ಜಮ್ಮು-ಕಾಶ್ಮೀರದ ಪುಲ್ವಾಮಾದ ಸ್ಪೆಷಲ್ ಕರೆಕ್ಷನಲ್ ಹೋಂ, ಜಿಲ್ಲಾ ಕಾರಾಗೃಹ ಮತ್ತು ಕುಪ್ವಾರಾ ಮತ್ತು ಕಾರ್ಗಿಲ್ ಜಿಲ್ಲಾ ಕಾರಾಗೃಹಗಳಲ್ಲಿ ದಕ್ಷ ಕಾರ್ಯನಿರ್ವಹಣೆಗಾಗಿ 105 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ.
ನವದೆಹಲಿ: ಇಂದು ಛತ್ತೀಸ್ ಗಡ್ ದ ಕಾರ್ಮಿಕನನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ.ಶೋಪಿಯಾನ್ನಲ್ಲಿ ಟ್ರಕ್ ಚಾಲಕನನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸಿಆರ್ಪಿಎಫ್ ಪೋಸ್ಟ್ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮವಾಗಿ ಓರ್ವ ಸಿಆರ್ಪಿಎಫ್ ಸೈನಿಕನು ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಕಾಶ್ಮೀರದ ಪುಲ್ವಾಮಾದಲ್ಲಿ ಶಾಂತಿಯ ಸಂದೇಶ ಸಾರಲು ಮುಸ್ಲಿಮರು ಮಹಾ ಶಿವರಾತ್ರಿ ಹಿನ್ನಲೆಯಲ್ಲಿ 80 ವರ್ಷದ ಹಳೆಯ ದೇವಾಲಯವನ್ನು ನವೀಕರಿಸಲು ಪಂಡಿತರ ಜೊತೆ ಕೈ ಜೋಡಿಸಿ ಸೌಹಾರ್ಧತೆ ಮೆರೆದಿದ್ದಾರೆ. ಈ ದೇವಾಲಯವು ಅಚನ್ ಗ್ರಾಮದಲ್ಲಿದ್ದು, ಫೆಬ್ರವರಿ 14 ರಂದು ಕನಿಷ್ಠ 40 ಸಿಆರ್ಪಿಎಫ್ ಸೈನಿಕರ ಮೇಲೆ ನಡೆದ ಭಯೋತ್ಪಾದನಾ ದಾಳಿಯಿಂದ ಕೇವಲ 15 ಕಿ.ಮೀ ದೂರದಲ್ಲಿದೆ.
ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಸುಮಾರು 40 ಸಿಆರ್ಪಿಎಫ್ ಸೈನಿಕರು ಮೃತಪಟ್ಟ ಹಿನ್ನಲೆಯಲ್ಲಿ ಈಗ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈಗ ಭಯೋತ್ಪಾದಕರು ಹಾಗೂ ಅವರ ಬೆಂಬಲಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆನ್ನುವ ಕೂಗು ಸಹ ದೇಶದೆಲ್ಲೆಡೆ ವ್ಯಕ್ತವಾಗಿದೆ.
ಬರೋಬ್ಬರಿ 40 ಸಿಆರ್ಪಿಎಫ್ ಯೋಧರ ಹತ್ಯೆಗೈದಿದ್ದ ದಾಳಿಯ ಮಾಸ್ಟರ್ ಮೈಂಡ್ ರಷೀದ್ ಘಾಜಿ ಹಾಗೂ ಕಮರನ್ ಎಂಬ ಇಬ್ಬರು ಉಗ್ರರನ್ನು ಇಂದು ಬೆಳಿಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಎನ್ಕೌಂಟರ್ ಮಾಡಿದೆ ಎನ್ನಲಾಗಿದೆ.
ಪುಲ್ವಾಮಾದಲ್ಲಿ ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ ಕನಿಷ್ಠ 40 ಸಿಆರ್ಪಿಎಫ್ ಸಿಬ್ಬಂದಿ ಗುರುವಾರದಂದು ಮೃತಪಟ್ಟಿದ್ದರು ಈ ಹಿನ್ನಲೆಯಲ್ಲಿ ಈಗ ಪ್ರತಿಕ್ರಿಯಿಸಿರುವ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ (ಸಿಸಿಐ) ಕಾರ್ಯದರ್ಶಿ ಸುರೇಶ್ ಬಾಫ್ನಾ 2019 ರ ವಿಶ್ವಕಪ್ ನಲ್ಲಿ ಭಾರತ ತಂಡವು ಪಾಕ್ ವಿರುದ್ಧ ಆಡಕೂಡದು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.