ನಿತೀಶ್ ಕುಮಾರ್ ಅವರ ಮೇಲಿನ ದಾಳಿಯನ್ನು ಮುಂದುವರೆಸಿದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಮಾಜಿ ಮಿತ್ರ ಪಕ್ಷವಾದ ಭಾರತೀಯ ಜನತಾ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತೆ ಅವರು ಪಕ್ಷದೊಂದಿಗೆ ಕೈಜೋಡಿಸಬಹುದು ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ಮಹಾಮೈತ್ರಿಕೂಟದೊಂದಿಗೆ ಸರ್ಕಾರ ರಚಿಸಲು ಹೊರಟಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರನ್ನು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ವ್ಯಂಗ್ಯವಾಡಿದ್ದಾರೆ.
ತಿಂಗಳ ಹಿಂದಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಪ್ರಶಾಂತ್ ಕಿಶೋರ್ ಸೇರುವ ಬಗ್ಗೆ ಸಾಕಷ್ಟು ವದಂತಿಗಳು ಹರಡಿದ್ದವು, ಆದರೆ ಕಾಲಾಂತರದಲ್ಲಿ ಅವರು ಕಾಂಗ್ರೆಸ್ ಗೆ ಸೇರುವ ನಿರ್ಧಾರದಿಂದ ಹಿಂದೆ ಸರಿದಿದ್ದರು.ಈಗ ಅವರು ತಾವು ಕಾಂಗ್ರೆಸ್ ಪಕ್ಷದ ಜೊತೆ ಯಾಕೆ ಕೆಲಸ ಮಾಡುವುದಿಲ್ಲ ಎನ್ನುವುದರ ಕುರಿತಾಗಿ ಬಹಿರಂಗವಾಗಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಪ್ರಯತ್ನಗಳು ವ್ಯರ್ಥವಾಗಿರುವ ಹಿನ್ನಲೆಯಲ್ಲಿ ಈಗ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಈಗ ಚಂಪಾರಣ್ ಜಿಲ್ಲೆಯಿಂದ 3000 ಕಿಮೀ ಪಾದಯಾತ್ರೆಯನ್ನು ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಆದರೆ ಅವರು ಇದೆ ವೇಳೆ ಯಾವುದೇ ಪಕ್ಷವನ್ನು ಸ್ಥಾಪಿಸಲು ಮುಂದಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಕಳೆದ ತಿಂಗಳು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರೊಂದಿಗೆ ಪ್ರಶಾಂತ್ ಕಿಶೋರ್ ಸರಣಿ ಸಭೆ ನಡೆಸಿದ್ದರು. ಕಳೆದ ಹಲವಾರು ದಿನಗಳಿದ ರಾಜಕೀಯ ನಿಪುಣನ ಕಾಂಗ್ರೆಸ್ ಸೇರ್ಪಡೆ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪಕ್ಷವು ಐಪ್ಯಾಕ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ, ಮುಂದಿನ ವರ್ಷ ತೆಲಂಗಾಣದಲ್ಲಿ ಚುನಾವಣೆ ಇರುವುದರ ಹಿನ್ನಲೆಯಲ್ಲಿ ಪಕ್ಷವು ಪ್ರಶಾಂತ್ ಕಿಶೋರ್ ಅವರ ಸಂಸ್ಥೆ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ.ಈಗಾಗಲೇ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎನ್ನುವ ಊಹಾಪೋಹಗಳು ತೀವ್ರಗೊಂಡಿರುವ ಬೆನ್ನಲ್ಲೇ ತೆಲಂಗಾಣ ರಾಷ್ಟ್ರ ಸಮಿತಿ ಜೊತೆ ಒಪ್ಪಂದ ಮಾಡಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.
2024 ರ ಸಾರ್ವತ್ರಿಕ ಚುನಾವಣೆಗೆ ಈಗಲೇ ಸಿದ್ದತೆ ನಡೆಸಿರುವ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರದಂದು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರೊಂದಿಗೆ ಮೂರನೇ ಸಭೆಯನ್ನು ನಡೆಸಲಿದ್ದಾರೆ.
ಇತ್ತೀಚೆಗಷ್ಟೇ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸೋಲಿನ ನಂತರ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಮತ್ತು ಕಾಂಗ್ರೆಸ್ನ ಉನ್ನತ ನಾಯಕರ ಜೊತೆ ಶನಿವಾರ ಸಭೆ ನಡೆಸಿದರು. ಮೂಲಗಳ ಪ್ರಕಾರ ಅವರು ಮುಂದಿನ ದಿನಗಳಲ್ಲಿ ಪಕ್ಷವನ್ನು ಸೇರಲಿದ್ದಾರೆ ಆದರೆ ಅವರು ಯಾವುದೇ ಹುದ್ದೆಯ ಪ್ರಸ್ತಾಪವನ್ನು ಮುಂದಿಟ್ಟಿಲ್ಲ ಎನ್ನಲಾಗಿದೆ.
ಇದು 'ನೈಸರ್ಗಿಕ ಹಕ್ಕು' ಅಲ್ಲ, ವಿಶೇಷವಾಗಿ ಕಳೆದ 10 ವರ್ಷಗಳಲ್ಲಿ ಪಕ್ಷವು ಶೇ. 90 ರಷ್ಟು ಚುನಾವಣೆಗಳನ್ನು ಕಳೆದುಕೊಂಡಿದೆ. ಈಗ ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್) ಇಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ನ ದೊಡ್ಡ ನಾಯಕರನ್ನು ಒಬ್ಬರ ನಂತರ ಒಬ್ಬರುನ್ನು ತೃಣಮೂಲ ಕಾಂಗ್ರೆಸ್ (TMC)ಗೆ ಬರ ಮಾಡಿಕೊಳ್ಳುತ್ತಿದ್ದಾರೆ. ದೇಶಾದ್ಯಂತ ತನ್ನ ನೆಲೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ.
"ಲಖಿಂಪುರ್ ಖೇರಿ ಘಟನೆಯ ಹಿನ್ನೆಲೆಯಲ್ಲಿ ದೇಶದ ಅತ್ಯಂತ ಹಳೆಯ ಪಕ್ಷ ಮತ್ತು ವಿರೋಧ ಪಕ್ಷದಿಂದ ಸಾಮಾನ್ಯವಾಗಿ ಜನರು ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಈ ಸಂದರ್ಭದಲ್ಲಿ ಜನರು ನಿರಾಸೆಗೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ರಾಜ್ಯ ಘಟಕಗಳಲ್ಲಿ ಮತ್ತು ಕೇಂದ್ರದಲ್ಲಿ ಹಲವು ವಿಭಾಗಗಳಾಗಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈಗ ಪ್ರಶಾಂತ್ ಕಿಶೋರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಚರ್ಚೆಯನ್ನು ನಡೆಸಲಾಗುತ್ತಿದೆ.
ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಚರ್ಚೆ ನಡೆಸಿದ ಒಂದು ದಿನದ ನಂತರ, ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ವದಂತಿಗಳು ತೀವ್ರವಾಗಿವೆ.
ಎನ್ಸಿಪಿಯ ಶರದ್ ಪವಾರ್ ಪ್ರಸ್ತುತ ಘಟನೆಗಳನ್ನು ಚರ್ಚಿಸಲು ರಾಜಕಾರಣಿಗಳು ಮತ್ತು ಬುದ್ಧಿಜೀವಿಗಳನ್ನು ಆಹ್ವಾನಿಸಲಾಗಿದೆ, ಯಾವುದೇ ತೃತೀಯ ರಂಗದ ಸಭೆಯನ್ನು ಆಯೋಜಿಸುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಅದ್ಭುತ ಪ್ರದರ್ಶನದ ನಂತರ ಅನೇಕರು ಪಂದ್ಯಶ್ರೇಷ್ಠ ಎಂದು ಬಣ್ಣಿಸಿದ ಪ್ರಶಾಂತ್ ಕಿಶೋರ್ ಅವರು ಚುನಾವಣಾ ತಂತ್ರಜ್ಞ ಕೆಲಸವನ್ನು ತ್ಯಜಿಸುವುದಾಗಿ ಇಂದು ಘೋಷಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವಿನೊಂದಿಗೆ ಪಂಜಾಬ್ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಹಾಯ ಮಾಡಿದ ನಾಲ್ಕು ವರ್ಷಗಳ ನಂತರ, ಪ್ರಶಾಂತ್ ಕಿಶೋರ್ ಅವರು ರಾಜ್ಯಕ್ಕೆ ಮರಳಿದ್ದಾರೆ, ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಗೆ ಪ್ರಧಾನ ಸಲಹೆಗಾರರಾಗಿ ನೇಮಕವಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.