Tripura Ulto Rath Yatra tragedy: ಭಗವಾನ್ ಜಗನ್ನಾಥನ ‘ಉಲ್ಟಾ ರಥ ಯಾತ್ರೆ’ ಉತ್ಸವದ ವೇಳೆ ಸಂಜೆ 4.30ರ ಸುಮಾರಿಗೆ ಈ ಘಟನೆ ನಡೆದಿತ್ತು. ಹೈಟೆನ್ಷನ್ ತಂತಿ ತಗುಲಿ ದುರಂತ ಸಂಭವಿಸಿತ್ತು.
Tripura Gang Rape: ಫೇಸ್ಬುಕ್ನಲ್ಲಿ ಹುಡುಗಿ ಸ್ನೇಹ ಬೆಳೆಸಿದ್ದ ಪ್ರಮುಖ ಆರೋಪಿ ಜೊತೆ ಆತನ ಇಬ್ಬರೂ ಸ್ನೇಹಿತರು ಸೇರಿ ಅಪ್ರಾಪ್ತ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕಾರಿನಿಂದ ಹೊರಕ್ಕೆ ಎಸೆದ ಘಟನೆ ನಡೆದಿದೆ.
ಮಾಣಿಕ್ ಸಹಾ ಮತ್ತೆ ತ್ರಿಪುರಾದ ಮುಖ್ಯಮಂತ್ರಿಯಾಗಲಿದ್ದಾರೆ. ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮಾಹಿತಿಯ ಪ್ರಕಾರ ಮಾರ್ಚ್ 8ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ಮೋದಿ ಕೂಡ ಭಾಗವಹಿಸಲಿದ್ದಾರೆ.
ಈಶಾನ್ಯ ರಾಜ್ಯಗಳ ಎಕ್ಸಿಟ್ ಪೋಲ್ ಭವಿಷ್ಯ ಕುತೂಹಲವನ್ನು ಹೆಚ್ಚಿಸಿದೆ. ಎಕ್ಸಿಟ್ ಪೋಲ್ ಸಮೀಕ್ಷೆಗಳ ಪ್ರಕಾರ, ತ್ರಿಪುರಾ, ನಾಗಾಲ್ಯಾಂಡ್ನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧ್ಯತೆ ಇದ್ದು, ಮೇಘಾಲಯದಲ್ಲಿ ಮತ್ತೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಫಲಿತಾಂಶವನ್ನು ಮಾರ್ಚ್ 2 ರಂದು ಪ್ರಕಟಿಸಲಾಗುತ್ತದೆ.ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮೂರು ಈಶಾನ್ಯ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಸಂಸ್ಥೆ ಪ್ರಕಟಿಸಿದೆ.
ಇದೀಗ ತ್ರಿಪುರಾ ಉಪಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಹಾಗೂ ತ್ರಿಪುರಾದ ಮೊದಲ ಕೇಂದ್ರ ಸಚಿವೆ ಎಂದೇ ಖ್ಯಾತಿ ಪಡೆದಿರುವ ಪ್ರತಿಮಾ ಭೌಮಿಕ್ ಹೆಸರು ಸಿಎಂ ರೇಸ್ ನಲ್ಲಿ ಕೇಳಿ ಬರುತ್ತಿದೆ.
Pradhan Mantri Awaas Yojana - Gramin: ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY Scheme)- ಮೊದಲ ಕಂತನ್ನು ಗ್ರಾಮೀಣ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ.
ತ್ರಿಪುರಾ ಕಾಂಗ್ರೆಸ್ ನಾಯಕ ಪಿಜುಶ್ ಕಾಂತಿ ಬಿಸ್ವಾಸ್ ಅವರು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಈಗ ಬಿಸ್ವಾಸ್ ಅವರ ರಾಜೀನಾಮೆಯು ಈಶ್ಯಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ಗೆ ಮತ್ತೊಂದು ಹೊಡೆತವಾಗಿದೆ.
ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಅವರು ರಾಜ್ಯದಲ್ಲಿ ಕನಿಷ್ಠ 80 ರಷ್ಟು ಮನೆಗಳು ಸ್ವಾಮಿ ವಿವೇಕಾನಂದರ ಚಿತ್ರಗಳನ್ನು ಮತ್ತು ಅವರ ಸಂದೇಶಗಳನ್ನು ಅವರ ಮನೆಯಲ್ಲಿ ನೇತಾಕಿದರೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇನ್ನೂ 30-35 ವರ್ಷಗಳ ಕಾಲ ಅಧಿಕಾರದಲ್ಲಿ ಉಳಿಯುತ್ತದೆ ಎಂದು ಹೇಳಿದರು.
ತ್ರಿಪುರಾದಲ್ಲಿ ಅಪ್ಪಳಿಸಿದ ಆಲಿಕಲ್ಲು ಮಳೆಯಿಂದ 5,500 ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ ಮತ್ತು ಮೂರು ಜಿಲ್ಲೆಗಳ ಒಟ್ಟು 4,200 ಜನರು ನಿರಾಶ್ರಿತರಾಗಿದ್ದಾರೆ ಎಂದು ಅಧಿಕೃತ ವರದಿ ತಿಳಿಸಿದೆ.
ಮೇಕೆ ಕಳ್ಳತನ ಪ್ರಕರಣದಲ್ಲಿ ಕೊನೆಗೂ 41 ವರ್ಷಗಳ ನಂತರ ತ್ರಿಪುರಾದ 58 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಶ್ಚಿಮ ತ್ರಿಪುರದ ಮೇಖ್ಲಿಪರಾ ಚಹಾ ಎಸ್ಟೇಟ್ ಪ್ರದೇಶದಿಂದ ಚಹಾ ತೋಟ ಕೆಲಸಗಾರ ಬಚು ಕೌಲ್ ಅವರನ್ನು ಶುಕ್ರವಾರ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ತ್ರಿಪುರಾದ ದಂಗೆಕೋರರ ಗುಂಪಿನೊಂದಿಗೆ ಕೇಂದ್ರ ಸರ್ಕಾರವು ಶನಿವಾರದಂದು ಶಾಂತಿ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ ಸಂಘಟನೆಯು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಸೇರಲು ಒಪ್ಪಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.