Ayodhya Ram Mandir: ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, 2024 ರ ಜನವರಿ 14 ರಿಂದ 26 ರ ನಡುವೆ ಯಾವುದೇ ದಿನದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ಉದ್ಘಾಟನೆಯಾಗಲಿದೆ ಎನ್ನಲಾಗಿದೆ. ಇದರೊಂದಿಗೆ ಶತಮಾನಗಳ ಭಕ್ತರ ನಿರೀಕ್ಷೆಗೆ ತೆರೆ ಬೀಳಲಿದೆ.
Ram Mandir Construction : ಧನ್ನಿಪುರ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) ಶುಕ್ರವಾರ ಅಂತಿಮ ಒಪ್ಪಿಗೆ ನೀಡಿದೆ. ಬಾಬರಿ ಮಸೀದಿ-ರಾಮ ಜನ್ಮಭೂಮಿ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಸರ್ಕಾರವು ಅಯೋಧ್ಯೆ ಜಿಲ್ಲೆಯ ಧನ್ನಿಪುರ ಗ್ರಾಮದಲ್ಲಿ ಐದು ಎಕರೆ ಭೂಮಿಯನ್ನು ನೀಡಿತ್ತು, ಅದರಲ್ಲಿ 'ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್' ಟ್ರಸ್ಟ್ ಮಸೀದಿ, ಆಸ್ಪತ್ರೆಯನ್ನು ನಿರ್ಮಿಸುತ್ತದೆ. ಸಂಶೋಧನಾ ಸಂಸ್ಥೆ, ಸಮುದಾಯ ಅಡುಗೆ ಕೋಣೆ ಮತ್ತು ಗ್ರಂಥಾಲಯ ನಿರ್ಮಾಣವಾಗಲಿದೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗ್ತಿರೋ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲು ಕರ್ನಾಟಕದಿಂದ ಬಹು ಅಪರೂಪದ ಮೂರ್ತಿ ಒಂದನ್ನ ನೀಡಲಾಗ್ತಿದೆ. ಅದರೊಂದಿಗೆ ಪುಣ್ಯ ಜಲವನ್ನೂ ಸಹ ಕಳಿಸಲಾಗ್ತಿದೆ. ವಿಶ್ವಹಿಂದೂ ಪರಿಷತ್ ಬಜರಂಗದಳದಿಂದ ತೋರಣಹಳ್ಳಿಯಲ್ಲಿ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಬೈಠಕ್ ನಡೆಸಲಾಯ್ತು. ಬೈಠಕ್ನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ರಾಷ್ಟ್ರೀಯ ಸಹ ಮಂತ್ರಿ ಗೋಪಾಲ್ಜೀ ಹಾಗೂ ವಿವಿಧ ಮಠಾಧೀಶರು ಭಾಗಿಯಾಗಿದ್ದರು.
ಹಲವಾರು ದಶಕಗಳಿಂದ ವಿವಾದಕ್ಕಿಡಾಗಿದ್ದ ರಾಮಮಂದಿರ ವಿಚಾರ ಈಗ ಬಗೆಹರಿದಿದ್ದರಿಂದಾಗಿ ಅಲ್ಲಿ ಈಗ ಭವ್ಯ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ.ಈಗ ಈ ಮಂದಿರಕ್ಕೆ ವಿಶೇಷವಾಗಿ ಸಾಲಿಗ್ರಾಮದ ಕಲ್ಲುಗಳನ್ನು ಬಳಸಲಾಗುತ್ತಿದೆ.ಈಗ ಮಂದಿರ ನಿರ್ಮಾಣಕ್ಕೆ ಸಾಲಿಗ್ರಾಮದ ಕಲ್ಲುಗಳನ್ನು ಬಳಸುವುದಕ್ಕೆ ಕಾರಣ ಏನು ಎನ್ನುವುದನ್ನು ತಿಳಿಯೋಣ ಬನ್ನಿ..
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು “ಮುಂದಿನ ಸಂಕ್ರಾಂತಿ ಒಳಗೆ ರಾಮಮಂದಿರದ ಒಂದು ಹಂತದ ಕಾಮಗಾರಿ ಮುಗದಿರತ್ತೆ.ಒಂದು ಕಾಲಕ್ಕೆ ರಾಮಮಂದಿರ ನಿರ್ಮಾಣ ಅನ್ನೋದು ಕನಸಾಗಿತ್ತು.ಆದ್ರೆ ಇನ್ನೊಂದು ವರ್ಷದಲ್ಲಿಕಾಮಗಾರಿ ಮುಗದ ಹೋಗುತ್ತೆ ಮತ್ತು ರಾಮಮಂದಿರ ನಿರ್ಮಾಣವಾಗುತ್ತೆ, ಆದರೆ ಮುಂದೇನು ಎಂದು ಅವರು ಪ್ರಶ್ನಿಸುತ್ತಲೇ ಮುಂದೆ ರಾಮ ರಾಜ್ಯ ನಿರ್ಮಾಣವಾಗಬೇಕೆಂದು ಆಶಿಸಿದರು.
Intelligence Alert for Ram Mandir:ರಾಮಮಂದಿರದ ಮೇಲೆ ದಾಳಿ ನಡೆಸಲು ಭಯೋತ್ಪಾದಕರ ಸಂಚು ರೂಪಿಸಿರುವುದನ್ನು ಗುಪ್ತಚರ ಬಯಲು ಮಾಡಿದೆ. ಆತ್ಮಾಹುತಿ ಬಾಂಬರ್ ಮೂಲಕ ದಾಳಿ ನಡೆಸಲು ಭಯೋತ್ಪಾದಕರು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.
ಜನವರಿ 1, 2024 ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಸಿದ್ಧವಾಗಲಿದೆ ಎಂದು ಘೋಷಿಸಿದ್ದಕ್ಕಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಭಾನುವಾರ (ಜನವರಿ 8, 2023) ದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡರು.
ಕರ್ನಾಟಕದ ರಾಮನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ..ಸಿ ಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಬೆಂಗಳೂರಿ ಆಗಮಿಸಿರುವ 150 ಯಾತ್ರಾರ್ಥಿಗಳ ತಂಡವು ಇಲ್ಲಿ ಮೈದಾಳುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕೆ 1.50 ಕೆ.ಜಿ. ತೂಕದ ಬೆಳ್ಳಿ ಇಟ್ಟಿಗೆ, ಸೀತಾ ಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಸಮರ್ಪಿಸಿತು.
ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಚಿವರ ನೇತೃತ್ವದಲ್ಲಿ ಭಕ್ತರ ತಂಡವು ರಾಮ ಮಂದಿರ ಆವರಣಕ್ಕೆ ಆಗಮಿಸಿತು. ನಂತರ, ಇಲ್ಲಿರುವ ಕನ್ನಡಿಗ ಅರ್ಚಕರಾದ ಗೋಪಾಲ್ ಭಟ್ ಮತ್ತು ಅವರ ತಂಡವು ರಾಮನಗರದ ತಂಡವು ಭಕ್ತಿ-ಗೌರವಗಳೊಂದಿಗೆ ತಂದಿದ್ದ ಕಾಣಿಕೆಗಳಿಗೆ ವಿಧಿಬದ್ಧವಾಗಿ ಪೂಜೆ ಸಲ್ಲಿಸಿದರು.
ದೀಪಾವಳಿ ಅಂಗವಾಗಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಂತರ ದೇವಾಲಯ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದ್ರು.
ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಮಮಂದಿರ ಟ್ರಸ್ಟ್ನ ಎರಡು ದಿನಗಳ ಸಭೆ ಇಂದು ನಡೆಯಲಿದೆ. ಸಭೆಗೂ ಮುನ್ನ ಮಂದಿರ ನಿರ್ಮಾಣದ ಕುರಿತು ಮಾಹಿತಿ ನೀಡುವ ವಿಡಿಯೋವನ್ನು ಟ್ರಸ್ಟ್ನಿಂದ ಬಿಡುಗಡೆ ಮಾಡಲಾಗಿದೆ.
ಇತ್ತೀಚಿನ ದಿನಗಳಲ್ಲಿ, ದಕ್ಷಿಣದ ಸ್ಟಾರ್ ನಟ ಯಶ್ ಹಳದಿ ಕೇಸರಿ ಬಣ್ಣದ ಶಾಲು ಧರಿಸಿ ಹಣೆಗೆ ತಿಲಕವನ್ನು ಹಾಕುತ್ತಿರುವ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಇದು ಅಯೋಧ್ಯೆಯ ಚಿತ್ರ ಎಂದು ಹೇಳಲಾಗುತ್ತಿದೆ. ಇದೀಗ ಈ ಫೋಟೋದ ಸತ್ಯಾಂಶ ಬಯಲಿಗೆ ಬಂದಿದೆ.
ಮೊದಲು ಕೆತ್ತಿದ ಶಿಲಾನ್ಯಾಸ ನೆರವೇರಿಸಿ, ಗರ್ಭ ಗೃಹ ನಿರ್ಮಾಣಕ್ಕೆ ಚಾಲನೆ ನೀಡಿದರು. ಮಂದಿರ ನಿರ್ಮಾಣ ಯೋಜನೆಯ ನೇತೃತ್ವ ವಹಿಸಿರುವ ರಾಮ ಜನ್ಮಭೂಮಿ ಟ್ರಸ್ಟ್, ಕಳೆದ ವಾರ ರಾಜಸ್ಥಾನದ ಮಕ್ರಾನಾದ ಮಾರ್ಬಲ್ಗಳನ್ನು ಗರ್ಭ ಗೃಹ ನಿರ್ಮಾಣಕ್ಕೆ ಬಳಸಲಾಗುವುದು ಎಂದು ತಿಳಿಸಿತ್ತು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, 'ದೇಶದ ಪ್ರತಿಯೊಂದು ಮನೆಯವರು ರಾಮಮಂದಿರ ಟ್ರಸ್ಟ್ ಗೆ ದೇಣಿಗೆ ನೀಡಿದ್ದಾರೆ. ಇದು ಭಕ್ತಿಯ ವಿಷಯವಾಗಿದ್ದು, ಜನರ ನಂಬಿಕೆಯೊಂದಿಗೆ ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Cheque Bounce - ಇತ್ತೀಚೆಗಷ್ಟೇ ರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವಹಿಂದೂ ಪರಿಷತ್ ದೇಣಿಗೆ ಸಂಗ್ರಹ ಅಭಿಯಾನ ನಡೆಸಿತ್ತು. ಈ ದೇಣಿಗೆ ಸಂಗ್ರಹ ಕಾರ್ಯಕ್ರಮದಲ್ಲಿ ಪಡೆಯಲಾಗಿದ್ದ ಸುಮಾರು 22 ಕೋಟಿ ರೂ. ಮೌಲ್ಯದ 15000 ಚೆಕ್ ಗಳು ಬೌನ್ಸ್ ಆಗಿವೆ.
ರಾಮ ಭಕ್ತರಿಗೆ ಇದು ಸಿಹಿ ಸುದ್ದಿ. ಪ್ರಪಂಚದ ಯಾವುದೇ ಮೂಲೆಯಿಂದಲೂ ರಾಮಭಕ್ತರು ಇನ್ನು ವಿಮಾನದಲ್ಲಿ ಅಯೋಧ್ಯೆಗೆ ಬರಬಹುದು. ಅಸಂಖ್ಯ ಭಕ್ತರು ಕಾತರಿಸುತ್ತಿರುವ ಆ ದಿನಗಳು ಶೀಘ್ರದಲ್ಲೇ ನನಸಾಗಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.