ಹಿಂಸಾಚಾರ ಪೀಡಿತ ರಾಜಸ್ಥಾನದ ಕರೌಲಿಯಲ್ಲಿ ಕರ್ಫ್ಯೂ ಅನ್ನು ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದೆ. ಆದರೆ ಶುಕ್ರವಾರದಿಂದ ಮೂರು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗುವುದು ಎನ್ನಲಾಗಿದೆ.
ರಾಜ್ಯದ ಎಲ್ಲಾ ಶಾಸಕರಿಗೆ ಇಪೋನ್ ಉಡುಗೊರೆ ನೀಡಲು ಮುಂದಾಗಿದ್ದ ಅಶೋಕ್ ಗೆಹಲೋಟ್ (Ashok Gehlot) ನೇತೃತ್ವದ ಸರ್ಕಾರದ ನಿರ್ಧಾರವನ್ನು ಬಿಜೆಪಿ ಶಾಸಕರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.ಈ ಹಿನ್ನಲೆಯಲ್ಲಿ ಈಗ ಕಾಂಗ್ರೆಸ್ ಸರ್ಕಾರಕ್ಕೆ ಶಾಸಕರ ನಿರ್ಧಾರದಿಂದಾಗಿ ಮುಜುಗುರ ಉಂಟಾಗಿದೆ.ಇದು ರಾಜ್ಯದ ಬೊಕ್ಕಸಕ್ಕೆ ಹೊರೆಯನ್ನು ಉಂಟು ಮಾಡಲಿದೆ ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ.
74 ನೇ ಸೇನಾ ದಿನಾಚರಣೆಯ ಅಂಗವಾಗಿ, ಖಾದಿಯಿಂದ ತಯಾರಿಸಿದ ವಿಶ್ವದ ಅತಿದೊಡ್ಡ ರಾಷ್ಟ್ರೀಯ ಧ್ವಜವಾದ `ಸ್ಮಾರಕ ರಾಷ್ಟ್ರೀಯ ಧ್ವಜ~ವನ್ನು ಶನಿವಾರ ರಾಜಸ್ಥಾನದ ಲಾಂಗೆವಾಲಾದ ಭಾರತ-ಪಾಕಿಸ್ತಾನ ಗಡಿಯಲ್ಲಿ ಪ್ರದರ್ಶಿಸಲಾಯಿತು.1971 ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಕೇಂದ್ರ ಹಂತವು ಲೋಂಗೆವಾಲಾ ಆಗಿತ್ತು.
ರಾಜಸ್ಥಾನದ ನಗೌರ್ ಜಿಲ್ಲೆಯ ಜಸ್ನಗರ ಗ್ರಾಮದಲ್ಲಿ ಪಾರಿವಾಳಗಳು ತಮ್ಮ ಹೆಸರಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಹೊಂದಿವೆ. ಈ ಪಾರಿವಾಳಗಳ ಹೆಸರಿನಲ್ಲಿ 27 ಅಂಗಡಿಗಳು, 126 ಬಿಗೆ ಭೂಮಿ ಮತ್ತು ಅವರ ಬ್ಯಾಂಕ್ ಖಾತೆಗಳಲ್ಲಿ ಸುಮಾರು 30 ಲಕ್ಷ ರೂ. ಹಣ ಹೊಂದಿವೆ.
ರಾಜಸ್ಥಾನದಲ್ಲಿ ಶನಿವಾರ (ಡಿಸೆಂಬರ್ 25) ದಂದು 21 ಹೊಸ 'ಓಮಿಕ್ರಾನ್' ಪ್ರಕರಣಗಳು ವರದಿಯಾಗಿದ್ದು, COVID-19 ನ ಹೊಸ ರೂಪಾಂತರದಿಂದ ಸೋಂಕಿತರ ಸಂಖ್ಯೆ 43 ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಈ ವರ್ಷದ ಆರಂಭದಲ್ಲಿ 15 ವರ್ಷದ ಬಾಲಕಿಯ ಮೇಲೆ ಒಂಬತ್ತು ದಿನಗಳ ಕಾಲ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 13 ಜನರಿಗೆ ತಲಾ 20 ವರ್ಷ ಜೈಲು ಮತ್ತು ಇತರ ಇಬ್ಬರಿಗೆ ತಲಾ ನಾಲ್ಕು ವರ್ಷಗಳ ಶಿಕ್ಷೆಯನ್ನು ಕೋಟಾ ನ್ಯಾಯಾಲಯ ಶನಿವಾರ ವಿಧಿಸಿದೆ.
ಬಹು ನಿರೀಕ್ಷಿತ ಕ್ಯಾಬಿನೆಟ್ ಪುನರ್ರಚನೆಗೆ ಮುಂಚಿತವಾಗಿ, ರಾಜಸ್ಥಾನದ ಮಂತ್ರಿ ಮಂಡಳಿಯ ಎಲ್ಲಾ ಸಚಿವರು ಶನಿವಾರ (ನವೆಂಬರ್ 20, 2021) ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.ಭಾನುವಾರ ನಡೆಯಲಿರುವ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಸಭೆಗೆ ಮುನ್ನ ಈ ಬೆಳವಣಿಗೆ ನಡೆದಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾದ ಒಂದು ದಿನದ ನಂತರ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಭಾನುವಾರ ರಾಜಸ್ಥಾನದ ಹನುಮಾನ್ಗಡದಲ್ಲಿ ದಲಿತ ವ್ಯಕ್ತಿಯನ್ನು ಹೊಡೆದು ಸಾಯಿಸಿರುವ ವಿಚಾರದಲ್ಲಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಏಕೆ ಮೌನವಾಗಿದೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪ್ರಶ್ನಿಸಿದ್ದಾರೆ.ಇದೆ ವೇಳೆ ಅವರು ಲಖಿಂಪುರ್ ಖೇರಿಯ ಹಿಂಸಾಚಾರದ ಘಟನೆ ವಿಚಾರದಲ್ಲಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಕಾರ್ಯಶೈಲಿಯ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಾಸೆನ್ ಗೆಹ್ಲೋಟ್ ಅವರಿಗೆ ಜಾರಿ ನಿರ್ದೇಶನಾಲಯವು ರಸಗೊಬ್ಬರ ಅಕ್ರಮ ರಫ್ತು ಪ್ರಕರಣದಲ್ಲಿ ವಿಚಾರಣೆಗಾಗಿ ಮತ್ತೊಮ್ಮೆ ಸಮನ್ಸ್ ನೀಡಿದೆ.ಅವರಿಗೆ ನಾಳೆ ದೆಹಲಿಯ ತನಿಖಾ ಸಂಸ್ಥೆಯ ಕಚೇರಿಗೆ ಬರುವಂತೆ ಸೂಚಿಸಲಾಗಿದೆ.
ರಾಜಸ್ಥಾನವು ಗುರುವಾರ ದೀಪಾವಳಿ ಸಮಯದಲ್ಲಿ ರಾಜ್ಯಾದ್ಯಂತ ಎಲ್ಲಾ ರೀತಿಯ ಪಟಾಕಿಗಳ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿದೆ.ಈ ನಿರ್ಬಂಧವು ಮುಂದಿನ ವರ್ಷದವರೆಗೆ ಇರಲಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.