ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ಮುಸುಕಿನ ಎಚ್ಚರಿಕೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಾತನಾಡಲು ಆರಂಭಿಸಿದರೆ ಭೂಕಂಪ ಸಂಭವಿಸಲಿದೆ ಎಂದು ಶನಿವಾರ ಹೇಳಿದ್ದಾರೆ.
ಗುಜರಾತಿಗಳು ಮತ್ತು ರಾಜಸ್ಥಾನಿಗಳನ್ನು ಮಹಾರಾಷ್ಟ್ರದಿಂದ ಹೊರಕ್ಕೆ ಕರೆದೊಯ್ದರೆ ರಾಜ್ಯದಲ್ಲಿ ಹಣ ಉಳಿಯುವುದಿಲ್ಲ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ವಿರುದ್ಧ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಬೆಂಬಲಿಗರೊಬ್ಬರಾದ ಶಾಸಕ ಅಬ್ದುಲ್ ಸತ್ತಾರ್ ಅವರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಿಂಧೆ, ಈ ಎಲ್ಲಾ 50 ಶಾಸಕರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ನನಗೆ ಖಾತ್ರಿಯಿದೆ. ಅವರಲ್ಲಿ ಯಾರಾದರೂ ಸೋತರೆ ನಾನು ರಾಜಕೀಯ ತ್ಯಜಿಸುತ್ತೇನೆ. ಮುಂದಿನ ರಾಜ್ಯ ಚುನಾವಣೆಯಲ್ಲಿ ತಮ್ಮ ಶಿವಸೇನೆ ಮತ್ತು ಮಿತ್ರ ಪಕ್ಷ ಭಾರತೀಯ ಜನತಾ ಪಕ್ಷವು ಜಂಟಿಯಾಗಿ 200 ಸ್ಥಾನಗಳನ್ನು ಗೆಲ್ಲಲಿದೆ ಎಂದರು.
ಮಹಾರಾಷ್ಟ್ರದ 16 ಬಂಡಾಯ ಶಾಸಕರ ಅನರ್ಹತೆ ಸಂಬಂಧಿಸಿದಂತೆ ಇಂದು (ಜುಲೈ 11) ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಶಿವಸೇನೆಯು, ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣಕ್ಕೆ ಸೇರುತ್ತದೆಯೋ ಎಂಬುದನ್ನು ನ್ಯಾಯಾಲಯದ ನಿಲುವು ಸೂಚಿಸುತ್ತದೆ. ಈ ಪ್ರಕರಣದಲ್ಲಿ ಶಿಂಧೆ ಬಣ, ಉದ್ಧವ್ ಠಾಕ್ರೆ ಬಣ ಸೇರಿ 4 ಅರ್ಜಿಗಳು ದಾಖಲಾಗಿದ್ದು, ವಿಪ್ನಿಂದ ಹಿಡಿದು ಶಿವಸೇನೆ ಅಧ್ಯಕ್ಷರವರೆಗೂ ಪಕ್ಷದ ಭವಿಷ್ಯ ನಿರ್ಧಾರವಾಗಲಿದೆ.
ಶಿವಸೇನಾ ನಾಯಕನ ಸ್ಥಾನದಿಂದ ಸಿಎಂ ಏಕನಾಥ್ ಶಿಂಧೆ ವಜಾ ಶಿವಸೇನೆ ಪಕ್ಷದಿಂದ ವಜಾ ಮಾಡಿದ ಮುಖಂಡ ಉದ್ಧವ್ ಠಾಕ್ರೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಶಿಂಧೆ ಅಮಾನತು ಪಕ್ಷ ಸಂಘಟನೆಯಲ್ಲಿನ ಮುಖ್ಯಸ್ಥನ ಸ್ಥಾನದಿಂದ ಶಿಂಧೆ ವಜಾ
ನಿನ್ನೆ ದಿನ ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿಕೂಟ ಸರ್ಕಾರ ಪತನಗೊಂಡಿರುವ ಬೆನ್ನಲ್ಲೇ ಇಂದು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಸಿಂಧೆ ನೇಮಕವಾಗಿರುವ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಆದಿತ್ಯ ಠಾಕ್ರೆ 'ಪಕ್ಷದಲ್ಲಿ ಹೆಚ್ಚಿನ ಆಕಾಂಕ್ಷೆಯನ್ನು ಹೊಂದಿರುವ ಜನರು ಇದ್ದಾರೆ ಎನ್ನುವುದು ನನಗೆ ಮತ್ತು ನಮ್ಮ ತಂದೆಗೆ ತಿಳಿದಿತ್ತು ಎಂದು ಅವರು ಹೇಳಿದರು.
Maharashtra New CM Eknath Shinde: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಐತಿಹಾಸಿಕ ಅಂತ್ಯ ಕಂಡಿದೆ. ಶಿವಸೇನಾ ಮುಖಂಡ ಏಕನಾಥ್ ಸಿಂಧೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 7.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಖುದ್ದು ಮಹಾರಾಷ್ಟ್ರದ ಬಿಜೆಪಿ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಬಿಜೆಪಿ ನಾಯಕರು ಸಂಭ್ರಮಾಚರಣೆ ನಡೆಸಿದ್ದಾರೆ.. ಉದ್ಧವ್ ರಾಜೀನಾಮೆ ಬೆನ್ನಲ್ಲೇ ಕಮಲ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಖಾಸಗಿ ಹೋಟೆಲ್ನಲ್ಲಿ ಮಾಜಿ ಸಿಎಂ ಫಡ್ನವೀಸ್ಗೆ ಸಿಹಿ ತಿನ್ನಿಸಿ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.
15 ದಿನಗಳ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನವಾಗಿದೆ.. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಉದ್ಧವ್ ಫೇಸ್ಬುಕ್ ಲೈವ್ನಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ಇಂದು ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ವಿಶ್ವಾಸಮತ ಯಾಚನೆಗೂ ಮೊದಲೇ ರಾಜೀನಾಮೆ ಘೋಷಣೆ ಮಾಡಲಾಗಿದೆ.
ಜೂನ್ 30 ರಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಉದ್ಧವ್ ಠಾಕ್ರೆ ರಾಜಿನಾಮೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.