ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ. ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ. ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ.
R Ashok: ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ವಿರುದ್ಧ ಆರ್. ಅಶೋಕ್ ಹೊಸ ಬಾಂಬ್. ಪೊಲೀಸ್ ಅಧಿಕಾರಗಳೇ ಮಾಹಿತಿ ನೀಡಿದ್ದಾರೆ ಎಂದ ಅಶೋಕ್. FSL ರಿಪೋರ್ಟ್ ಅವರ ಪರವಾಗಿ ಬರುವಂತೆ ಮಾಡ್ತಾರೆ. ಘಟನೆ ಹತ್ತಿರದ ವಿಡಯೋ ಕಳಿಸಿಲ್ಲ ಎಂದು ಅಶೋಕ್ ಆರೋಪ.
ಈ ಸರ್ಕಾರ ಕಳೆದ ಒಂಭತ್ತು ತಿಂಗಳಿಂದ ಅಲ್ಪಸಂಖ್ಯಾತರನ್ನು ಓಲೈಸುವ ನಿರ್ಧಾರಗಳನ್ನೇ ಮಾಡುತ್ತಿದೆ. ಮತಕ್ಕಾಗಿ ಸರ್ಕಾರದ ಆಸ್ತಿಗಳನ್ನು ಅಲ್ಪಸಂಖ್ಯಾತರ ಇಲಾಖೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಆರ್ ಅಶೋಕ್ ಆಪಾದಿಸಿದ್ದಾರೆ.
Opposition Leader R. Ashoka Statement: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಒಳಗೆ ದೇಶದ್ರೋಹದ ಚಟುವಟಿಕೆ ನಡೆದಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಲಾಗಿದೆ. ಗೃಹ ಸಚಿವರಿಗೆ ಬೇರೆ ದೇಶಗಳಿಂದಲೂ ಜನರು ಕರೆ ಮಾಡಿ ಈ ಬಗ್ಗೆ ವಿಚಾರಿಸುತ್ತಿದ್ದಾರೆ.
ಈಗಾಗಲೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಕಾವೇರಿ ನೀರನ್ನ ಬೇಕಾಬಿಟ್ಟಿ ತಮಿಳುನಾಡಿಗೆ ಹರಿಸಿದ ನಾಡದ್ರೋಹಿ ಸರ್ಕಾರ ಈಗ ಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಸಾವಿರಾರು ರೂ. ತೆತ್ತುವ ಪರಿಸ್ಥಿತಿ ತಂದಿಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಆಶೋಕ್ ಹೇಳಿದರು.
ಕಾಂಗ್ರೆಸ್ ಸರ್ಕಾರ ಕೇವಲ 17 ಕೋಟಿ ರೂ. ಮೀಸಲಿಟ್ಟಿದ್ದು, ಸುಮಾರು 90% ಅನುದಾನ ಕಡಿತವಾಗಿದೆ. ಇದೇ ಕಾಂಗ್ರೆಸ್ ನಾಯಕರು ತೋರುವ ಪ್ರೀತಿ. ಅದೇ ವಕ್ಫ್ ಮಂಡಳಿಗೆ 100 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ಕಳೆದ ಬಜೆಟ್ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಯಿಂದ ಹಣ ಕಡಿತಗೊಳಿಸಲಾಗಿದೆ. ಈ ಬಗ್ಗೆಯೂ ಸರ್ಕಾರ ಉತ್ತರ ನೀಡಿಲ್ಲ. ರೈತರಿಗೆ ನೀಡುವ ಸಹಾಯಧನದ ಬಗ್ಗೆಯೂ ಪ್ರತಿಕ್ರಿಯೆ ನೀಡದೆ ಕಾಗೆ ಗುಬ್ಬಕ್ಕ ಕಥೆ ಹೇಳಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
ರೈತರಿಗೆ ನೀಡಬೇಕಿದ್ದ ಪ್ರೋತ್ಸಾಹ ಧನಕ್ಕಾಗಿ 2019 ರಿಂದ ಇಲ್ಲಿಯವರೆಗೆ 1178 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಈ ವರ್ಷ 1172 ಕೋಟಿ ರೂ.ಗಳಲ್ಲಿ 971 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ 3.00 ರೂ.ಗಳಿಂದ 5. ರೂ.ಗಳಿಗೆ ಪ್ರೋತ್ಸಾಹ ಧನ ಹೆಚ್ಚಿಸಿದ್ದು ನಮ್ಮ ಸರ್ಕಾರ ಎಂದರು.
ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನಾವು ಕೊಟ್ಟಿದ್ದು 408.02 ಕೋಟಿ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ 880.65 ಕೋಟಿ ಸೇರಿ ಒಟ್ಟು 1288.67 ಕೋಟಿ ಕೊಟ್ಟೆವು. ಆದರೆ ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಕೊಟ್ಟ ವಿದ್ಯಾರ್ಥಿ ವೇತನ ಕೇವಲ 650.78 ಕೋಟಿ ಮಾತ್ರ ಎಂದು ದಾಖಲೆ ತೋರಿಸಿ ಹೇಳಿದರು.
R Ashok Statement: ಕಾಂಗ್ರೆಸ್ ಸರ್ಕಾರದ ಬಜೆಟ್ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು, ಬಜೆಟ್ ತಯಾರಿಕೆ ಎನ್ನುವುದು ಗಂಭೀರ ಹಾಗೂ ಪವಿತ್ರವಾದ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘ಅಡ್ಡಕಸುಬಿʼ ಬಜೆಟ್’ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ಹೇಳಿದ್ದಾರೆ.
ತುಳಿತಕ್ಕೊಳಗಾದ ದಲಿತರಿಗೆ ಮೀಸಲಿಟ್ಟ 11,400 ಕೋಟಿ ರೂಪಾಯಿಯನ್ನು ಬೇರೆ ಕಡೆಗೆ ಬಳಸಿದ್ದಾರೆ. ಹಿಂದುಳಿದವರ ಚಾಂಪಿಯನ್ ಎಂದು ಹೇಳಿಕೊಂಡು ಈ ರೀತಿ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ವಿರುದ್ಧ ಗುಡುಗಿದರು.
Opposition leader R Ashok: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಸರ್ಕಾರದ ಮೇಲೆ 40% ಕಮಿಶನ್’ನ ಗುರುತರ ಆರೋಪ ಮಾಡಿದ್ದಾರೆ. ಕಮಿಶನ್ ಕೊಡುವವರಿಗೆ ಬಿಲ್ ಪಾವತಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಕೆ ಎಫ್ ಡಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಇದಕ್ಕೆ ಇಲಾಖೆಯ ನಿರ್ಲಕ್ಷ್ಯವೇ ಕಾರಣ. ಹೀಗಾಗಿ ಸಾವಿನ ನೈತಿಕ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆರ್ ಅಶೋಕ್ ಒತ್ತಾಯಿಸಿದ್ದಾರೆ
ಕೇರಳದಲ್ಲಿ ಕೂಡ ಇದೇ ಮಾದರಿಯಲ್ಲಿ ಜಮೀನು ನೀಡಲಾಗಿದೆ. ನಾನು ಕೈಗೊಂಡ ಕ್ರಮದಿಂದ ಸರ್ಕಾರಕ್ಕೆ 200-300 ಕೋಟಿ ರೂ. ಆದಾಯ ಬರುತ್ತದೆ. ಕೂಡಲೇ ಸರ್ಕಾರ ಮತ್ತೆ ಲೀಸ್ಗೆ ಜಮೀನು ನೀಡಬೇಕು. ಇಲ್ಲವಾದರೆ ಬೆಳೆಗಾರರು ಹೋರಾಟ ಮಾಡಲಿದ್ದಾರೆ. ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.