲ ವರ್ಗಗಳು ಮತ್ತು ಬುಡಕಟ್ಟು ಸಮಾಜಕ್ಕಾಗಿ ಜೀವಮಾನವಿಡೀ ದುಡಿದಿದ್ದೇನೆ. ನಿಮ್ಮೆಲ್ಲರ ಬೆಂಬಲ ನನಗೆ ಸಿಗುವ ವಿಶ್ವಾಸವಿದೆ" ಎಂದು ಹೇಳಿದರು.
ಕೇಂದ್ರ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಖಾತೆ ನಿಭಾಯಿಸುತ್ತಿರುವ ಮುಖ್ತಾರ್ ಅಬ್ಬಾಸ್ ನಖ್ವಿ ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ನಖ್ವಿ ರಾಜ್ಯಸಭೆಯ ಅಧಿಕಾರಾವಧಿ ನಾಳೆ ಕೊನೆಗೊಳ್ಳಲಿದೆ. ಇಂದಿನ ಸಚಿವ ಸಂಪುಟ ಸಭೆಯ ನಂತರ ಅವರ ರಾಜೀನಾಮೆ ನೀಡಿದ್ದಾರೆ.
ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಬೆಂಬಲ ನೀಡುವ ಬಗ್ಗೆ ಪರೋಕ್ಷವಾಗಿ ಹೇಳಿದರು.
ವಿರೋಧ ಪಕ್ಷಗಳು ತಮ್ಮ ಸಾಮಾನ್ಯ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಿದೆ. ಸಿನ್ಹಾ ಅವರು ಜೂನ್ 27 ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಈ ವರ್ಷ ಬಜೆಟ್ ಅಧಿವೇಶನ 2022 ಎರಡು ಭಾಗಗಳಲ್ಲಿ ನಡೆಯಲಿದೆ, ಮೊದಲ ಭಾಗವು ಜನವರಿ 31 ರಿಂದ ಫೆಬ್ರವರಿ 11 ರವರೆಗೆ ಮತ್ತು ಎರಡನೇ ಭಾಗವು ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ.
ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರವನ್ನು ಇಂದು (ಡಿಸೆಂಬರ್ 9) ಸೇನಾ ವಿಮಾನದ ಮೂಲಕ ದೆಹಲಿಗೆ ತರಲಾಗುವುದು ಮತ್ತು ನಾಳೆ ದೆಹಲಿಯಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು.
ವೆಂಬರ್ 2021 ರಲ್ಲಿ ಈ ವರ್ಷ ಎನ್ಡಿಎ ಪರೀಕ್ಷೆಗೆ ಹಾಜರಾಗಲು ಮಹಿಳೆಯರಿಗೆ ಅವಕಾಶ ನೀಡಿದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯರಿಗೆ ಪರೀಕ್ಷೆಗೆ ಹಾಜರಾಗುವ ಹಕ್ಕನ್ನು ನಿರಾಕರಿಸಲು ಅವರು ಬಯಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ,ಕೇಂದ್ರ ಸಚಿವ ರಾಮದಾಸ್ ಅಠವಾಲೆ ಭಾನುವಾರ ಅವರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟಕ್ಕೆ (ಎನ್ಡಿಎ) ಸೇರಲು ಆಹ್ವಾನಿಸಿದರು.
Girls Permitted To Join NDA: ಈ ವರ್ಷ ನಡೆಯಲಿರುವ NDA ಪ್ರವೇಶ ಪರೀಕ್ಷೆಯಲ್ಲಿ ಯುವತಿಯರಿಗೂ ಕೂಡ ಕೂಡ ಹಾಜರಾಗಲು ಅವಕಾಶ ಕಲ್ಪಿಸಬೇಕು ಎಂದು ಸುಪ್ರೀಂ ಆಗಸ್ಟ್ 18 ರಂದು ಆದೇಶಿಸಿತ್ತು. ಈ ವೇಳೆ ಸಶಸ್ತ್ರ ಪಡೆಗಳಲ್ಲಿ (Armed Forces) ಪ್ರವೇಶದ ಬಗ್ಗೆ ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿತ್ತು.
ರೈತರು ದೆಹಲಿ ಗಡಿಯಲ್ಲಿ ಕೊರೆಯುವ ಚಳಿಯಲ್ಲಿ 12 ದಿನಗಳಿಂದ ಪ್ರತಿಭಟಿಸುತ್ತಿದ್ದರೂ, ಶೀತಗಾಳಿಗೆ ಈಗಾಗಲೇ ಪ್ರಾಣಹಾನಿ ಸಂಭವಿಸಿದ್ದರೂ ಲೆಕ್ಕಿಸದ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದೆ 'ಮಾತುಕತೆ ನಡೆಸುವ' ನೆಪವನ್ನೇ ಮುಂದುವರೆಸಿದೆ.
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಎನ್ಡಿಎಯ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಚುನಾವಣೆಗೂ ಮೊದಲೇ ಕೊಟ್ಟ ಮಾತಿನಂತೆ ಮತ್ತೊಮ್ಮೆ ಬಿಹಾರದ ಅಧಿಕಾರವನ್ನು ನಿತೀಶ್ ಕುಮಾರ್ ಅವರ ಕೈಗೆ ಒಪ್ಪಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.