PSI Candidate Protests: ಸಿಎಂ ಜನತಾ ದರ್ಶನಕ್ಕೆ ಆಗಮಿಸಿದ್ದ ಪಿಎಸ್ಐ ಅಭ್ಯರ್ಥಿಗಳು ಕಚೇರಿ ಮುಂಭಾಗ ಪ್ರತಿಭಟನೆಗೆ ಮುಂದಾದರು. ಈ ವೇಳೆ ಪ್ರತಿಭಟನೆಗೆ ಅವಕಾಶ ಕೊಡದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ 31ನೇ ಆರೋಪಿಯಾಗಿರುವ ಡಿವೈಎಸ್ಪಿ ಶಾಂತಕುಮಾರ್ ಬೆಂಗಳೂರಿನ ಕೃಷಿ ಭವನದ ಮುಂದಿರುವ ಫುಟ್ಪಾತ್ ರಸ್ತೆಯಲ್ಲೇ 1 ಕೋಟಿ ರೂ ಪಡೆದಿದ್ದರು ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ.
ಪಿಎಸ್ಐ ನೇಮಕಾತಿ ಅಕ್ರಮ ವಿಚಾರ ನಿಳುವಳಿ ಸೂಚನೆ ಅಡಿಯಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್ ಮನವಿ ಮಾಡಿತ್ತು. ತನಿಖೆ ಹಂತದಲ್ಲಿ ಈ ಪ್ರಕರಣ ಇದೆ. ಕೋರ್ಟ್ ನಲ್ಲಿ ಕೇಸ್ ಇರುವಾಗ ಚರ್ಚೆ ಮಾಡಲು ಬರಲ್ಲ. ಬೇರೆ ರೂಪದ ಅಡಿಯಲ್ಲಿ ಚರ್ಚೆ ಮಾಡೋಣ ಎಂದು ಸ್ಪೀಕರ್ ತಿರಸ್ಕರಿದ್ದರು.
ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಪಿಎಸ್ಐ ಪರೀಕ್ಷಾ ನೇಮಕಾತಿ ಅಕ್ರಮ ಸಂಬಂಧ ಪರೀಕ್ಷೆ ಮುಗಿದ ನಾಲ್ಕು ದಿನದ ಅಂತರದಲ್ಲಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರು ಸ್ಟ್ರಾಂಗ್ ರೂಮ್ ತೆರಳಿ 22 ಎಂಎಂಆರ್ ಶೀಟ್ ತಿದ್ದುಪಡಿ ಮಾಡಿದ್ದಾರೆ ಎಂದು ಸಿಐಡಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಅಮೃತ್ ಪೌಲ್ ಸೆಕ್ಷನ್ 164 ಅಡಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶದ ಮುಂದೆ ಹೇಳಿಕೆ ನೀಡುತ್ತೇನೆ ಎಂದು ಹಠ ಹಿಡದಿದ್ದಾರೆ. ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರೆ ಸರ್ಕಾರದ ಸಚಿವರು, ಹಿಂದಿನ ಗೃಹ ಸಚಿವರು, ಮಾಜಿ ಸಿಎಂ ಪುತ್ರನ ಬಣ್ಣ ಬಯಲಾಗಲಿದೆ ಎಂಬ ಭೀತಿ ಇದೆ ಎಂದು ಹೇಳಲಾಗುತ್ತಿದೆ.
ಇಡೀ ರಾಜ್ಯದಲ್ಲಿ ಅಲ್ಲೊಲ ಕಲ್ಲೊಲ ಸೃಷ್ಟಿಸಿರುವ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರೋ ಅಕ್ರಮ ಪ್ರಕರಣ, ದಿನದಿಂದ ದಿನಕ್ಕೆ ಆರೋಪಿಗಳಿಗೆ ಕಾನೂನು ಕುಣಿಕೆ ಬಿಗಿಯಾಗುತ್ತಿದೆ.. ಅಕ್ರಮದ ಕಿಂಗ್ಪಿನ್ ಆರ್ಡಿ ಪಾಟೀಲ್ ಬಂಧನದ ನಂತರ, ನಾನು ಕೇವಲ ಎರಡು ದಿನಗಳಲ್ಲಿ ಬೆಲ್ ಮೇಲೆ ಹೊರಬರುತ್ತೇನೆ..
ಒಂದೊತ್ತಿನ ಊಟ ಬಿಟ್ಟು, ವರ್ಷಗಟ್ಟಲೇ ತನ್ನ ಮನೆಯವರು, ಮನದವರಿಂದ ದೂರವಾಗಿ ಜೀವನದಲ್ಲಿ ಏನಾದ್ರೂ ನಿಶ್ಚಿತ ಗುರಿಯ ಪಟ್ಟು ಹಿಡಿದಿದ್ದ ಆರತಿ ಕೊನೆಗೂ ತನ್ನ ಕನಸನ್ನು ನನಸು ಮಾಡಿಯೇ ಬಿಟ್ಟಿದ್ದಳು.. ಅಪ್ಪ ಅಮ್ಮನ ಕಷ್ಟ, ಮನೆಯ ಬಡತನದ ಬೇಗೆಯ ನಡುವೆಯೂ ತನ್ನ ಕನಸಿಗೆ ಮುನ್ನುಡಿ ಬರೆದಿದ್ದಳು. ಹಗಲು ರಾತ್ರಿ ಎನ್ನದೇ ಕಷ್ಟಪಟ್ಟು ಓದಿ ಪಿಎಸ್ಐ ಎಕ್ಸಾಂ ಬರೆದು ರ್ಯಾಂಕ್ನಲ್ಲಿ ಪಾಸಾಗಿದ್ದಳು ಆರತಿ.
ಪಿಎಸ್ಐ ನೇಮಕಾತಿ ಅಕ್ರಮ ಜಾಲ ಬೆಳಕಿಗೆ ಬರುತ್ತಿದ್ದಂತೆ ಕಲಬುರಗಿಯಲ್ಲಿ ಸಿಐಡಿಯ ಒಂದು ತಂಡ ಕೆಲವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದೆ. ಮತ್ತೊಂದೆಡೆ ಬೆಂಗಳೂರಿನ ಸಿಐಡಿ ಪ್ರಧಾನ ಕಚೇರಿಯಲ್ಲಿ ಏ.25 ರಿಂದಲೂ ಪ್ರತಿದಿನ 50 ಅಭ್ಯರ್ಥಿಗಳನ್ನು ಸಿಐಡಿ ವಿಚಾರಣೆ ನಡೆಸುತ್ತಿದೆ.
ಸಧ್ಯ ಸಿಐಡಿ ಪೊಲೀಸರು, ತನಿಖೆಯನ್ನು ಚುರುಕುಗೊಳಿಸಿದ್ದು, ಅಕ್ರಮ ದಲ್ಲಿ ಭಾಗವಹಿಸಿದ್ದ ಎಲ್ಲಾ ತಪ್ಪಿತಸ್ಥರನ್ನು ಬಂಧಿಸಿ, ಕಾನೂನಿನ ಕ್ರಮಕ್ಕೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.
PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಆಯ್ಕೆಯಾದವರ ವಿರುದ್ಧ ಕ್ರಮ ಜರುಗಿಸಬೇಕು.. ಆದ್ರೆ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ ಆದೇಶ ಪ್ರತಿ ನೀಡಬೇಕು ಎಂದು ಒತ್ತಾಯ ಕೇಳಿ ಬಂದಿದೆ. ಯಾರೋ ಕೆಲವ್ರು ಮಾಡಿದ ಆಕ್ರಮದಿಂದ ಪ್ರಾಮಾಣಿಕರಿಗೆ ತೊಂದರೆ ಆಗ್ತಿದೆ ಅಂತಾ ಅಸಮಾಧಾನ ಹೊರ ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.