ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ತನಿಖೆ ಪೂರ್ಣಗೊಳ್ಳುವ ಮುನ್ನವೇ ಪರೀಕ್ಷೆ ರದ್ದು ಮಾಡಿ, ಮರುಪರೀಕ್ಷೆಗೆ ಆದೇಶಿಸಿರುವುದು ಖಂಡನೀಯ. ಇದು ಈ ಅಕ್ರಮದಲ್ಲಿ ಭಾಗಿಯಾಗಿರುವ ಆಡಳಿತ ಪಕ್ಷದ ನಾಯಕರ ರಕ್ಷಣೆಯ ಪ್ರಯತ್ನವಾಗಿದ್ದು, ಇದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸಾಗಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರದವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ. ಅಮಿತ್ ಶಾ ಓಲೈಸಿ ಮಾತನಾಡಿದ್ದಕ್ಕೆ ಸಿಟಿ ರವಿಯನ್ನ ಗುಲಾಮ ಎಂದಿದ್ದು. ಸೋನಿಯಾ ಗಾಂಧಿ ಹಿಂದಿ ರಾಷ್ಟ್ರೀಯ ಭಾಷೆ ಅಂದಿದ್ದಾರಾ? ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾರಾ? ಪ್ರಜಾಪ್ರಭುತ್ವದಲ್ಲಿ ಯಾರಿಗೆ ಯಾರೂ ಗುಲಾಮರಲ್ಲ ಎಂದರು.
ಪಿಎಸೈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಾಯಿತು.ಹಾಗಾಗಿ ಈಗ ಅದಕ್ಷ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಪ್ರಕರಣದ ಬಗ್ಗೆ ತಿಳಿದಿರುವ ಮಾಹಿತಿ ಹಂಚಿಕೊಳ್ಳಿ ಎಂದಷ್ಟೇ ಹೇಳಿದ್ದು, ನೀವೇಕೆ ‘ನನ್ನನ್ನೇ ಆರೋಪಿಯಂತೆ ಬಿಂಬಿಸುತ್ತಿದ್ದಾರೆʼ ಎಂದು ಗೋಳಾಡುತ್ತಿದ್ದೀರಿ? ಅಂತಾ ಬಿಜೆಪಿ ಪ್ರಶ್ನಿಸಿದೆ.
ಪಿಎಸ್ಐ ನೇಮಕಾತಿ ಅಕ್ರಮ ಜಾಲ ಬೆಳಕಿಗೆ ಬರುತ್ತಿದ್ದಂತೆ ಕಲಬುರಗಿಯಲ್ಲಿ ಸಿಐಡಿಯ ಒಂದು ತಂಡ ಕೆಲವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದೆ. ಮತ್ತೊಂದೆಡೆ ಬೆಂಗಳೂರಿನ ಸಿಐಡಿ ಪ್ರಧಾನ ಕಚೇರಿಯಲ್ಲಿ ಏ.25 ರಿಂದಲೂ ಪ್ರತಿದಿನ 50 ಅಭ್ಯರ್ಥಿಗಳನ್ನು ಸಿಐಡಿ ವಿಚಾರಣೆ ನಡೆಸುತ್ತಿದೆ.
ಪಿಎಸ್ಐ ಪರೀಕ್ಷೆ ಅಕ್ರಮದ ಕುರಿತಾಗಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ ಆಡಿಯೋ ಬಗ್ಗೆಯೂ ತನಿಖೆ ಆಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.