ಬೆಂಗಳೂರು, ಮೇ 20 : ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಬಿಜೆಪಿ ಸರ್ಕಾರ ಆಡಳಿತ ನಡೆಸಲೇಬೇಕೆಂದು ಶತಾಯಘತಾಯ ಪ್ರಯತ್ನ ನಡೆಸಲಾಗ್ತಿದೆ. ಇತ್ತ ಕಾಂಗ್ರೆಸ್ ಪಕ್ಷವೂ ಈ ಬಾರಿ ನಮ್ಮದೇ ಸರ್ಕಾರ ಎಂದು ಪಾಸಿಟೀವ್ ಮೈಂಡ್ ನಲ್ಲಿ ಸರ್ಕಸ್ ನಡೆಸುತ್ತಿದೆ. ಮಗದೊಂದು ಕಡೆ ಜೆಡಿಎಸ್ ಪಕ್ಷವೂ ಕುಮಾರಣ್ಣ ನೇ ಈ ಬಾರಿಯ ಮುಖ್ಯಮಂತ್ರಿ ಎಂದು ವಿಶ್ವಾಸದಲ್ಲಿದೆ.
Shobha Karandlaje : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಹಲವು ಯೋಜನೆಗಳನ್ನು ಅನಾವರಣಗೊಳಿಸಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಂತೆ, ವಿರೋಧ ಪಕ್ಷವು ರೌಡಿ ಶೀಟರ್ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿಗೆ ಶುಭಾಶಯ ಕೋರಿದ್ದಾರೆ ಎಂದು ಆರೋಪಿಸಿ ಫೋಟೋ ಬಿಡುಗಡೆ ಮಾಡಿದೆ.
K. S. Ishwarappa : ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಪ್ರಚಾರದ ಅಬ್ಬರವನ್ನೇ ನಡೆಸಿದೆ. ಈ ಮದ್ಯೆ ಕಾಂಗ್ರೇಸ್ ಹಾಗೂ ಬಿಜೆಪಿ ನಡುವೆ ವಿವಾದಗಳು ಪ್ರತ್ಯಾರೋಪಗಳು ಕೇಳಿಬರುತ್ತಿದ್ದು, ಇದೀಗ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಭಾನುವಾರ ನಡೆದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾಜಿ ಸಚಿವ ಈಶ್ವರಪ್ಪ ಭಾಷಣ ಸಂದರ್ಭದಲ್ಲಿ ಮಸೀದಿಯ ಅಝಾನ್ ಗೆ ಕೋಪಗೊಂಡ ಘಟನೆ ನಡೆದಿದೆ
CM Bommai : ನರೇಂದ್ರ ಮೋದಿ ಅವರು ಒಬ್ಬ ಮಹಾನ್ ನಾಯಕ, ನಾವು ಅವರನ್ನು ದೇವರೇಂದಿಲ್ಲ ಮೋದಿಯವರು ತಮ್ಮನ್ನು ದೇವರೇಂದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
PM Modi : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಅರ್ಪಿಸಲು ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದಿದ್ದಾರೆ. ಇಂದು ಬೆಳಿಗ್ಗೆ ರಾಜ್ಯಕ್ಕೆ ತಮ್ಮ ಆರನೇ ಭೇಟಿಯ ಸಂದರ್ಭದಲ್ಲಿ, ಪ್ರಧಾನಿಯವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.
Siddaramaiah : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಕರ್ನಾಟಕಕ್ಕೆ ಭೇಟಿ ನೀಡಿದ್ದರ ಬೆನ್ನಲ್ಲಿಯೇ ಕಾಂಗ್ರೇಸ್ ಸರಣಿ ಟ್ವೀಟ್ ಗಳ ಮೂಲಕ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಯುತ್ತಿದೆ. ಅಲ್ಲದೇ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ಗಳ ಮೂಲಕ ಪ್ರಧಾನಿಯವರಿಗೆ ಪ್ರಶ್ನಿಸುತ್ತಿದಾರೆ. " ಕರ್ನಾಟಕ ಬಿಜೆಪಿಯ ಪೇಟಿಯಂ, ಬಿಜೆಪಿ ಭ್ರಷ್ಟಾಚಾರದ ಹೊರೆಯನ್ನೇ ಹೊತ್ತಿದೆ, ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದಾರೆ.
Congress Tweet : ಪ್ರಧಾನಿ ನರೇಂದ್ರ ಮೋದಿಯವರು ಕಾರ್ನಾಟಕ ರಾಜ್ಯಕ್ಕೆ ಬೇಟಿ ನೀಡಿದ್ದಾರೆ. ಕಾಂಗ್ರೇಸ್ ತನ್ನ ಸರಣಿ ಟ್ವೀಟ್ ಗಳ ಮೂಲಕ ಪ್ರಧಾನಿಯನ್ನು ಸ್ವಾಗತಿಸುವುದರ ಜೊತೆಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ಮೈಸೂರಿಗೆ ಆಗಮಿಸಿರುವ ಪ್ರಧಾನಿ ಮೋದಿ ಸದ್ಯ ಮಂಡ್ಯದಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ. ಮಧ್ಯಾಹ್ನ ಅವರು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಈ ವಿಚಾರವಾಗಿ ಕಾಂಗ್ರೇಸ್ ಮೋದಿ ಮೋಸ ಎನ್ನುವ ಹ್ಯಾಷ್ಟ್ಯಾಗ್ ಬಳಸಿ ಟ್ವೀಟ್ ಮಾಡಿದೆ.
Shobha Karandlaje : ಹಲವಾರು ರಾಜ್ಯಗಳಲ್ಲಿ ಅಸ್ತಿತ್ವವೇ ಇಲ್ಲದ ಇನ್ನೊಂದು ಪಕ್ಷಕ್ಕೆ ಯಾರೂ ಹೋಗುವುದಿಲ್ಲʼ ಈ ಕುರಿತು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನರೆಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ದೇಶದಲ್ಲಿ ಯಶಸ್ಸನ್ನೇ ಸಾಧಿಸುತ್ತಿದೆ. ಕಳೆದ ವರ್ಷ ಇದೇ ವೇಳೆ ಅಭೂತಪೂರ್ವ ಗೆಲುವನ್ನು ಬಿಜೆಪಿ ಸಾಧಿಸಿತ್ತು. ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ 2ನೇ ಬಾರಿ ಸರಕಾರ ರಚನೆ ಅವಕಾಶ ಯೋಗಿಯವರಿಗೆ ಸಿಕ್ಕಿತ್ತು. ಮೊನ್ನೆ ಗುಜರಾತ್ ನಲ್ಲಿ ನಡೆದ ಚುನಾವಣೆಯಲ್ಲಿ ಹಿಂದೆ ಮೋದಿಯವರೇ ಸಿಎಂ ಆಗಿದ್ದಾಗ ಸಿಗದ ದೊಡ್ಡ ಯಶಸ್ಸು ಅವರು ಪ್ರಧಾನಿ ಆದಾಗ ಗುಜರಾತಿನ ಜನರು ಮೊನ್ನೆ ಕೊಟ್ಟರು ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಹೆಲಿಕಾಪ್ಟರ್ ರನ್ನು ಏಪ್ರಿಲ್ 16 ರಂದು ತಪಾಸಣೆ ನಡೆಸಿದ್ದ ಕರ್ನಾಟಕದ ಕೇಡರ್ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹಸ್ಸಿನ್ ನಿಯಮಗಳಿಗೆ ಅನುಗುಣವಾಗಿ ತಮ್ಮ ಕರ್ತವ್ಯವನ್ನು ಮಾಡಿರುವುದಾಗಿ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಹೊಸ ಸಿಬಿಐ ನಿರ್ದೇಶಕನನ್ನು ನೇಮಕ ಮಾಡಲು ಜನವರಿ 24 ರಂದು ಸಭೆ ಸೇರಲಿದೆ.ಈ ಸಭೆಯಲ್ಲಿ ಸಮಿತಿ ಇತರ ಸದಸ್ಯರಾದ ಮಲ್ಲಿಕಾರ್ಜುನ್ ಖರ್ಗೆ, ಮುಖ್ಯ ನ್ಯಾಯಮೂರ್ತಿ ಇರಲಿದ್ದಾರೆ.
2019 ರ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ಈಗ ಸಣ್ಣ ಉದ್ದಿಮೆದಾರರ ತೃಪ್ತಿ ಪಡಿಸುವ ನಿಟ್ಟಿನಲ್ಲಿ ಸದ್ಯದಲ್ಲೇ ವಿಮಾ ಯೋಜನೆಯೊಂದನ್ನು ಜಾರಿಗೆ ತರುವ ಯೋಜನೆಯನ್ನು ರೂಪಿಸಲಾಗುತ್ತಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ಪ್ರಮುಖ 'ಆಯುಷ್ಮಾನ್ ಭಾರತ್' ಯೋಜನೆಯಿಂದ ಹೊರಬರಲು ನಿರ್ಧರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 23 ರಂದು ದೇಶದಾದ್ಯಂತ 10.74 ಕೋಟಿ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ಆರೋಗ್ಯ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಚಾಲನೆ ನೀಡಿದ್ದರು.
ಭಾರತವು 2022 ರಲ್ಲಿ ಜಿ-20 ಶೃಂಗಸಭೆಯನ್ನು ಆಯೋಜಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.ಅದೇ ವರ್ಷ ಭಾರತ ತನ್ನ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವುದರಿಂದ ಜಿ ಶೃಂಗಸಭೆಯನ್ನು ಭಾರತಕ್ಕೆ ಆಯೋಜಿಸಿಸುವ ಅವಕಾಶ ನೀಡಬೇಕೆಂದು ಪ್ರಧಾನಿ ವಿನಂತಿಸಿಕೊಂಡಿದ್ದರು.
ಕೇಂದ್ರ ಸರ್ಕಾರವು ಆಂಧ್ರಪ್ರದೇಶವನ್ನು ಮುಗಿಸುವ ಸಂಚು ರೂಪಿಸಿದೆ, ಒಂದುವೇಳೆ ರಾಜ್ಯದ ನಾಯಕರ ಮೇಲೆ ತೆರಿಗೆ ದಾಳಿ ಮಾಡುವುದನ್ನು ನಿಲ್ಲಿಸದಿದ್ದಲ್ಲಿ ಭಾರಿ ಬೆಲೆ ತೆರಬೇಕಾಗುತ್ತದೆ" ಎಂದು ಆಂದ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಎಚ್ಚರಿಸಿದರು.
ನರೇಂದ್ರ ದಾಮೋದರ ದಾಸ್ ಮೋದಿಯೆಂಬ ಅಶ್ವಮೇಧದ ಕುದುರೆಯನ್ನು ಕಟ್ಟಿಹಾಕಲು ಈಗ ಪ್ರತಿಪಕ್ಷಗಳು ಒಂದು ದೊಡ್ಡ ಧಾಳವನ್ನು ಉರುಳಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಆ ಧಾಳ ಹೇಗಿದೆ ಎಂದರೆ ಬಿಜೆಪಿಯಲ್ಲಿ ಇದ್ದು ಮೋದಿ ಸರ್ಕಾರಕ್ಕೆ ಸವಾಲಿನ ಮೇಲೆ ಸವಾಲು ಹಾಕುತ್ತಿದ್ದ ಶತ್ರುಘ್ನ ಸಿನ್ಹಾ ಈಗ ಪ್ರತಿಪಕ್ಷಗಳ ನೆಚ್ಚಿನ ಬಿಜೆಪಿ ವ್ಯಕ್ತಿ!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.